![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 14, 2023, 7:00 AM IST
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮತ್ತೆ ಸಿ.ಡಿ. ಸದ್ದು ಮಾಡತೊಡಗಿದೆ. ಇದು ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಅಲ್ಲೋಲ ಕಲ್ಲೋಲಕ್ಕೂ ಎಡೆ ಮಾಡಿಕೊಡುವ ಸಾಧ್ಯತೆ ಹೆಚ್ಚಿದೆ.
ಒಂದೂವರೆ ವರ್ಷದಿಂದ ತಣ್ಣ ಗಾಗಿದ್ದ ಸಿ.ಡಿ. ಬೆಳವಣಿಗೆ ಈಗ “ಬಾಂಬೆ ಫ್ರೆಂಡ್ಸ್’ ನಿದ್ದೆಗೆಡಿಸಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸರಕಾರದಲ್ಲಿ ಸಚಿವರಾಗಿರುವವರು ವಾಪಸ್ ಮಾತೃ ಪಕ್ಷಕ್ಕೆ ಬರದಿದ್ದರೆ ಸಿ.ಡಿ. ಬಿಡುಗಡೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬ್ಲ್ಯಾಕ್ವೆುàಲ್ ಮಾಡುತ್ತಿದ್ದಾರೆ’ ಎಂಬ ರಮೇಶ ಜಾರಕಿಹೊಳಿ ಆರೋಪ ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ.
ಜಾರಕಿಹೊಳಿ ಹೇಳಿಕೆ ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ. ಜಾರಕಿ ಹೊಳಿಯನ್ನು ಡಿಕೆಶಿ ಮೆಂಟಲ್ ಗಿರಾಕಿ ಎಂದು ಛೇಡಿಸಿದ್ದರೆ, ಇಂಥ ಬ್ಲ್ಯಾಕ್ಮೇಲ್ ರಾಜಕಾರಣಕ್ಕೆ ನಮ್ಮ ಸಚಿವರು ಹೆದರುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಚಿವರೊಬ್ಬರಿಗೆ ಬೆದರಿಕೆ : ಜಾರಕಿಹೊಳಿ
ಗೋಕಾಕ್ನ ಅಂಕಲಗಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, “ನಮ್ಮ ಮೇಲೆ ಸಿ.ಡಿ. ಹೆಸರಿನಲ್ಲಿ ನಿರಂತರ ದಾಳಿ ಮಾಡಿದ ಡಿ.ಕೆ. ಶಿವಕುಮಾರ್ ಈಗ ಸಚಿವರೊಬ್ಬರಿಗೆ ಕಾಂಗ್ರೆಸ್ಗೆ ಬರುತ್ತೀಯೋ, ಇಲ್ಲ ನಿನ್ನ ಸಿ.ಡಿ. ಬಿಡಲೋ ಎಂದು ಬೆದರಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಸಿ.ಡಿ. ತಯಾರಿಸುವ ಮಹಾ ನಾಯಕನ ಹಿಂದೆ ದೊಡ್ಡ ತಂಡವೇ ಇದೆ. ಅದರ ಮುಖ್ಯ ಆ್ಯಕ್ಟರ್ ಮತ್ತು ಪಾರ್ಟ್ನರ್ ಬೆಳಗಾವಿಯಲ್ಲಿಯೇ ಇದ್ದಾರೆ. ಇವರೊಂದಿಗೆ ಈಗ ಒಬ್ಬ ಡ್ರೈವರ್ ಸೇರಿಕೊಂಡಿದ್ದಾನೆ. ಯುದ್ಧ ಮಾಡು ವುದಿದ್ದರೆ ನೇರವಾಗಿ ಮಾಡಲಿ. ನಾನು ಕನಕಪುರಕ್ಕೆ ಬರುತ್ತೇನೆ. ಆದರೆ ಕುತಂತ್ರ ಮಾಡುವುದಿಲ್ಲ. ನನ್ನ ಬಳಿ ಸಾಕಷ್ಟು ಸಿ.ಡಿ. ಗಳಿವೆ. ಆದರೆ ಆದರಿಂದ ಇನ್ನೊಬ್ಬರ ವೈಯಕ್ತಿಕ ಜೀವನ ಹಾಳಾಗಬಾರದು ಎಂದು ಬಿಡುಗಡೆ ಮಾಡುತ್ತಿಲ್ಲ. ಡಿ.ಕೆ.ಶಿ. ವಿರುದ್ಧ ನನ್ನಲ್ಲೂ 10 ಸಿ.ಡಿ.ಗಳಿವೆ ಎಂದು ಗುಡುಗಿದ್ದಾರೆ.
ಬೆದರುವುದಿಲ್ಲ
ರೋಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಡಿ.ಕೆ. ಶಿವಕುಮಾರ್ ಎಷ್ಟೇ ಹೆದರಿಸಿದರೂ ನಮ್ಮ ಮಂತ್ರಿಗಳು ಇಂಥ ಬೆದರಿಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ.
ಇದು ಡಿಜಿಟಲ್ ಯುಗ. ಚುನಾವಣೆ ಸಂದರ್ಭದಲ್ಲಿ ಸಿ.ಡಿ. ಪ್ರಕರಣಗಳು ಮತ್ತೆ ಹೊರ ಬರುತ್ತಿವೆ. ಕಾಂಗ್ರೆಸ್ಗೆ ಸೇರದಿದ್ದರೆ ಸಿ.ಡಿ. ಬಿಡುಗಡೆ ಮಾಡಬೇಕಾಗುತ್ತದೆ ಎಂದು ಸಚಿವರೊಬ್ಬರಿಗೆ ಡಿ.ಕೆ.ಶಿ. ಬೆದರಿಕೆ ಹಾಕುತ್ತಿದ್ದಾರೆ ಎಂದು ರಮೇಶ ಜಾರಕಿಹೊಳಿ ಆರೋಪಿಸುತ್ತಿದ್ದಾರೆ. ಆದರೆ ಈ ಕುರಿತು ನನಗೆ ಹೆಚ್ಚಿನ ಮಾಹಿತಿಯಿಲ್ಲ ಎಂದರು.
ಬ್ಲ್ಯಾಕ್ ಮೇಲ್ ಬಗ್ಗೆ ಗೊತ್ತಿಲ್ಲ: ಸಿ.ಟಿ.ರವಿ
ರಮೇಶ ಜಾರಕಿಹೊಳಿ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಜಾರಕಿಹೊಳಿಗೆ ಈ ಬಗ್ಗೆ ಮಾಹಿತಿ ಇರಬೇಕು. ಶಿವಕುಮಾರ್ ಹಾಗೂ ಜಾರಕಿಹೊಳಿ ಈ ಹಿಂದೆ ಒಂದೇ ಪಕ್ಷದಲ್ಲಿದ್ದವರು. ಹೀಗಾಗಿ ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎನ್ನುವ ಮಾಹಿತಿ ಜಾರಕಿಹೊಳಿಗೆ ಇರಬಹುದು. ಕಾಂಗ್ರೆಸ್ ಸಂಸ್ಕೃತಿ ಗೊತ್ತಿರುವ ಕಾರಣಕ್ಕೆ ಈ ವಿಚಾರ ಬಹಿರಂಗ ಮಾಡಿದ್ದಾರೆ ಎಂದು ಹೇಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.