ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಇಬ್ಬರ ಸೆರೆ

ವ್ಯಾಟ್ಸ್‌ಆ್ಯಪ್‌ನಲ್ಲಿ ಪ್ರಶ್ನೆ ಕಳುಹಿಸಿದ್ದ ಉಪನ್ಯಾಸಕಿ

Team Udayavani, Apr 26, 2022, 7:00 AM IST

ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಇಬ್ಬರ ಸೆರೆ

ಬೆಂಗಳೂರು: ಮತ್ತೊಂದು ಸರಕಾರಿ ಹುದ್ದೆಯ ಪರೀಕ್ಷೆಯಲ್ಲೂ  ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರಕಾರಿ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮೈಸೂರು ಮೂಲದ ಅತಿಥಿ ಉಪನ್ಯಾಸಕಿ ಸೌಮ್ಯಾ (32) ಹಾಗೂ ಬೆಂಗಳೂರು  ಮೂಲದ ಓರ್ವನನ್ನು ಮಲ್ಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್‌ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆ ನಡೆಸಿತ್ತು. ಆಗ ಮೈಸೂರು ವಿವಿಯ ಕಾಲೇಜೊಂದರಲ್ಲಿ ಭೂಗೋಳಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕಿ ಸೌಮ್ಯಾ, ಪರೀಕ್ಷೆ ನಡೆಯುವ ಒಂದು ಗಂಟೆ ಮೊದಲು ತನ್ನ ವಾಟ್ಸ್‌ಆ್ಯಪ್‌ನಿಂದ  ಭೂಗೋಳಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ 18 ಪ್ರಶ್ನೆಗಳನ್ನು ಪರೀಕ್ಷಾರ್ಥಿಯೊಬ್ಬರಿಗೆ ಕಳುಹಿಸಿದ್ದರು. ಅವರು ಇತರ ಕೆಲವರಿಗೂ ಹಂಚಿದ್ದರಿಂದ ಅದು ಸೋರಿಕೆಯಾಗಿತ್ತು.  ಈ ಬಗ್ಗೆ   ಕರ್ನಾಟಕ ಪರೀಕ್ಷಾ ಪ್ರಾಧಿ ಕಾರದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು, ಅಭ್ಯರ್ಥಿಗಳ ದೂರು ಆಧರಿಸಿ ಸೌಮ್ಯಾ ವಿರುದ್ಧ ಮಲ್ಲೇಶ್ವರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ರವಿವಾರ ಸೌಮ್ಯಾಳನ್ನು ಬಂಧಿಸಲಾಗಿದೆ.

ಪಿಎಚ್‌ಡಿ ಪದವೀಧರೆ
ಸೌಮ್ಯಾ ಮೈಸೂರು ವಿಶ್ವವಿದ್ಯಾನಿಲಯದ ಎಂಎಸ್‌ಸಿ ಪದವೀಧರೆ. ಅದೇ ವಿವಿಯಲ್ಲಿ “ಜಿಐಎಸ್‌ ಆ್ಯಂಡ್‌ ಅಗ್ರಿಕಲ್ಚರ್‌ ಜಿಯೋಗ್ರಫಿ’ ವಿಷಯದಲ್ಲಿ ಪಿಎಚ್‌ಡಿ ಪದವಿಯನ್ನೂ ಪಡೆದು ಗಂಗೋತ್ರಿಯಲ್ಲಿ  ಅತಿಥಿ ಉಪನ್ಯಾಸಕರಾಗಿದ್ದರು. ಇತ್ತೀಚೆಗೆ ಪೋಸ್ಟ್‌ ಡಾಕ್ಟರಲ್‌ ಫೆಲೋಶಿಪ್‌ಗೆ ಆಯ್ಕೆಯಾಗಿದ್ದ ಕಾರಣ ಅತಿಥಿ ಉಪನ್ಯಾಸಕ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು ಎಂದು ತಿಳಿದು ಬಂದಿದೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.