Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ

Team Udayavani, Oct 17, 2024, 12:44 AM IST

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

ಹುಬ್ಬಳ್ಳಿ/ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಬುಧವಾರವೂ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಧಾರಾಕಾರ ಮಳೆಗೆ ಮನೆಗಳ ಗೋಡೆಗಳು ಕುಸಿದಿವೆ.

ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕಟಾವಿಗೆ ಬಂದ ಈರುಳ್ಳಿ, ಮೆಕ್ಕೆಜೋಳ, ಭತ್ತ, ಹತ್ತಿ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅಡಹಳ್ಳಿಯಲ್ಲಿ ಹಿರೇಹಳ್ಳ ಉಕ್ಕಿ ಹರಿಯುತ್ತಿದ್ದು, ಕೊಕಟನೂರ ಯಲ್ಲಮ್ಮದೇವಿ ದೇವಸ್ಥಾನ ಜಲಾವೃತಗೊಂಡಿದೆ. ಬೆಳಗಾವಿ ತಾಲೂಕಿನಲ್ಲಿ 143 ಹೆಕ್ಟೇರ್‌, ಖಾನಾಪುರ ತಾಲೂಕಿನಲ್ಲಿ 8.13 ಹೆಕ್ಟೇರ್‌ ಪ್ರದೇಶದ ಭತ್ತ ಹಾನಿಯಾಗಿದೆ.

ಬಾಗಲಕೋಟೆ ತಾಲೂಕಿನ 6 ಗ್ರಾಮಗಳ ಸುಮಾರು 1,142 ಹೆಕ್ಟೇರ್‌ ಪ್ರದೇಶವನ್ನು ನೀರಾವರಿಗೆ ಒಳಪಡಿಸುವ ಕಳಸಕೊಪ್ಪ ಕೆರೆ ಕೋಡಿ ಬಿದ್ದಿದೆ. ಮುಧೋಳ ತಾಲೂಕಿನಲ್ಲಿ ಕಟಾವಿಗೆ ಬಂದಿದ್ದ ನೂರಾರು ಹೆಕ್ಟೇರ್‌ ಮೆಕ್ಕೆಜೋಳ, ಈರುಳ್ಳಿ ಬೆಳೆ ಹಾನಿಯಾಗಿದೆ.

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನಲ್ಲಿ ಸೋನಾ ಮಸೂರಿ, ಆರ್‌ಎನ್‌ಆರ್‌ ಭತ್ತದ ಬೆಳೆ ನೆಲಕ್ಕುರುಳಿವೆ. ಚಿಕ್ಕಮಗಳೂರು ತಾಲೂಕಿನ ಬಾಳೆಹೊನ್ನೂರಿನಿಂದ ಕಾರ್ಕಿ ಮೂಲಕ ಹಲಸೂರು ಸಂಪರ್ಕಿಸುವ ರಸ್ತೆ ಕುಸಿದು ಬಿದ್ದಿದೆ. ಕಾಫಿ, ಅಡಿಕೆ ಬೆಳೆಗೆ ಹಾನಿಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರದಲ್ಲಿ ಸಾಧಾರಣ ಮಳೆಯಾಗಿದೆ. ರಾಯಚೂರಿನಲ್ಲಿ ಭಾರೀ ಮಳೆಗೆ ಹತ್ತಿ ಬೆಳೆಗೆ ಹಾನಿಯಾಗಿದೆ.

ದ್ರಾಕ್ಷಿ ಬೆಳೆಗೆ ರೋಗ ಭೀತಿ
ಗದಗ ಜಿಲ್ಲೆಯಲ್ಲಿ ಈರುಳ್ಳಿ ಬೆಳೆ ರಕ್ಷಣೆಗೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನಲ್ಲಿ ಸತತ ಮಳೆ, ಮೋಡ ಕವಿದ ವಾತಾವರಣದಿಂದ ದ್ರಾಕ್ಷಿ ಬೆಳೆಗೆ ಡೌನಿ, ಕೊಳೆ, ಬೂದಿ ರೋಗ ಕಾಣಿಸಿಕೊಳ್ಳುತ್ತಿದ್ದು, ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ಧಾರವಾಡ, ದಾವಣಗೆರೆ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿKSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ

BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.