![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 1, 2024, 6:00 AM IST
ಬೆಂಗಳೂರು: ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಸಹಿತ ರಾಜ್ಯದ 44 ವಿವಿಧ ನಿಗಮ, ಮಂಡಳಿ, ಪ್ರಾಧಿಕಾರ, ಆಯೋಗಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನು ಮೋದಿಸಿದ್ದ ಪಟ್ಟಿಗೆ ಅಧಿಕೃತ ಮುದ್ರೆ ಬಿದ್ದಿದೆ.
ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಗಳನ್ನು ನೀಡಲಾಗಿತ್ತು. ಆದರೆ ಈ ಪೈಕಿ ಹಂಪನಪಗೌಡ ಬಾದರ್ಲಿ, ಬಸವನಗೌಡ ದದ್ದಲ್ ಮತ್ತಿತರ ಕೆಲ ವರು ಎರಡು ವರ್ಷಗಳ ಅಧಿಕಾರಾವಧಿ ಬೇಡ ಎನ್ನುವ ಮೂಲಕ ಸಚಿವ ಸ್ಥಾನಕ್ಕೆ ಪಟ್ಟು ಹಿಡಿಯುವ ಮುನ್ಸೂಚನೆ ನೀಡಿದ್ದಾರೆ. ಅಲ್ಲದೆ ಕ್ರೀಡಾ ಪ್ರಾಧಿ ಕಾರ, ಮಾಲಿನ್ಯ ನಿಯಂತ್ರಣ ಮಂಡಳಿಗಳ ನೇಮ ಕಾತಿಯಲ್ಲೂ ಎಡವಟ್ಟಾಗಿದ್ದು, ಕೆಲವು ಶಾಸಕರಿಗೆ ಸ್ಥಾನ ಕೊಟ್ಟು ಕಿತ್ತುಕೊಂಡಂತಾಗಿದೆ. ಇನ್ನು ಕೆಲವರಿಗೆ ಪರ್ಯಾಯ ವ್ಯವಸ್ಥೆಯನ್ನೂ ಸರಕಾರ ಕಲ್ಪಿಸಿದೆ.
ನಿಗಮ, ಮಂಡಳಿ, ಪ್ರಾಧಿಕಾರ, ವಿವಿಧ ಸಮಿತಿ ಗಳು ಸೇರಿ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ಕೊಟ್ಟಿದ್ದರು. ಅದರಂತೆ ಒಂದೊಂದೇ ನಿಗಮ-ಮಂಡಳಿಗಳಿಗೆ ನೇಮಕಾತಿಯನ್ನೂ ಮಾಡುವ ಪ್ರಕ್ರಿಯೆ ಚಾಲನೆ ನೀಡಲಾಗಿದೆ.
ಈಗ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ಸ್ಥಾನ
ಮಾನಗಳನ್ನು ನೀಡಲಾಗಿದೆ. ಈ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಬೆಂಬಲಿಗರಿಗೆ ಸಮಾನ ಹಂಚಿಕೆ ಮಾಡುವ ಪ್ರಯತ್ನ ನಡೆದಿದೆ. ಅಳೆದು-ತೂಗಿ ನೇಮಕ ಮಾಡಿದ್ದು, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಹುಮ್ಮಸ್ಸಿನಿಂದ ಕೆಲಸ ಮಾಡಲು ಸಹಾಯ ಆಗಲಿದೆ ಎಂಬ ಆಶಯ ಕಾಂಗ್ರೆಸ್ ವಲಯದಲ್ಲಿದೆ. ಕರಾವಳಿಯಿಂದ ಗೇರು ಅಭಿವೃದ್ಧಿ ನಿಗಮಕ್ಕೆ ಮಮತಾ ಗಟ್ಟಿ, ಮಂಗಳೂರು ನ. ಪ್ರಾಧಿಕಾರಕ್ಕೆ ಸದಾಶಿವ ಉಳ್ಳಾಲ್ ನೇಮಕಗೊಂಡಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.