ಪ್ರಧಾನಿ ಮೋದಿ ಅಭಿವೃದ್ಧಿ ಹರಿಕಾರ: ಬಿ.ಎಸ್.ಯಡಿಯೂರಪ್ಪ
Team Udayavani, Sep 17, 2022, 11:00 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ್ಣಿಸಿದರು.
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರು ಪ್ರಸ್ಕ್ಲಬ್, ಛಾಯಾಚಿತ್ರ ಪತ್ರಕರ್ತರ ಸಂಘ, ಬಿಜೆಪಿ ಮಾಧ್ಯಮ ಪ್ರಕೋಷ್ಠ ಹಾಗೂ ನಗರದ ವೈದ್ಯಕೀಯ ಪ್ರಕೋಷ್ಠದ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಪ್ರಸ್ಕ್ಲಬ್ ಆವರಣದಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬಸ್ಥರಿಗಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಮೋದಿ ನೂರು ವರ್ಷಗಳ ಕಾಲ ಬದುಕಿ, ದೇಶದ ಸೇವೆ ಮಾಡಬೇಕು. ಇಂದಿನಿಂದ ಅ.2 ಗಾಂಧಿ ಜಯಂತಿಯವರೆಗೆ ವಿವಿಧ ಜನೋಪಕಾರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ನಗರದ ನಾನಾ ಭಾಗಗಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಅವರು, ಪತ್ರಕರ್ತರು ನಿತ್ಯ ಒತ್ತಡದ ಬದುಕಿನಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದ್ದರಿಂದ ಆಗಿಂದಾಗ್ಗೆ ಈ ರೀತಿಯ ಆರೋಗ್ಯ ತಪಾಸಣಾ ಶಿಬಿರಗಳು ನಡೆಯಬೇಕು. ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ತಿಳಿಸಿದರು.
ಈ ಶಿಬಿರದಲ್ಲಿ ನಗರದ ನೂರಾರು ಪತ್ರಕರ್ತರು ಹಾಗೂ ಅವರ ಕುಟುಂಬಸ್ಥರು ಭಾಗವಹಿಸಿ, ಮಧುಮೇಹ, ರಕ್ತದೊತ್ತಡ, ದಂತ, ನೇತ್ರಾ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳನ್ನು ತಪಾತಣೆ ಮಾಡಿಸಿಕೊಂಡು, ವೈದ್ಯರ ಸಲಹೆ ಪಡೆದರು.
ವಿಧಾನ ಪರಿಷತ್ತು ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಪ್ರಸ್ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.