Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್ ಕಥೆಯೇನು?
Team Udayavani, Sep 23, 2024, 4:05 PM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ (Darshan) ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸೋಮವಾರ (ಸೆ.23ರಂದು) ನಡೆದಿದೆ.
ಪ್ರಕರಣದಲ್ಲಿ ಎ1, ಎ2 ಆಗಿರುವ ದರ್ಶನ್, ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.
ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈ ಶಂಕರ್ ಅವರು ಆದೇಶಿಸಿದ್ದಾರೆ. ಇತ್ತ ಎಸ್ ಪಿಪಿ ಆಕ್ಷೇಪಣೆಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಲಾಗಿದೆ.
ದರ್ಶನ್ ಅವರ ಪರ ವಕೀಲರು ಶನಿವಾರ ಜಾಮೀನು ಕೋರಿ ನಗರದ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ಸೆ.23ಕ್ಕೆ ವಿಚಾರಣೆ ಮುಂದೂಡಿದ್ದರು.
ಮೂವರಿಗೆ ಜಾಮೀನು: ಈ ಪ್ರಕರಣದಲ್ಲಿ ಸಾಕ್ಷ್ಯನಾಶ ಆರೋಪವಿದ್ದ ಮೂವರಿಗೆ ಜಾಮೀನು ಮಂಜೂರು ಆಗಿದೆ. ಎ15 ಕಾರ್ತಿಕ್, ಎ16 ಕೇಶವಮೂರ್ತಿಗೆ , ಎ17 ನಿಖಿಲ್ ನಾಯಕ್ ಅವರಿಗೆ ಜಾಮೀನು ಮಂಜೂರು ಆಗಿದೆ 57ನೇ ಸಿಸಿಹೆಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ಕೇಶವಮೂರ್ತಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ತುಮಕೂರು ಜೈಲಿನಲ್ಲಿ ಕೇಶವಮೂರ್ತಿ ಇದ್ದರು. ಕೊನೆ ನಂತರದ ಸಾಕ್ಷ್ಯ ನಾಶ ಆರೋಪ ಮಾತ್ರ ಇವರ ಮೇಲಿತ್ತು. ಈ ಜಾಮೀನು ಇತರೆ ಆರೋಪಿಗಳ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಕೋರ್ಟ್ ಗೆ ಹೇಳಿದೆ.
ಕೇಶವಮೂರ್ತಿ ಪರ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಕೊಲೆ ಬಳಿಕ ಶೆಡ್ಗೆ ತೆರಳಿ 5 ಲಕ್ಷ ರೂ. ಅಡ್ವಾನ್ಸ್ ಹಣ ಪಡೆದು ಕೇಶವಮೂರ್ತಿ ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಇತ್ತೀಚೆಗೆ ಅವರ ತಾಯಿ, ಪತ್ನಿ ಹಾಗೂ ಸಹೋದರ ಭೇಟಿ ಆಗಿದ್ದರು. ಕಳೆದ ಮೂರು ತಿಂಗಳಿನಿಂದ ಪ್ರಕರಣ ಸಂಬಂಧ ದರ್ಶನ್ ಜೈಲಿನಲ್ಲಿದ್ದಾರೆ.
ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ದರ್ಶನ್ ಅವರಿಗೆ ಜಾಮೀನು ವಿಚಾರದಲ್ಲಿ ಟೆನ್ಷನ್ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalakshmi 50 ಪೀಸ್ ಕೇಸ್; ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ: ನಗರ ಪೊಲೀಸ್ ಆಯುಕ್ತ
Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ
Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು
ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!
Prakarana Tanikha Hantadallide Movie; ಟ್ರೇಲರ್ ನಲ್ಲಿ ಪ್ರಕರಣದ ವಿವರ
Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ
Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ
ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್-ಜಲಸಾಹಸ ಕ್ರೀಡೆಗೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.