![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 18, 2022, 6:40 AM IST
ಬೆಂಗಳೂರು: ಹಿಜಾಬ್ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಈ ಬಾರಿ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಒಂದು ವೇಳೆ ನಿಗದಿಪಡಿಸಿಲ್ಲವಾದರೆ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡುವ ಸಮವಸ್ತ್ರ ಧರಿಸುವಂತೆ ಮಾರ್ಗಸೂಚಿ ಪ್ರಕಟಿಸಿದೆ.
ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿನ ಅನ್ವಯ ಸಮವಸ್ತ್ರಗಳನ್ನು ಧರಿಸುವಂತೆ ಸೂಚಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕ ವರ್ಷದ ದಾಖಲಾತಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮೇ 20ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.
ಜೂ. 1ರಿಂದ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಪ್ರವೇಶ ಪಡೆಯಲು ಜೂ. 15 ಕೊನೆಯ ದಿನವಾಗಿದೆ. ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಜೂ. 9ರಿಂದ ಆರಂಭವಾಗಲಿದೆ. ಅ. 1ರಿಂದ 12ರ ವರೆಗೆ ಮಧ್ಯಾಂತರ ರಜೆ ಇರಲಿದೆ. 2023 ಮಾ. 31 ಕೊನೆಯ ಕಾರ್ಯನಿರತ ದಿನವಾಗಿದೆ. ಎ. 1ರಿಂದ ಬೇಸಗೆ ರಜೆ ಆರಂಭವಾಗಲಿದೆ.
ದಂಡ ಶುಲ್ಕವಿಲ್ಲದೆ ದಾಖಲಾತಿ ಪಡೆಯಲು ಜೂ. 15 ಕೊನೆಯ ದಿನವಾಗಿದೆ. ವಿವಿಧ ಮಂಡಳಿಗಳಿಂದ ಪಾಸ್ ಆಗಿರುವ ಬಗ್ಗೆ ತಾತ್ಕಾಲಿಕ ಆರ್ಹತಾ ಪತ್ರದ ಆಧಾರದ ಮೇಲೆ ಪ್ರವೇಶ ನೀಡಬಾರದು.
ಹಾಗಾದರೆ ಪ್ರಾಂಶುಪಾಲರನ್ನೇ ನೇರ ಹೊಣೆಗಾರರಾಗಿ ಮಾಡಲಾಗುವುದು ಎಂದು ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.