Kannada ಶಿಕ್ಷಕರನ್ನೇ ನೇಮಿಸಿ; ಮಹಾರಾಷ್ಟ್ರ ಸರಕಾರವನ್ನು ಆಗ್ರಹಿಸಿ ಸಚಿವ ತಂಗಡಗಿ ಪತ್ರ


Team Udayavani, Jun 22, 2024, 12:33 AM IST

Kannada ಶಿಕ್ಷಕರನ್ನೇ ನೇಮಿಸಿ; ಮಹಾರಾಷ್ಟ್ರ ಸರಕಾರವನ್ನು ಆಗ್ರಹಿಸಿ ಸಚಿವ ತಂಗಡಗಿ ಪತ್ರ

ಬೆಂಗಳೂರು: ಮಹಾರಾಷ್ಟ್ರದ ಜತ್‌ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕನ್ನಡ ಸಂಘಟನೆಗಳ ಪ್ರತಿಭಟನೆ, ಆಗ್ರಹಗಳ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ, ಮಹಾರಾಷ್ಟ್ರ ಸರಕಾರಕ್ಕೆ ಈಗಾಗಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ. ಅಲ್ಲಿನ ಜಿಲ್ಲಾಧಿಕಾರಿಯೊಂದಿಗೂ ಚರ್ಚೆ ಮಾಡುತ್ತೇನೆ. ನಮ್ಮ ಮುಖ್ಯಮಂತ್ರಿಯೊಂದಿಗೂ ಚರ್ಚೆ ನಡೆಸಿದ್ದೇನೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಗಡಿ ಪ್ರಾಧಿಕಾರದ ಅಧ್ಯಕ್ಷರು ಕೂಡ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಆದಷ್ಟು ಬೇಗ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಯಾವುದೇ ರೀತಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನವೆಂಬರ್‌ ಒಳಗೆ
ಸಾಹಿತ್ಯ ಸಮ್ಮೇಳನ?
ಮುಂಬರುವ ನವೆಂಬರ್‌ ಒಳಗೆ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಚನೆ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ತಿಳಿಸಿದರು.

ಈ ಬಾರಿ ಸಮ್ಮೇಳನವನ್ನು ಸಕ್ಕರೆ ನಾಡು ಮಂಡ್ಯ ದಲ್ಲಿ ಆಯೋಜಿಸಲಾಗುತ್ತಿದೆ. ಅಲ್ಲಿನ ಉಸ್ತುವಾರಿ ಸಚಿವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಯೊಂದಿಗೆ ಚರ್ಚಿಸಿ ದಿನಾಂಕ ಪ್ರಕಟಿಸಲಾಗು ವುದು. ಅದೇ ರೀತಿ ವಿಶ್ವ ಕನ್ನಡ ಸಮ್ಮೇಳನ ವನ್ನೂ ನಡೆಸಬೇಕು ಎನ್ನುವುದು ನನ್ನ ಆಸೆ. ಈ ಸಂಬಂಧ ಮುಖ್ಯಮಂತ್ರಿ ಗಮನಕ್ಕೆ ತಂದು

ಈ ಹಿಂದೆ ಕೇರಳ ಸರಕಾರ ಇದೇ ರೀತಿ ಕಾಸರ ಗೋಡಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಿ ಶಿಕ್ಷಕರನ್ನು ನೇಮಿಸಿತ್ತು. ನಾನು ಮಧ್ಯಪ್ರವೇಶಿಸಿದ ಬಳಿಕ ಕೇರಳ ಸರಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಈಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ.
-ಶಿವರಾಜ್‌ ತಂಗಡಗಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.