ಪಡಿತರದಾರರು ಮೊಬೈಲ್ ಸಂಖ್ಯೆ ನೋಂದಣಿ ಮಾಡಿಸಿ
Team Udayavani, Oct 31, 2017, 7:45 AM IST
ಬೆಂಗಳೂರು: ಬಯೋಮೆಟ್ರಿಕ್ ವ್ಯವಸ್ಥೆಗೆ ತಾಂತ್ರಿಕ ಕಾರಣಗಳನ್ನೊಡ್ಡಿ ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಿಸಲು ನಿರಾಕರಿಸುತ್ತಿದ್ದಾರೆಯೇ? ಹಾಗಿದ್ದರೆ ಬಿಪಿಎಲ್ ಕಾರ್ಡ್ದಾರರು ತಮ್ಮ ಮೊಬೈಲ್ ಸಂಖ್ಯೆಗಳನ್ನು ನೋಂದಣಿ ಮಾಡಿಕೊಳ್ಳಿ. ನಿಮ್ಮ ಮೊಬೈಲ್ ಸಂಖ್ಯೆಗೆ ಇಲಾಖೆಯಿಂದ ಬಾರ್ ಕೋಡ್ ಕಳುಹಿಸಲಾಗುತ್ತದೆ. ಅದನ್ನು
ತೋರಿಸಿ ಪಡಿತರ ಪಡೆಯಿರಿ.
– ಹೀಗೆಂದು ಸಚಿವ ಯು.ಟಿ.ಖಾದರ್ ರಾಜ್ಯದ ಪಡಿತರ ಚೀಟಿದಾರರಲ್ಲಿ ಮನವಿ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಆಹಾರ ಧಾನ್ಯ ದುರುಪಯೋಗ ಬಾರದು ಎಂಬ ಕಾರಣಕ್ಕೆ
ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಪಾಯಿಂಟ್ ಆಫ್ಸೇಲ್ ಯಂತ್ರಗಳನ್ನು ಅಳವಡಿಸಿ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸುತ್ತಿದೆ. ಒಟ್ಟು 20,372 ನ್ಯಾಯಬೆಲೆ ಅಂಗಡಿಗಳ ಪೈಕಿ 13,150 ನ್ಯಾಯಬೆಲೆ ಅಂಗಡಿಗಳಿಗೆ ಪಾಯಿಂಟ್ ಆಫ್ ಸೇಲ್ ಮಿಷನ್ ಅಳವಡಿಸಲಾಗಿದೆ.
ಕೆಲವೆಡೆ, ಇಂಟರ್ನೆಟ್ ಸಮಸ್ಯೆ ಮತ್ತಿತರ ಕಾರಣಗಳನ್ನು ಹೇಳಿ ಆಹಾರಧಾನ್ಯ ನೀಡಲು ನಿರಾಕರಿಸುತ್ತಿರುವ
ದೂರುಗಳು ಬಂದಿವೆ. ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಡಿಸೆಂಬರ್ ಅಂತ್ಯದ ವೇಳೆಗೆ
ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲೂ ಯಂತ್ರ ಅಳವಡಿಸುವ ಕಾರ್ಯ ಮುಗಿಯಲಿದೆ. ಅಷ್ಟರೊಳಗೆ ಎಲ್ಲಾ ಕಾರ್ಡ್ದಾರರು ತಮ್ಮ ಮೊಬೈಲ್ ಸಂಖ್ಯೆಗಳನ್ನು ನೋಂದಣಿ ಮಾಡಿಸುವಂತೆ ತಿಳಿಸಿದರು.
ಕಳೆದ 8 ತಿಂಗಳಿ ನಿಂದ ಕಾರ್ಡ್ದಾರರಿಗೆ ಗೋಧಿ ವಿತರಣೆ ಸ್ಥಗಿತಗೊಳಿಸಿ ಪ್ರತಿ ವ್ಯಕ್ತಿಗೆ 7 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಿಂದ ಗೋಧಿಗೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಷ್ಟು ಗೋಧಿ ಬೇಕಾಗುತ್ತದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಲಾಗಿದ್ದು, ವರದಿ ಬಂದ
ಕೂಡಲೇ ಪ್ರತಿ ವ್ಯಕ್ತಿಗೆ 7 ಕೆ.ಜಿ.ಆಹಾರ ಧಾನ್ಯದಲ್ಲಿ 2 ಕೆ.ಜಿ. ಗೋಧಿ ಮತ್ತು 5 ಕೆ.ಜಿ. ಅಕ್ಕಿ ವಿತರಿಸಲು ಕ್ರಮ
ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.