
ಮಳೆಯ ಆರ್ಭಟ: ಜು. 14ರ ವರೆಗೆ ಕರಾವಳಿಗೆ ರೆಡ್ ಅಲರ್ಟ್
Team Udayavani, Jul 10, 2022, 10:34 PM IST

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಜಿಲ್ಲೆಯಲ್ಲಿ ಜು.14ರ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ದಿನಪೂರ್ತಿ ಭಾರೀ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಇದೇ ರೀತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಲ್ಲಿಯೂ ಮಳೆ ಪ್ರಕೋಪ ಮುಂದುವರಿದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪ್ರವಾಸಿಗನ ರಕ್ಷಣೆ
ಶ್ರೀರಂಗಪಟ್ಟಣ: ಇಲ್ಲಿನ ಕಾವೇರಿ ನದಿಗೆ ಸ್ನಾನಕ್ಕೆಂದು ಇಳಿದು ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವ ಪ್ರವಾಸಿಗನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಬೆಳಗಾವಿಯಲ್ಲಿ ಮತ್ತೆ ನೆರೆ ಭೀತಿ
ಪಶ್ಚಿಮ ಘಟ್ಟ ಪ್ರದೇಶದ ಖಾನಾಪುರ, ಬೆಳಗಾವಿ ಹಾಗೂ ನೆರೆಯ ಮಹಾರಾಷ್ಟ್ರದ ಅರಣ್ಯ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ದೂಧ್ಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನರು ಪ್ರವಾಹದ ಆತಂಕದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಆರು ಸೇತುವೆಗಳು ಜಲಾವೃತಗೊಂಡಿವೆ.
ದೂಧ್ಗಂಗಾ ನದಿ ನೀರಿನ ಮಟ್ಟ ಒಂದೇ ದಿನ ಎರಡು ಅಡಿಯಷ್ಟು ಏರಿಕೆಯಾಗಿದ್ದು, ಸುಮಾರು 18 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ಜತೆಗೆ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕವೂ ಕೃಷ್ಣಾ ನದಿಗೆ 57 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 75 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಪ್ರವಾಹದ ಅತಂಕ ಮತ್ತಷ್ಟು ಹೆಚ್ಚಿದೆ.
ಇನ್ನೊಂದೆಡೆ ಮಹಾರಾಷ್ಟ್ರದ ಅಂಬೋಲಿ ಮತ್ತು ಸಾವಂತವಾಡಿ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಘಟಪ್ರಭಾ ನದಿಗೆ 28 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಿಡಕಲ್ ಜಲಾಶಯ ಮಟ್ಟದಲ್ಲಿ ಒಂದೇ ದಿನ ಐದು ಅಡಿಗಳಷ್ಟು ಏರಿಕೆ ಕಂಡುಬಂದಿದೆ. ಒಟ್ಟು 2,175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2,108 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
ಖಾನಾಪುರ ತಾಲೂಕಿನ ಕಣಕುಂಬಿ ಅರಣ್ಯ ಪ್ರದೇಶ ಮತ್ತು ಜಾಂಬೋಟಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಮಲಪ್ರಭಾ ನದಿಯ ಒಳಹರಿವಿನ ಪ್ರಮಾಣ ಗಣನೀಯ ಹೆಚ್ಚಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಲಪ್ರಭಾ ಜಲಾಶಯಕ್ಕೆ 6,700 ಕ್ಯೂಸೆಕ್ ನೀರು ಬರುತ್ತಿದ್ದು, ಈಗ 2,056.40 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
ಕೆಆರ್ಎಸ್ ಭರ್ತಿಗೆ ಕ್ಷಣಗಣನೆ
ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯ 15 ವರ್ಷ ಬಳಿಕ ಇದೇ ಮೊದಲ ಬಾರಿಗೆ ಜುಲೈ ಮೊದಲ ವಾರದಲ್ಲೇ ಭರ್ತಿಯಾಗುತ್ತಿದೆ. 2009ರ ಜುಲೈ 24ರಂದು ಹಾಗೂ 2018ರಲ್ಲಿ ಜು.20ರಂದು ಸಂಪೂರ್ಣ ಭರ್ತಿಯಾಗಿತ್ತು.
ಹದಿನಾರು ಕಾಲು
ಮಂಟಪ ಮುಳುಗಡೆ
ಕಪಿಲಾ ನದಿ ಈ ವರ್ಷ ಇದೇ ಮೊದಲ ಬಾರಿಗೆ ಮೈದುಂಬಿ ಹರಿಯುತ್ತಿದೆ. ನದಿಯ ಮೇಲ್ಭಾಗದಲ್ಲಿರುವ ಕಪಿಲಾ ಜಲಾಶಯದಿಂದ 40 ಕ್ಯೂಸೆಕ್ ನೀರು ಬಿಟ್ಟ ಕಾರಣ ನಂಜನಗೂಡು ನಗರದ ಶ್ರೀಕಂಠೇಶ್ವರ ಸ್ನಾನ ಘಟ್ಟದಲ್ಲಿರುವ ಐತಿಹಾಸಿಕ ಹಿನ್ನೆಲೆಯುಳ್ಳ ಹದಿನಾರು ಕಾಲು ಮಂಟಪ ಮುಳುಗಡೆಗೊಂಡಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.