ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?


Team Udayavani, Jun 17, 2021, 4:09 PM IST

ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದಗೆ ದೂರವಾಣಿ ಕರೆ?

ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ!

ಈ ಬಗ್ಗೆ ಸ್ವತಃ ಶಾಸಕ ಅರವಿಂದ ಬೆಲ್ಲದ ಅವರು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. “ನನಗೆ ಇತ್ತೀಚೆಗೆ ಒಂದು ದೂರವಾಣಿ ಸಂಖ್ಯೆಯಿಂದ ಪದೇ ಪದೇ ಕರೆ ಬರುತ್ತಿದ್ದು, ಯಾರೆಂದು ಕೇಳಿದರೆ, ‘ನಾನು ಸ್ವಾಮಿ ಅಂತಾ ಮಾತನಾಡುವುದು, ಯಾವ ಸ್ವಾಮಿ ಎಂದು ಕೇಳಿದರೆ ‘ಯುವರಾಜ್ ಸ್ವಾಮಿ’ ಎಂದು ಹೆಸರು ಹೇಳುತ್ತಿದ್ದಾನೆ. ಆದರೆ ಆತ ಜೈಲಿನಲ್ಲಿದ್ದಾನೆ. ನನಗೆ ಮಾತ್ರವಲ್ಲದೆ ನನ್ನ ಆಪ್ತ ಸಹಾಯಕರ ದೂರವಾಣಿಗೂ ಪದೇ ಪದೇ ಕರೆಗಳು ಬರುತ್ತಿದೆ” ಎಂದು ಬೆಲ್ಲದ ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:ಎಸ್ ಬಿ ಐ ಸೇರಿ ಹಲವು ಬ್ಯಾಂಕ್ ಗಳೊಂದಿಗೆ ಟೋಕನೈಸೇಶನ್‌ ಸೌಲಭ್ಯಕ್ಕೆ ಮುಂದಾದ ಗೂಗಲ್ ಪೇ..!

ಈ ಕರೆಗಳ ಹಿಂದೆ ಯಾವುದೋ ಕಾಣದ ಕೈಗಳ ಕೈವಾಡವಿದ್ದು, ನಮ್ಮ ಮೇಲೆ ಇಲ್ಲ ಸಲ್ಲದ ಪಿತೂರಿ ನಡೆಸುತ್ತಿದ್ದು, ನಮ್ಮ ಮೊಬೈಲ್ ಟ್ಯಾಪ್ ಆಗಿ ಕದ್ದಾಲಿಕೆಯಾಗುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ ಎಂದದು ಅರವಿಂದ ಬೆಲ್ಲದ ಪತ್ರದಲ್ಲಿ ಬರೆದಿದ್ದಾರೆ. ಮಾತ್ರವಲ್ಲದೆ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.

ಯಾರು ಈ ಯುವರಾಜ್ ಸ್ವಾಮಿ: ಹಲವು ಪ್ರಭಾವಿ ರಾಜಕಾರಣಿಗಳ ಪರಿಚಯವಿದೆ ಎಂದು ಹೇಳಿಕೊಂಡು ರಾಜ್ಯಸಭೆ ಸೀಟು, ರಾಜಕೀಯ ಹುದ್ದೆ, ಉನ್ನತ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಈತ ಸದ್ಯ ಕಂಬಿ ಎಣಿಸುತ್ತಿದ್ದಾನೆ. ಹಲವರಿಂದ  ಕೋಟಿಗಟ್ಟಲೆ ಹಣ ಪಡೆದು ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮಿ ಸದ್ಯ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾನೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.