ರಾಹುಲ್ ಗಾಂಧಿ ಮೈಸೂರಿನ ಭಾರತ್ ಜೋಡೋ ಐತಿಹಾಸಿಕವಾಗಬೇಕು: ಸಿದ್ದರಾಮಯ್ಯ

ದೇಶದ ಜನರ ಹಸಿವು ನೀಗಿಸುವ ಅನ್ನದಾತರ ಬದುಕು ಭದ್ರಪಡಿಸುವ ಉದ್ದೇಶ

Team Udayavani, Sep 5, 2022, 10:00 PM IST

1–dasd

ಮೈಸೂರು : ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ನಡೆಸುವ ಭಾರತ್ ಜೋಡೋ ಪಾದಯಾತ್ರೆ ಐತಿಹಾಸಿಕ ನಡಿಗೆಯಾಗಬೇಕು ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸೋಮವಾರ ಇಲ್ಲಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.ಉಭಯ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಳೆದ ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆ ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಾನೂ ಭಾಗವಹಿಸಲಿದ್ದೇನೆ. ದೇಶಾದ್ಯಂತ 3570 ಕಿ.ಮೀ. ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 510 ಕಿ.ಮೀ. ಯಾತ್ರೆ ಸಾಗಲಿದೆ ಎಂದು ವಿವರಿಸಿದರು.

ಸೆ.30ರಂದು ಗುಂಡ್ಲುಪೇಟೆ ಮೂಲಕ ಪಾದಯಾತ್ರೆ ರಾಜ್ಯ ಪ್ರವೇಶಿಸಲಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಅದ್ದೂರಿ ಸ್ವಾಗತ ಕೋರಲು ನಿರ್ಧರಿಸಿದೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಪಾದಯಾತ್ರೆ ಯಶಸ್ವಿಗೊಳಿಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಉಭಯ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆ ನೆನಪಿನಲ್ಲಿ ಉಳಿಯುವಂತಿರಬೇಕು. ಇದರ ಜವಾಬ್ದಾರಿಯನ್ನು ಎರಡೂ ಜಿಲ್ಲೆಯ ಮುಖಂಡರು ವಹಿಸಿಕೊಳ್ಳಬೇಕು ಎಂದರು.

ಯಾವುದೇ ರಾಜಕೀಯ ಪಕ್ಷಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಬೇಕು. ಮತ್ತೊಂದು ಪಕ್ಷದ ವಿನಾಶಕ್ಕೆ ಮುಂದಾಗಬಾರದು. ಬೇರೆ ಬೇರೆ ಪಕ್ಷಗಳು ಈ ವ್ಯವಸ್ಥೆಯಲ್ಲಿ ಇರಬೇಕು ಎಂಬ ಮನೋಭಾವ ಹೊಂದಿರಬೇಕು. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ ಎಂದು ಹೇಳಿದರು. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ, ಬೆಲೆ ಏರಿಕೆ ನಿಯಂತ್ರಣ, ದೇಶದಲ್ಲಿ ಶಾಂತಿ, ಸಾಮರಸ್ಯದ ವಾತಾವರಣ ನಿರ್ಮಾಣ, ದೇಶದ ಜನರ ಹಸಿವು ನೀಗಿಸುವ ಅನ್ನದಾತರ ಬದುಕು ಭದ್ರಪಡಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರು ಮಾತನಾಡಿ, ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ನಾನಾ ವರ್ಗದವರೊಂದಿಗೆ ಸಂವಾದ ನಡೆಸಲಿದ್ದಾರೆ. ಪಾದಯಾತ್ರೆಯನ್ನು ಅರ್ಥಪೂರ್ಣಗೊಳಿಸುವುದು ಇದರ ಉದ್ದೇಶ ಎಂದರು.

ರಾಜ್ಯ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಡಾ. ವಿಜಯಕುಮಾರ್, ಚಾಮರಾಜನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಮೈಸೂರು ನಗರ ಘಟಕ ಅಧ್ಯಕ್ಷ ಮೂರ್ತಿ, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ನರೇಂದ್ರ, ಮಂಜುನಾಥ್, ಪುಟ್ಟರಂಗ ಶೆಟ್ಟಿ, ತನ್ವೀರ್ ಸೇಠ್, ಡಾ. ತಿಮ್ಮಯ್ಯ, ಮಧು ಮಾದೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.