Rain; ಮಲೆನಾಡು, ಕರಾವಳಿಯ 6 ಜಿಲ್ಲೆಗಳಲ್ಲಿ ಮಳೆ ಇಳಿಮುಖ: ಕೊಂಕಣದ ಮಳೆಗೆ ಪ್ರವಾಹ ಭೀತಿ


Team Udayavani, Jul 21, 2024, 6:30 AM IST

1-wqewewq

ಬೆಂಗಳೂರು/ಚಿಕ್ಕೋಡಿ: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಶನಿವಾರ ಮಳೆ ಪ್ರಮಾಣ ಇಳಿಮುಖವಾಗಿದೆ. ಆದರೆ ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಲೇಶ್ವರ, ಕೊಯ್ನಾ, ನವಜಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವುದರಿಂದ ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ ನದಿಗೆ ಸುಮಾರು 81 ಸಾವಿರ ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ಮೂರೂ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.ರಾಜ್ಯದ ಗಡಿ ಭಾಗದ ಚಿಕ್ಕೋಡಿ, ನಿಪ್ಪಾಣಿ, ರಾಯಭಾಗ ಭಾಗದಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ 2 ಅಡಿಯಷ್ಟು ಏರಿಕೆಯಾದರೆ ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ 3 ಅಡಿಯಷ್ಟು ಹೆಚ್ಚಳವಾಗಿದೆ.

ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುವುದರಿಂದ ಚಿಕ್ಕೋಡಿ ಉಪವಿಭಾಗದ ಐದು ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 63 ಸಾವಿರ ಕ್ಯುಸೆಕ್‌ ನೀರು ಹರಿದುಬಂದರೆ, ದೂಧಗಂಗಾ ಮತ್ತು ವೇದಗಂಗಾ ನದಿಗೆ 19 ಸಾವಿರ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಒಟ್ಟು ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 81 ಸಾವಿರ ಕ್ಯುಸೆಕ್‌ ನೀರು ಹರಿದು ಬರಲಾರಂಭಿಸಿದೆ.

ಬಂಗಾಲಿ ಬಾಬಾ ದೇವಸ್ಥಾನಕ್ಕೆ ಜಲದಿಗ್ಬಂಧನ
ದೂಧಗಂಗಾ ನದಿಗೆ ಅಪಾರ ಪ್ರಮಾಣದ ನೀರು ಬರುತ್ತಿರುವ ಪರಿಣಾಮ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದ ಬಂಗಾಲಿ ಬಾಬಾ ದೇವಸ್ಥಾನ ಜಲಾವೃತಗೊಂಡಿದೆ. ದರ್ಶನಕ್ಕೆ ಭಕ್ತರು ಪರದಾಡುವಂತಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದ್ದು ಜನರು ಉಸಿರಾಡುವಂತಾಗಿದೆ.

ಭಾರೀ ವಾಹನಗಳಿಗೆ ತಡೆ: ಗೋವಾಕ್ಕೆ ಸಾಗಣೆ ವ್ಯತ್ಯಯ
ಬೆಳಗಾವಿ: ಧಾರಾಕಾರ ಮಳೆಯಿಂದ ಚೋರ್ಲಾ ಘಾಟಿ ಮೂಲಕ ಗೋವಾಕ್ಕೆ ಸಂಪರ್ಕ ಕಲ್ಪಿಸುವ ಬೆಳಗಾವಿ-ಜಾಂಬೋಟಿ ಮಾರ್ಗದ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಭಾರೀ ವಾಹನಗಳ ಸಂಚಾರ ತಡೆ ಹಿಡಿಯಲಾಗಿದೆ. ಹೀಗಾಗಿ ಗೋವಾಕ್ಕೆ ಹಾಲು-ಅಗತ್ಯ ವಸ್ತುಗಳ ಸಾಗಾಟದಲ್ಲಿ ವ್ಯತ್ಯಯವಾಗಿದೆ. ಗೋವಾಕ್ಕೆ ತರಕಾರಿ, ಹಾಲು, ಅಗತ್ಯ ವಸ್ತುಗಳು ಬೆಳಗಾವಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಸರಬರಾಜಾಗುತ್ತವೆ. ಸುಮಾರು ಮೂರ್‍ನಾಲ್ಕು ದಿನಗಳಿಂದ ವಾಹನಗಳು ನಿಂತಲ್ಲೇ ಇವೆ.

ಸೊರಬ: ಪ್ರವಾಹಕ್ಕೆ ಸಿಲುಕಿ ವ್ಯಕ್ತಿ ಸಾವು
ಸೊರಬ: ಶಿವಮೊಗ್ಗ ಜಿಲ್ಲೆ ಸೊರಬದ ದಂಡಾವತಿ ನದಿಗೆ ಮೀನು ಹಿಡಿಯಲು ಹೋದ ವಡ್ಡಿಗೇರಿ ಗ್ರಾಮದ ಯಲ್ಲಪ್ಪ (50) ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದಾರೆ. ಶುಕ್ರವಾರ ಘಟನೆ ಸಂಭವಿಸಿದ್ದು, ಶನಿವಾರ ಬೆಳಗ್ಗೆ ಅಗ್ನಿಶಾಮಕ ಸಿಬಂದಿ ಹಾಗೂ ಸೊರಬದ ಮುಳುಗು ತಜ್ಞ ಸರ್ದಾರ್‌ ಖಾನ್‌ ಸತತ ಮೂರು ತಾಸು ಶೋಧ ನಡೆಸಿ ಮೃತದೇಹವನ್ನು ಪತ್ತೆಹಚ್ಚಿದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.