![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 22, 2022, 7:52 PM IST
ಕಲಬುರಗಿ: ಪಿಎಸ್ಐ ನೇಮಕಾತಿಯ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೊದಲ ಎಂಟು ಆರೋಪಿಗಳಿಗೆ ಇಲ್ಲಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ಬಂಧಿತ 1ರಿಂದ 8ರವರೆಗಿನ ಆರೋಪಿಗಳಾದ ವೀರೇಶ ನಿಡಗುಂದಾ, ಕೆ.ಪ್ರವೀಣಕುಮಾರ, ಅರುಣ ಪಾಟೀಲ, ಚೇತನ ನಂದಗಾಂವ, ಪರೀಕ್ಷಾ ಮೇಲ್ವಿಚಾರಣೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿಯರಾದ ಸುಮಾ, ಸಿದ್ದಮ್ಮ, ಸಾವಿತ್ರಿ, ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರ ಪತಿ ರಾಜೇಶ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಮೂರನೇ ಜೆಎಂಎಫ್ಸಿಯ ನ್ಯಾಯಾಧೀಶರಾದ ಬಸವರಾಜ ನೇಸರ್ಗಿ ಅವರು ವಿಚಾರಣೆ ನಡೆಸಿದ ನಂತರ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಳ್ಳದ ಕಾರಣ ಜಾಮೀನು ನೀಡಲು ಆಗದು’ ಎಂದು ಆದೇಶಿಸಿದರು.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಿವಶರಣಪ್ಪ ಪೋತಪೇಟ ವಾದ ಮಂಡಿಸಿದರೆ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಪ್ರಕಾಶ ರಾಠೋಡ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ನಾಲ್ವರು ಪೊಲೀಸ್ ಕಸ್ಟಡಿಗೆ
ಗುರುವಾರ ಬಂಧಿಸಲಾದ ಗನ್ಮ್ಯಾನ್ ಹಯ್ಯಾಳಿ ದೇಸಾಯಿ, ಸಿಎಆರ್ ಪೊಲೀಸ್ ಕಾನ್ಸ್ಟೆಬಲ್ ರುದ್ರಗೌಡ ಪಾಟೀಲ, ಶುಕ್ರವಾರ ಬಂಧಿಸಲಾದ ವಿಶಾಲ್ ಹಾಗೂ ಶರಣಬಸಪ್ಪ ಅವರನ್ನು ಏ. 29ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.