ಪಂಜಾಬ್ನಲ್ಲಿ ದಾಳಿ ; Bagalkot ಯೋಧ ಹುತಾತ್ಮ
Team Udayavani, Apr 12, 2023, 9:24 PM IST
ಬಾಗಲಕೋಟೆ : ಪಂಜಾಬನ ಬಟಿಂಡಾ ಮಿಲಿಟರಿ ಠಾಣೆಯ ಮೇಲೆ ನಡೆದ ದಾಳಿಯಲ್ಲಿ ಜಿಲ್ಲೆಯ ಬಾದಾಮಿ ತಾಲೂಕಿನ ಹನಮನೇರಿಯ ಗ್ರಾಮದ ಸೈನಿಕ ವೀರಮರಣ ಹೊಂದಿದ್ದಾರೆ.
ಹುತಾತ್ಮರಾದ ಸೈನಿಕ ಹನಮನೇರಿ(ಇನಾಂ) ಗ್ರಾಮದ ಸಂತೋಷ ಮಲ್ಲಪ್ಪ ನಾಗರಾಳ (24) ಎನ್ನುವವರಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಭಾರತೀಯ ಸೇನೆಯು ಪಂಜಾಬ್ ರೆಜಿಮೆಂಟ್ ನಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಬುಧವಾರ ಅಪರಿಚರು, ಪಂಜಾಬನ ಬಟಿಂಡಾ ಮಿಲಟರಿ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಯೋಧ ಸಂತೋಷ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಪಾರ್ಥಿವ ಶರೀರ ಗುರುವಾರ ಗ್ರಾಮಕ್ಕೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಟಿಂಡಾ ಸೇನಾ ಘಟಕದೊಳಗೆ ಬುಧವಾರ ಮುಂಜಾನೆ ಈ ಘಟನೆ ನಡೆದಿರುವುದಾಗಿ ಆರ್ಮಿಯ ಸೌತ್ ವೆಸ್ಟರ್ನ್ ಕಮಾಂಡ್ ಪ್ರಕಟನೆಯಲ್ಲಿ ತಿಳಿಸಿದೆ. ದಾಳಿಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.