ಹಿಂದಿನ ಸರ್ಕಾರದ ಟೆಂಡರ್‌ ಸ್ಥಗಿತಗೊಳಿಸಿಲ್ಲ: ಸತೀಶ ಜಾರಕಿಹೊಳಿ

ಇನ್ನೂ ಟೆಂಡರ್‌ ಆಗದೆ ಇರುವ ಕಾಮಗಾರಿಗಳನ್ನು ಮಾತ್ರ ನಿಲ್ಲಿಸಲಾಗಿದೆ

Team Udayavani, Jul 18, 2023, 5:22 AM IST

ಹಿಂದಿನ ಸರ್ಕಾರದ ಟೆಂಡರ್‌ ಸ್ಥಗಿತಗೊಳಿಸಿಲ್ಲ: ಸತೀಶ ಜಾರಕಿಹೊಳಿ

ವಿಧಾನ ಪರಿಷತ್ತು: ಹಿಂದಿನ ಸರ್ಕಾರದ ಅವಧಿಯಲ್ಲಾದ ಯಾವುದೇ ಟೆಂಡರ್‌ಗಳನ್ನು ಸ್ಥಗಿತಗೊಳಿಸಿಲ್ಲ. ಇನ್ನೂ ಟೆಂಡರ್‌ ಆಗದೆ ಇರುವ ಕಾಮಗಾರಿಗಳನ್ನು ಮಾತ್ರ ನಿಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸೋಮವಾರ ನಿಯಮ 72ರಡಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಗೋವಿಂದರಾಜು, “ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲೇ ಹಿಂದಿನ ಅವಧಿಯಲ್ಲಿ ಟೆಂಡರ್‌ ಆಗಿದ್ದ ಆರು ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ’ ಎಂದು ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಹಿಂದಿನ ಸರ್ಕಾರದ ಅವಧಿಯಲ್ಲಿ ಟೆಂಡರ್‌ ಪೂರ್ಣಗೊಂಡ ಯಾವ ಕಾಮಗಾರಿಗಳನ್ನೂ ಸ್ಥಗಿತಗೊಳಿಸಿಲ್ಲ. ಇನ್ನೂ ಟೆಂಡರ್‌ ಆಗದೆ ಉಳಿದಿರುವ ಯೋಜನೆಗಳನ್ನು ಮಾತ್ರ ತಡೆಹಿಡಿಯಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಸತೀಶ್‌ ಜಾರಕಿಹೊಳಿ, “ಸಾಮಾನ್ಯವಾಗಿ ಅನುದಾನ ಮತ್ತು ಕಾಮಗಾರಿಗಳ ನಡುವಿನ ಅಂತರದಿಂದ ಕಾಮಗಾರಿ ಪೂರ್ಣಗೊಂಡ ನಂತರವೂ ಬಿಲ್‌ ಬಾಕಿ ಪಾವತಿ ಬಾಕಿ ಉಳಿಯುತ್ತಿದೆ.
ಉದಾಹರಣೆಗೆ ಸಾವಿರ ಕೋಟಿ ಅನುದಾನ ಇದ್ದರೆ, ಕಾಮಗಾರಿ ಮೂರು ಸಾವಿರ ಕೋಟಿ ಮೊತ್ತದ್ದಾಗಿರುತ್ತದೆ. ಈ ಅಂತರವೇ ಸಮಸ್ಯೆಗೆ ಕಾರಣವಾಗುತ್ತಿದೆ. ಮುಂಬರುವ ದಿನಗಳಲ್ಲಿ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಇನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳಿಗೆ 2023ರ ಮೇ ಅಂತ್ಯಕ್ಕೆ ಒಟ್ಟಾರೆ 8,506 ಕೋಟಿ ಮೊತ್ತದ ಬಿಲ್‌ ಪಾವತಿಗೆ ಬಾಕಿ ಇದೆ. 2023-24ನೇ ಸಾಲಿನ ಆಯವ್ಯಯದಲ್ಲಿ 9,111.20 ಕೋಟಿ ಅನುದಾನ ಒದಗಿಸಲಾಗಿದೆ. ಇದನ್ನು ಆಯಾ ವಲಯಗಳಲ್ಲಿ ಬಾಕಿ ಇರುವ ಬಿಲ್‌ಗ‌ಳನ್ನು ಆಧರಿಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ ಅವರು, ಕೋಲಾರದಲ್ಲಿ ವಿಭಾಗದಲ್ಲಿ 127 ಕೋಟಿ ಬಾಕಿ ಮೊತ್ತವನ್ನು ಪ್ರತಿ ತಿಂಗಳು ಹಂತ ಹಂತವಾಗಿ ತೀರುವಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ, ಯಾವೊಂದು ಕಾಮಗಾರಿ ಕೈಗೆತ್ತಿಕೊಂಡಾದ ಬರೀ ಗುತ್ತಿಗೆದಾರರು ಬರುವುದಿಲ್ಲ. ಅದರೊಂದಿಗೆ ಕಬ್ಬಿಣ, ಬಿಟುಮಿನ್‌ ಸೇರಿದಂತೆ ವಿವಿಧ ಪೂರೈಕೆದಾರರು, ಏಜೆನ್ಸಿಗಳು ಕೂಡ ಬರುತ್ತವೆ. ಅವರೆಲ್ಲರಿಗೂ ಪಾವತಿಸಬೇಕಾಗುತ್ತದೆ. ಆದ್ದರಿಂದ ಸರ್ಕಾರ ಬಾಕಿ ಉಳಿಸಿಕೊಳ್ಳದೆ, ಕಾಲ ಕಾಲಕ್ಕೆ ಪಾವತಿ ಮಾಡಬೇಕು ಎಂದರು.

ಟಾಪ್ ನ್ಯೂಸ್

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ

mutalik (2)

Israel ಮಾದರಿಯಲ್ಲಿ ಹೊರ ಮತ್ತು ಆಂತರಿಕ ಶತ್ರುಗಳ ವಿರುದ್ಧ ಹೋರಾಡಬೇಕು : ಮುತಾಲಿಕ್

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.