![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 15, 2021, 10:00 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೆ. 17ಕ್ಕೆ ಮುಂದೂಡಿದೆ.
ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಂಗಾಮಿ ಮುಖ್ಯ ನ್ಯಾ| ಸತೀಶ್ ಚಂದ್ರ ಶರ್ಮ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ವಾದ ಮಂಡನೆ ವೇಳೆ ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಪದೇಪದೆ ಕೆಮ್ಮುತ್ತಿದ್ದನ್ನು ಗಮನಿಸಿದ ನ್ಯಾಯಪೀಠ, “ನಿಮಗೆ ಹುಷಾರಿಲ್ಲವೇ? ಬೇಕಾದರೆ ಅರ್ಜಿ ವಿಚಾರಣೆಯನ್ನು ಮತ್ತೂಂದು ದಿನಕ್ಕೆ ನಿಗದಿಪಡಿಸೋಣ’ ಎಂದು ಹೇಳಿತು.
ಸ್ವಲ್ಪ ಆರೋಗ್ಯದ ಸಮಸ್ಯೆಯಿದ್ದು, ಒಂದು ದಿನ ವಿಚಾರಣೆ ಮುಂದೂಡಿದರೆ ಉತ್ತಮ ಎಂದು ಇಂದಿರಾ ಜೈಸಿಂಗ್ ತಿಳಿಸಿದರು. ಬಳಿಕ ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಲಾಯಿತು.
ಇದನ್ನೂ ಓದಿ:“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ಕನ್ನಡ ಚಿತ್ರಕ್ಕೆ ಸ್ಪೇನ್ ದೇಶದಲ್ಲೂ ಪ್ರಶಸ್ತಿ
ಇದಕ್ಕೂ ಮುನ್ನ ಅರ್ಜಿದಾರೆ ಗೀತಾ ಮಿಶ್ರಾ ಪರ ವಕೀಲ ಜಿ.ಆರ್. ಮೋಹನ್ ಅವರು ರಮೇಶ್ ಜಾರಕಿಹೊಳಿ ಪ್ರಕರಣ ಸಂಬಂಧ ಮಾ.2ರಂದು ದಿನೇಶ್ ಕಲ್ಲಳ್ಳಿ ದೂರು ದಾಖಲಿಸಿದ ಕ್ಷಣದಿಂದ ಮಾ.13ರ ವರೆಗೆ ನಡೆದ ಬೆಳವಣಿಗೆಗಳ ಬಗ್ಗೆ ನ್ಯಾಯಪೀಠಕ್ಕೆ ವಿವರಿಸಿದರು.
ಮಾ.2ರಿಂದ ಮಾ.13ರವರೆಗೆ ಪ್ರಕರಣ ಸಂಬಂಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. ಹೀಗಾಗಿ, ಪ್ರಕರಣದ ತನಿಖೆ ನಡೆಸಲು ಎಸ್ಐಟಿಗೆ ಯಾವುದೇ ಅಧಿಕಾರವಿಲ್ಲ. ರಮೇಶ್ ಜಾರಕಿಹೊಳಿ ಮಾ.13ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಿನೇಶ್ ಕಲ್ಲಳ್ಳಿ ಅವರ ದೂರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಇದರಿಂದ ಕಬ್ಬನ್ ಪಾರ್ಕ್ ಮತ್ತು ಸದಾಶಿವ ಠಾಣಾ ಪೊಲೀಸರಿಗೆ ಮಾತ್ರ ಪ್ರಕರಣದ ತನಿಖೆ ನಡೆಸುವ ಅಧಿಕಾರವಿದೆ. ಎಸ್ಐಟಿಗೆ ತನಿಖೆ ಮೇಲ್ವಿಚಾರಣೆ ನಡೆಸುವ ಅಧಿಕಾರವೂ ಇಲ್ಲ ಎಂದು ತಿಳಿಸಿದರು.
ಇಂದಿರಾ ಜೈಸಿಂಗ್ ಅವರು, ಹಿಂದಿನ ಗೃಹ ಸಚಿವರ ಪತ್ರ ಬರೆದು ನಿರ್ದೇಶಿಸಿದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದರು. ಎಸ್ಐಟಿ ರಚಿಸುವಂತೆ ನಿರ್ದೇಶಿಸುವ ಅಧಿಕಾರ ಗೃಹ ಸಚಿವರಿಗೆ ಇಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.