![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ
Team Udayavani, Jun 28, 2024, 1:38 AM IST
![9](https://www.udayavani.com/wp-content/uploads/2024/06/9-18-620x372.jpg)
ಬೆಂಗಳೂರು: ದರ ಏರಿಕೆ ವಿರುದ್ಧ ಸಮರ ಸಾರಿರುವ ರಾಜ್ಯ ಬಿಜೆಪಿ, ಜೂ.29ರಂದು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಸುವಿನ ಹಾಲು ಕರೆದು ಡಿಸಿಗೆ ಕೊಡುವ ಮೂಲಕ ವಿನೂತನ ಪ್ರತಿಭಟನೆಗೆ ಕರೆ ಕೊಟ್ಟಿದೆ.
ರೈತ ಮೋರ್ಚಾದಿಂದ ಈ ವಿಭಿನ್ನ ಪ್ರತಿಭಟನೆಗೆ ನಿರ್ಧರಿಸಿದ್ದು, 50 ಎಂ.ಎಲ್. ಹಾಲು ಹೆಚ್ಚಿಗೆ ಮಾಡಿ 2 ರೂಪಾಯಿ ಹೆಚ್ಚಿಸಿದ್ದೇವೆ ಎನ್ನುವ ಸರ್ಕಾರದ ವಾದಕ್ಕೆ ತಿರುಗೇಟು ನೀಡಲು ತಯಾರಿ ಮಾಡಿಕೊಂಡಿದೆ.
ಗುರುವಾರ ಪಕ್ಷದ ಕಚೇರಿಯಲ್ಲಿ ಈ ಕುರಿತು ವಿವರಣೆ ನೀಡಿದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಕರ್ನಾಟಕ ರಾಜ್ಯದಲ್ಲಿ ಬೆಲೆ ಹೆಚ್ಚಳದ ಪರ್ವ, ಅಭಿಯಾನವನ್ನು ಸರ್ಕಾರವೇ ನಡೆಸುತ್ತಿದೆ. ಈ ಸರ್ಕಾರ ಕಣ್ಣಿದ್ದೂ ಕುರುಡಾಗಿದೆ. ಕಿವಿ ಇದ್ದೂ ಕಿವುಡಾಗಿದೆ. ತಲೆ ಇದ್ದರೂ ಬುದ್ಧಿ ಭ್ರಮಣೆ ಆಗಿದೆ ಎಂದು ಆಕ್ಷೇಪಿಸಿದರು.
ವಿಧಾನಪರಿಷತ್ ಸದಸ್ಯ ಹನುಮಂತ್ ನಿರಾಣಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ರುದ್ರೇಶ್, ಭಾರತಿ ಮಲ್ಲಿಕಾರ್ಜುನ್, ಬ್ಯಾಡರಂಗೇ ಗೌಡ ಇದ್ದರು.
ದೇಶಕ್ಕೆ ಅರ್ಥಶಾಸ್ತ್ರದ ಪಾಠ ಹೇಳುವ ಸಿಎಂಗೆ 50 ಎಂ.ಎಲ್. ಹಾಲನ್ನು ಜಾಸ್ತಿ ಕೊಡಿ ಎಂದು ಯಾರು ಅರ್ಜಿ ಕೊಟ್ಟಿದ್ದರು? ಮಳೆಗಾಲ ಬಂದಾಗ ಮೇವು ಹೆಚ್ಚಿ, ಹಾಲಿನ ಉತ್ಪಾದನೆ ಹೆಚ್ಚುವುದು ಸಹಜ. ಅದರ ವಿಲೇವಾರಿಗೆ ಪರ್ಯಾಯ ಮಾರ್ಗ ಅನುಸರಿಸಬೇಕಿತ್ತೇ ಹೊರತು, ಜನರ ಮೇಲೆ ಹಾಕುವುದಲ್ಲ. ಜನರಿಗೆ ಸಹಾಯ ಮಾಡುವ ಬುದ್ಧಿ ಇವರಿಗಿಲ್ಲ. ದುಡ್ಡು ಹೊಡೆಯುವ ಬುದ್ಧಿ ಇದೆ.-ಆರ್.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಟಾಪ್ ನ್ಯೂಸ್
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.