![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 12, 2020, 3:04 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾರ್ಚ್ 5ರಂದು ಮಂಡಿಸಲಿರುವ ಬಜೆಟ್ಗೆ ಸಂಬಂಧಿಸಿದಂತೆ ವಿವಿಧ ಇಲಾಖೆ ಹಾಗೂನಿಗಮ ಮಂಡಳಿ ಗಳೊಂ ದಿಗೆ ಪೂರ್ವಭಾವಿ ಚರ್ಚೆ ಮುಂದುವರಿಸಿದ್ದಾರೆ.ಮಂಗಳವಾರ ವಿಧಾನಸೌಧದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಿ.ಕೆ.ರವಿ, ಬಿಜೆಪಿ ಮುಖಂಡ ಡಿ.ಎಸ್.ವೀರಯ್ಯ ಸೇರಿ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು. ಬಜೆಟ್ನಲ್ಲಿ ತಮ್ಮ ಸಮುದಾಯದ ಅಭಿವೃದ್ಧಿ ಮುಂದಿನ ಬಜೆಟ್ನಲ್ಲಿ ವಿಶೇಷ ಅನುದಾನದ ಘೋಷಿಸುವಂತೆ ಮನವಿ ಸಲ್ಲಿಸಿದರು.ಇದಾದ ನಂತರ ಅಲ್ಪಸಂಖ್ಯಾತರ ಸಮುದಾಯಗಳ ಸಂಸದರು ಮತ್ತು ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.
ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಬೇಕೀ ರುವ ಆದ್ಯತೆ ಬಗ್ಗೆ ಚರ್ಚೆ ನಡೆಸಿದರು. ಮಾಜಿ ಸಚಿವರಾದ ಯು.ಟಿ.ಖಾದರ್, ತನ್ವೀರ್ಸೇಠ್, ಶಾಸಕ ಎನ್.ಎ. ಹ್ಯಾರೀಸ್, ಐಎಎಸ್ ಅಧಿಕಾರಿ ಮೊಹಮ್ಮದ್ಮೊಹಿಸಿನ್, ಅಲ್ಪಸಂಖ್ಯಾತರ ಒಕ್ಕೂಟದ ಪದಾಧಿಕಾರಿಗಳು, ವಕ್ಫ್ ಬೋರ್ಡ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪದಾಧಿಕಾರಿಗಳು ಉಪಸ್ಥಿತರಿದ್ದರು.ನಂತರ ಪ್ರವಾಸೋ ದ್ಯಮ ಇಲಾಖೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಪ್ರವಾಸೋದ್ಯಮ ಇಲಾಖೆಯಿಂದ ರೂಪಿಸಿರುವ ಕಾರ್ಯಪಡೆಯ ಅಧ್ಯಕ್ಷರಾದ ಸುಧಾ ಮೂರ್ತಿ ಸಭೆಯಲ್ಲಿ ಭಾಗವಹಿಸಿದ್ದರು. ಸಾಹಿತಿಗಳು ಮತ್ತು ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೂ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ, ಜಾನಪದ ಅಕಾಡೆಮಿ ಅಧ್ಯಕ್ಷೆ ಜೋಗತಿ ಮಂಜಮ್ಮ, ನಿರ್ದೇಶಕ ಪಿ.ಶೇಷಾದ್ರಿ ಸಹಿತವಾಗಿ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.