ಇತ್ತ ಪ್ರಜ್ವಲ್ ಬೆಂಗಳೂರಿಗೆ, ಅತ್ತ ಎಚ್ಡಿಕೆ ಕುಟುಂಬ ರೆಸಾರ್ಟ್ಗೆ
Team Udayavani, May 31, 2024, 5:55 AM IST
ಬೆಂಗಳೂರು: ಇತ್ತ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನತ್ತ ಆಗಮಿಸಿದರೆ, ಅತ್ತ ಮಾಜಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಕಬಿನಿ ಹಿನ್ನೀರಿನ ಲ್ಲಿರುವ ರೆಸಾರ್ಟ್ಗೆ ತೆರಳಿದ್ದಾರೆ.
ಗುರುವಾರ ಮಧ್ಯಾಹ್ನ ಕುಟುಂಬ ಸಮೇತ ಜೆ.ಪಿ. ನಗರ ನಿವಾಸದಿಂದ ಹೊರಟ ಕುಮಾರಸ್ವಾಮಿ, ಲೋಕ ಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮುನ್ನ ಮರಳಲಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.
ಪ್ರಜ್ವಲ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿ ಮೊದಲ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದಿದ್ದರಲ್ಲದೆ, ಕೆಲವೇ ದಿನಗಳಲ್ಲಿ ಪ್ರಜ್ವಲ್ರನ್ನು ಪಕ್ಷದಿಂದ ಅಮಾನತು ಮಾಡಿದ್ದರು. ಇದಾದ ಬಳಿಕ ಸಹೋದರ ರೇವಣ್ಣರ ಬಂಧನ, ಬಿಡಗಡೆಯಂತಹ ಘಟನೆಗಳು ನಡೆದು ಇಡೀ ಕುಟುಂಬವೇ ಜರ್ಝರಿತಗೊಂಡಿತ್ತು. ರೇವಣ್ಣ ಪರ ನಿಲ್ಲಬೇಕೋ? ಸಂತ್ರಸ್ತೆಯರ ಪರ ನಿಲ್ಲಬೇಕೋ? ಪ್ರಜ್ವಲ್ನನ್ನು ಕರೆಸುವುದು ಹೇಗೆ ಹೀಗೆ ನಿತ್ಯದ ಜಂಜಾಟದಿಂದ ಯಾವುದರ ಕಡೆಗೂ ಗಮನ ಹರಿಸಲಾರದ ಸ್ಥಿತಿ ಇತ್ತು.
ದಿನನಿತ್ಯವೂ ಹೇಳಿಕೆ-ಪ್ರತಿಹೇಳಿಕೆ ಗಳಿಂದ ಬೇಸತ್ತಿದ್ದ ಕುಮಾರಸ್ವಾಮಿ, ಎಲ್ಲಿದ್ದರೂ ಬಂದು ಎಸ್ಐಟಿ ತನಿಖೆ ಎದುರಿಸುವಂತೆ ಪ್ರಜ್ವಲ್ಗೆ ಕರೆ ಕೊಟ್ಟಿ ದ್ದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕೂಡ ಎಚ್ಚರಿಕೆ ಪತ್ರ ಬರೆದಿದ್ದರು. ಅತ್ತ ಪ್ರಜ್ವಲ್ ವಿಮಾನ ಏರಿದ್ದು ಖಚಿತವಾಗುತ್ತಿದ್ದಂತೆ ಕುಮಾರಸ್ವಾಮಿ ಕುಟುಂಬ ಸಮೇತ ರೆಸಾರ್ಟ್ಗೆ ತೆರಳಿದರು. ಜತೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖೀಲ್ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಕೂಡ ಕುಮಾರಸ್ವಾಮಿ ಜತೆಗಿದ್ದಾರೆ.
ಜೆ.ಪಿ. ನಗರ ನಿವಾಸದಿಂದ ಹೊರಟಾಗ ಕೇರಳದ ವಯನಾಡಿನಲ್ಲಿರುವ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡುತ್ತಾರೆ ಎನ್ನುವ ವದಂತಿ ಹರಡಿತ್ತು. ಅಷ್ಟರಲ್ಲಿ ಕೇರಳದ ರಾಜರಾಜೇಶ್ವರ ದೇಗುಲದಲ್ಲಿ ನನ್ನ ವಿರುದ್ಧ ಪ್ರಭಾವಿ ರಾಜಕಾರಣಿಯೊಬ್ಬರು ಶತ್ರು ಭೈರವಿ ಯಾಗ ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದು, ಕೇರಳದ ಬದಲು ಕರ್ನಾಟಕದ ರೆಸಾರ್ಟ್ನಲ್ಲೇ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.