Rameshwaram Cafe ಸ್ಫೋಟ ನಡೆಸಿದ್ದು ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್: NIA
ಆರೋಪಿಗಳ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರ ವಿಚಾರಣೆ
Team Udayavani, Apr 5, 2024, 7:09 PM IST
ಬೆಂಗಳೂರು: ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆ ಮುಂದುವರೆದಿದೆ. ಸ್ಫೋಟ ನಡೆಸಿದ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂದು ಎನ್ ಐಎ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ತನಿಖೆಯ ವೇಳೆ ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ ಚಿಕ್ಕಮಗಳೂರಿನ ಕಳಸ ನಿವಾಸಿ ಮುಝಮ್ಮಿಲ್ ಶರೀಫ್ ಎಂಬಾತನನ್ನು ಮಾರ್ಚ್ 26ರಂದು ಬಂಧಿಸಲಾಗಿದ್ದು ಪೊಲೀಸ್ ಕಸ್ಟಡಿಯಲ್ಲಿಡಲಾಗಿದೆ.ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ, ಎನ್ಐಎ ತಂಡಗಳು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿದೆ. 10 ಲಕ್ಷ ರೂಪಾಯಿಗಳ ಇನಾಮನ್ನೂ ಘೋಷಿಸಿದೆ.
ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹಿಸಲು ತಲೆಮರೆಸಿಕೊಂಡಿರುವ, ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸಮಯದ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ.
ಪ್ರಕರಣ ಭಯೋತ್ಪಾದಕ ಘಟನೆಯಾಗಿರುವುದರಿಂದ, ಸಾಕ್ಷಿಗಳ ಗುರುತಿನ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗಬಹುದು ಹೊರತಾಗಿ ಸಮನ್ಸ್ ಪಡೆದ ವ್ಯಕ್ತಿಗಳನ್ನು ಅಪಾಯಕ್ಕೆ ಒಳಪಡಿಸಬಹುದು. ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತವೆ ಎಂದು ತನಿಖಾ ಸಂಸ್ಥೆ ಹೇಳಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರವನ್ನೂ ಎನ್ಐಎ ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.