Rameshwaram Cafe Case; ಎನ್ಐಎ ಗೆ ತನಿಖೆ ಹಸ್ತಾಂತರಿಸಿದ ಸರ್ಕಾರ
Team Udayavani, Mar 4, 2024, 10:51 AM IST
ಬೆಂಗಳೂರು: ಇಲ್ಲಿನ ಹೊರವಲಯದ ರಾಮೇಶ್ವರ ಕೆಫೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ಹಸ್ತಾಂತರಿಸಿದೆ. ಉಗ್ರ ನಿಗ್ರಹ ಪಡೆಯು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದೆ.
ಕಳೆದ ಶುಕ್ರವಾರ (ಮಾರ್ಚ್ 1) ರಂದು ವೈಟ್ ಫೀಲ್ಡ್ ಬಳಿಕ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸ್ಪೋಟ ನಡೆದಿತ್ತು. ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದರು. ಪೊಲೀಸರು ಆರೋಪಿಯ ಬಗ್ಗೆ ಕನಿಷ್ಠ 40-50 ಸಿಸಿಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
“ಹಲವು ತಂಡಗಳನ್ನು ರಚಿಸಲಾಗಿದೆ. ಆಳವಾದ ತನಿಖೆ ನಡೆಯುತ್ತಿದೆ ಮತ್ತು ಕೆಲವು ಸುಳಿವುಗಳು ಸಿಕ್ಕಿವೆ. ಸಿಸಿಟಿವಿ ದೃಶ್ಯಗಳಿಂದ ಕೆಲವು ಮಾಹಿತಿಗಳನ್ನು ಸಂಗ್ರಹಿಸಲಾಗಿದೆ. ಶಂಕಿತ ಆರೋಪಿಯು ಬಸ್ಸಿನಲ್ಲಿ ಬಂದಿದ್ದಾರೆ ಎಂಬ ಮಾಹಿತಿಯಿದೆ’’ ಎಂದು ಸಚಿವ ಪರಮೇಶ್ವರ ಹೇಳಿದ್ದಾರೆ.
ಕೆಫೆ ಸ್ಫೋಟದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳು ವ್ಯಾವಹಾರಿಕ ಪೈಪೋಟಿ ಮತ್ತು ಲೋಕಸಭೆ ಚುನಾವಣೆಗೆ ಮುನ್ನ ನಗರದಲ್ಲಿ ಭಯಭೀತಗೊಳಿಸುವ ಪ್ರಯತ್ನಗಳು ಸೇರಿದಂತೆ ಹಲವು ಕೋನಗಳನ್ನು ಅನ್ವೇಷಿಸುತ್ತಿವೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಸಚಿವರು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ತನಿಖೆಯನ್ನು ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ
Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ
Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್ ಅಳಲು
BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್ ಪೋರ್ಟಲ್ನಲ್ಲಿ ದಾಖಲಾತಿ
Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.