![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 11, 2023, 6:53 AM IST
ಬೆಂಗಳೂರು: ಕಚೇರಿಯಲ್ಲಿ ಕಂತೆ-ಕಂತೆ ನೋಟು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳು ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೆರಡು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಶೇಷಾದ್ರಿಪುರ ಕ್ರೆಸೆಂಟ್ ರಸ್ತೆಯಲ್ಲಿರುವ ಪ್ರಶಾಂತ್ ಮಾಡಾಳು ಖಾಸಗಿ ಕಚೇರಿಯಲ್ಲಿ ಲಂಚದ ಹಣ 40 ಲಕ್ಷ ರೂ. ಅಲ್ಲದೇ ಹೆಚ್ಚುವರಿಯಾಗಿ ಪತ್ತೆಯಾಗಿದ್ದ 1.50 ಕೋಟಿ ರೂ. ದುಡ್ಡಿನ ಮೂಲ ಪತ್ತೆಯಾಗಿದೆ. ಇದು ಚಾಮರಾಜಪೇಟೆಯ ಅರೋಮಾಸ್ ಕಂಪೆನಿಯಿಂದ ಪಡೆದಿರುವ ಕಮಿಷನ್ ಹಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆಯಡಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರಸ್ವಾಮಿ ನೀಡಿರುವ ಒಂದು ದೂರಿನಲ್ಲಿ ಪ್ರಶಾಂತ್ ಮಾಡಾಳು, ಇವರ ಕಚೇರಿ ಅಕೌಂಟೆಂಟ್ ಸುರೇಂದ್ರ, ಇವರ ಸಂಬಂಧಿ ಚಿತ್ರದುರ್ಗದ ನಿವಾಸಿ ಸಿದ್ದೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮತ್ತೂಂದು ದೂರಿನಲ್ಲಿ ಪ್ರಶಾಂತ್ ಮಾಡಾಳು, ಕರ್ನಾಟಕ ಅರೋಮಾಸ್ ಕಂಪೆನಿ ನೌಕರರಾದ ಅಲ್ಬರ್ಟ್ ನಿಕೋಲಸ್, ಗಂಗಾಧರ್, ಮ್ಯಾನೇಜರ್ ದೀಪಕ್ ಜಾಧವ್, ಕಂಪೆನಿ ಮಾಲಕರು ಹಾಗೂ ಕೆಎಸ್ಡಿಎಲ್ ಅಧಿಕಾರಿ/ಸಿಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಶಾಸಕ ಮಾಡಾಳು ವಿರೂಪಾಕ್ಷಪ್ಪ ಲೋಕಾ ಮುಂದೆ ಹಾಜರ್
ಗುರುವಾರ 4 ಗಂಟೆ ಲೋಕಾ ಪೊಲೀಸರ ವಿಚಾರಣೆ ಎದುರಿಸಿದ್ದ ಶಾಸಕ ಮಾಡಾಳು ವಿರುಪಾಕ್ಷಪ್ಪ ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾದರು. ಆದರೆ ಅವರು ತನಿಖೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ತಿಳಿದುಬಂದಿದೆ. ಈ ನಡುವೆ ನಿರೀಕ್ಷಣ ಜಾಮೀನು ರದ್ದುಗೊಳಿಸುವಂತೆ ಸುಪ್ರಿಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಲೋಕಾ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.