![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2022, 5:40 AM IST
ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು ಎಂದು ಕರ್ನಾಟಕ ಆಡಳಿತ ಸುಧಾರಣ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ. ಆಯೋಗದ 2ನೆಯ ಹಾಗೂ 3ನೆಯ ವರದಿಯನ್ನು ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್ ಶುಕ್ರವಾರ ಮುಖ್ಯಮಂತ್ರಿಗೆ ಸಲ್ಲಿಸಿದರು.
ಈ ಎರಡೂ ವರದಿಗಳಲ್ಲಿ ಸಮಾಜ ಕಲ್ಯಾಣ, ಅಲ್ಪಸಂಖ್ಯಾಕರ ಕಲ್ಯಾಣ, ಒಳಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ನಗರಾ ಭಿವೃದ್ಧಿ, ಇಂಧನ ಸಹಿತ ಎಂಟು ಇಲಾಖೆಗಳಿಗೆ ಸಂಬಂಧಿಸಿ 588 ಸಾಮಾನ್ಯ, 508 ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಒಟ್ಟು 1,165 ಶಿಫಾರಸುಗಳಿವೆೆ.
ಪ್ರಮುಖ ಶಿಫಾರಸುಗಳು
– ಸರಕಾರದ ವಿವಿಧ ಇಲಾಖೆ ಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು.
– ಎಲ್ಲ ಇಲಾಖೆಗಳ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ಮಾಡಲು ಕಾಯ್ದೆ ಜಾರಿ.
– ಎಲ್ಲ ಅಂಚೆ ಕಚೇರಿಗಳನ್ನು ರಾಜ್ಯ ಸರಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು.
– ಸಾರ್ವಜನಿಕ ಉದ್ಯಮ ಗಳ ಇಲಾಖೆಯನ್ನು ಆರ್ಥಿಕ ಇಲಾಖೆಯಲ್ಲಿ ವಿಲೀನ.
– ಹೊರಗುತ್ತಿಗೆ ಸಿಬಂದಿ ನೇಮಕ ಸಂದರ್ಭ ಎಸ್ಸಿ, ಎಸ್ಟಿ ವರ್ಗಗಳಿಗೆ ಅಗತ್ಯ ಪ್ರಾತಿನಿಧ್ಯ ನೀಡಬೇಕು.
– ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ನಾಗರಿಕ ಸೇವೆಗಳ ಸಹಾಯ ಕೇಂದ್ರ ಸ್ಥಾಪಿಸಬೇಕು.
– ಪೊಲೀಸ್ ಇಲಾಖೆಯ ಕಾನ್ಸ್ಟೆಬಲ್, ಸಬ್ ಇನ್ಸ್ಪೆಕ್ಟರ್ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ.
– ಗ್ರಾ. ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿಗಳ ಅರ್ಜಿ ಪಡೆದು ಶಿಫಾರಸು ಮಾಡುವ ಅಧಿಕಾರ ನೀಡಬಹುದು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.