![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 1, 2019, 3:00 AM IST
ಮೈಸೂರು: ಬಿಜೆಪಿಗೆ ಬಹಳ ಜನ ಅತಿಥಿಗಳು ಬಂದಿರುವುದರಿಂದ ಮೊದಲು ಅವರಿಗೆ ಆದ್ಯತೆ ನೀಡಬೇಕಿದೆ. ಹೀಗಾಗಿ, ನನಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ನೋವು ಇಲ್ಲ. ಬೇಸರವೂ ಇಲ್ಲ. ದಸರಾ ಕಾರ್ಯಕ್ರಮಗಳಲ್ಲಿ ಇನ್ನು ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ದೇವೋಭವ ಎನ್ನುವ ಸಂಸ್ಕೃತಿ ನಮ್ಮದು. ಹೀಗಾಗಿ, ಪಕ್ಷಕ್ಕೆ ಬರುವ ಅತಿಥಿಗಳಿಗೆ ಮೊದಲು ಉಣ ಬಡಿಸಲಿ, ನಂತರ ನಮ್ಮದು ಎಂದರು. ಗಜಪಯಣದೊಂದಿಗೆ ದಸರಾ ಆರಂಭವಾಗುತ್ತದೆ. ವೀರನಹೊಸಳ್ಳಿಯಲ್ಲಿ 11.30ರವರೆಗೆ ಗಜಪಡೆ ಪೂಜೆಗೆ ಮುಹೂರ್ತ ನಿಗದಿಯಾಗಿತ್ತು.
ಹೀಗಾಗಿ, ಮುಹೂರ್ತ ಮೀರಬಾರದು ಎಂಬ ಕಾರಣಕ್ಕೆ 11ಗಂಟೆಗೆ ಪ್ರಧಾನಿ ಮತ್ತು ಮುಖ್ಯಮಂತ್ರಿ ಹೆಸರಲ್ಲಿ ಪೂಜೆ ಸಲ್ಲಿಸಿ, ಅರ್ಜುನನಿಗೆ ಫಲ ತಾಂಬೂಲ ನೀಡುವಾಗ ನಾನೊಬ್ಬನೇ ಇದ್ದೆ. ಇತ್ತೀಚೆಗೆ ಸುಳ್ಯ ಬಳಿ ಅಪಘಾತವಾಗಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಆದ್ದರಿಂದ ದಸರಾ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಾಗಿಲ್ಲ. ಇದರ ಹೊರತಾಗಿ ಮಂತ್ರಿ ಸ್ಥಾನ ಕೊಟ್ಟಿಲ್ಲ ಎಂಬ ಬೇಸರವಿಲ್ಲ ಎಂದು ಸ್ಪಷ್ಟಪಡಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.