ಹಂಸಲೇಖ ಹೇಳಿದ್ದರಲ್ಲಿ ತಪ್ಪೇನಿಲ್ಲ: ಪ್ರಿಯಾಂಕ್ ಖರ್ಗೆ
Team Udayavani, Nov 25, 2021, 3:37 PM IST
ಬೆಂಗಳೂರು: ಹಂಸಲೇಖ ಹೇಳಿದ್ದರಲ್ಲಿ ತಪ್ಪೇನಿಲ್ಲ.ಕೆಲವು ಮನುವಾದಿಗಳು ಸಂವಿಧಾನದ ವಿರುದ್ಧವಿದ್ದಾರೆ. ಅವರು ವಿರೋಧ ಮಾಡಿಯೇ ಮಾಡುತ್ತಾರೆ. ಎಲ್ಲಿಯವರೆಗೆ ಮನುವಾದಿ ಸಂಸ್ಕೃತಿ ಇರುತ್ತದೋ ಅಲ್ಲಿಯವರೆಗೆ ವಿರೋಧ ಇರುತ್ತದೆ ಎಂದು ಹಂಸಲೇಖ ಪರವಾಗಿ ಪ್ರಿಯಾಂಕ್ ಖರ್ಗೆ ಮಾತನಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಲ ಕಸುಬಿನ ಪ್ರಕಾರ ಆಹಾರ ಪದ್ದತಿ ಇರುತ್ತದೆ. ಆದರೆ ಇಂತಹದ್ದೇ ಆಹಾರ ಸೇವಿಸಿ ಎಂದು ಹೇಳಲು ನಾನು ಯಾರು? ಎಷ್ಟು ಜನ ಬೇರೆ ಜನಾಂಗದದವರು ಮಾಂಸಾಹಾರಿ ತಿನ್ನಲ್ಲವೇ? ಕೆಲವು ಜನ ಒಪ್ಪದೆ ಇರಬಹುದು. ನಾನು ಒಪ್ಪದೆ ಇರಬಹುದು, ನೀವು ಒಪ್ಪದೆ ಇರಬಹುದು. ಆದರೆ ಸಂವಿಧಾನಿಕವಾಗಿ ರಾಷ್ಟ್ರದಲ್ಲಿ ಏನು ನಡೆಯುತ್ತಿದೆ ಅದೇ ಮಾಡುತ್ತಿರುವುದಲ್ಲವೆ? ಇದು ಹೇಗೆ ಅಸಾಂವಿಧಾನಿಕ ಎಂದರು.
ಇದನ್ನೂ ಓದಿ:ದೊಡ್ಡರಸಿನಕೆರೆಯಲ್ಲಿ ಅಂಬರೀಶ್ ಪುಣ್ಯಸ್ಮರಣೆ
ಬಿಜೆಪಿಯವರು ದಲಿತರ ಮನೆಗೆ ಹೋಗಿ ಹೋಟೆಲ್ ನಿಂದ ತರಿಸಿ ತಿನ್ನುತ್ತಾರೆ. ಇವರೇನು ಟೂರಿಸಂ ಪ್ಯಾಕೇಜ್ ಮಾಡಿದ್ದಾರಾ. ಈ ರೀತಿ ನಡೆಯಲು ಅವಕಾಶ ಮಾಡಿಕೊಡಬೇಡಿ ನಾನು ನಮ್ಮ ಜನರಿಗೂ ಹೇಳಿದ್ದೇನೆ. ಇವರು ದಲಿತರ ಮನೆಗೆ ಹೋಗಿ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವುದು, ದಲಿತರ ಮನೆಗೆ ಹೋದರೂ ವೇಜ್ ಊಟಾನೇ ತರಿಸಿ ತಿನ್ನುವುದು. ಬಿಜೆಪಿಯವರು ದಲಿತರ ಮತ್ತು ಹಿಂದುಳಿದವರ ಪರವಾಗಿ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Hockey: ಜರ್ಮನಿ ವಿರುದ್ಧ “ಪ್ಯಾರಿಸ್ ಪ್ರತಿಕಾರ’ಕ್ಕೆ ಸಿದ್ಧತೆ
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.