![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
Renukaswamy Case; ದರ್ಶನ್ ಗ್ಯಾಂಗ್ ವಿರುದ್ಧ 120ಕ್ಕೂ ಹೆಚ್ಚು ಸಾಕ್ಷಿ
ಹಲ್ಲೆ ವಿಡಿಯೋ ಚಿತ್ರೀಕರಿಸಿದ ಮೂವರ ವಿಚಾರಣೆ; 28 ಕಡೆ ಪೊಲೀಸರ ಮಹಜರು
Team Udayavani, Jun 22, 2024, 7:05 AM IST
![Renukaswamy Case; ದರ್ಶನ್ ಗ್ಯಾಂಗ್ ವಿರುದ್ಧ 120ಕ್ಕೂ ಹೆಚ್ಚು ಸಾಕ್ಷಿ](https://www.udayavani.com/wp-content/uploads/2024/06/Renukaswamy-Case-620x331.jpg)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ ಟೀಂ ವಿರುದ್ಧ ತನಿಖಾಧಿಕಾರಿಗಳು ಬರೋಬ್ಬರಿ 120ಕ್ಕೂ ಹೆಚ್ಚಿನ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳು ಧರಿಸಿದ್ದ ಬಟ್ಟೆ, ಶೂ, ಚಪ್ಪಲಿ, ಆರೋಪಿಗಳ ಮೊಬೈಲ್ಗಳು, ಪಟ್ಟಣಗೆರೆ ಶೆಡ್ನಲ್ಲಿ ಹಲ್ಲೆಗೆ ಬಳಸಿದ್ದ ಲಾಠಿ, ಮರದ ರಿಪ್ ಪೀಸ್, ತುಳಿದ ಶೂಗಳು, ಆರೋಪಿಗಳು ತಂಗಿದ್ದ ಹೋಟೆಲ್ ಲೆಡ್ಜರ್ ಬುಕ್ನಲ್ಲಿ ಹೆಸರು ನಮೂದಾಗಿರುವುದು, ಸಿಸಿ ಕೆಮರಾ ರೆಕಾರ್ಡ್, ಕೃತ್ಯ ನಡೆದ ವೇಳೆ ರೇಣುಕಾಸ್ವಾಮಿ ಕರೆ ತಂದಿರುವ ಕಾರು, ಶವ ಎಸೆಯಲು ಬಳಸಿರುವ ಕಾರು, ದರ್ಶನ್ನಿಂದ ಆರೋಪಿಗಳು ಪಡೆದುಕೊಂಡಿದ್ದ ಹಣ, ಪ್ರಕರಣದಲ್ಲಿ 28 ಕಡೆ ಮಹಜರು ಮಾಡಿರುವುದು, ರೇಣುಕಾಸ್ವಾಮಿ ಕರೆತಂದು ಹಲ್ಲೆ ಕೃತ್ಯ ನಡೆಸಿದ ಪಟ್ಟಣಗೆರೆ ಶೆಡ್, ಶವ ಎಸೆದ ಆರೋಪಿಗಳು ಆರ್.ಆರ್.ನಗರದ ಹೊಟೇಲ್ ತಂಗಿರುವುದು ಸೇರಿದಂತೆ 120ಕ್ಕೂ ಹೆಚ್ಚಿನ ಸಾಕ್ಷ್ಯಗಳು ಪೊಲೀಸರ ಕೈ ಸೇರಿದೆ ಎಂದು ತಿಳಿದು ಬಂದಿದೆ.
ಮೂವರ ವಿಚಾರಣೆ
ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನು ಮೊಬೈಲ್ನಲ್ಲಿ ವೀಡಿಯೋ ಮಾಡಿಕೊಂಡಿದ್ದಾರೆ ಎನ್ನಲಾದ ಮೂವರನ್ನು ವಿಚಾರಣೆ ನಡೆಸಲಾಗಿದೆ.
ಹಲ್ಲೆ ವೀಡಿಯೋವನ್ನು ಬೇರೆಯವರಿಗೂ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಮೊಬೈಲ್ ಪರಿಶೀಲನೆ ವೇಳೆ ವೀಡಿಯೋ ಡಿಲೀಟ್ ಮಾಡಿರುವುದು ಕಂಡು ಬಂದಿದೆ ಎನ್ನಲಾಗಿದೆ. ಆದರೆ ಇವರ ವಿರುದ್ಧ ಸೂಕ್ತ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.
ಆರೋಪಿ ಮೊಬೈಲ್ ಬಚ್ಚಿಟ್ಟ ದೀಪಕ್
ಪೊಲೀಸರಿಗೆ ಶರಣಾಗಲು ಆರಂಭದಲ್ಲಿ ಕಾರ್ತಿಕ್ ಅಲಿಯಾಸ್ ಕಪ್ಪೆ ನಿರಾಕರಿಸಿದ್ದ. ಈ ಕಾರಣಕ್ಕೆ ಫೋನ್ ಕಸಿದಿದ್ದ ದೀಪಕ್, ಆ ಮೊಬೈಲ್ ಅನ್ನು ಪಟ್ಟಣಗೆರೆ ಶೆಡ್ನಲ್ಲಿ ಬಚ್ಚಿಟ್ಟಿದ್ದ. ಆರೋಪಿ ದೀಪಕ್ನ ವಿಚಾರಣೆ ವೇಳೆ ಈ ಸಂಗತಿ ಹೊರ ಬಿದ್ದಿದೆ. ಇದೀಗ ಶೆಡ್ಗೆ ಹೋಗಿ ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಾಗೇಶ್ ವಕಾಲತ್ತು?
ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಈಗಾಗಲೇ ದರ್ಶನ್ ಆಪ್ತರು ಸಿ.ವಿ. ನಾಗೇಶ್ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಇದೊಂದು ಹೈ ಪ್ರೊಫೈಲ್ ಪ್ರಕರಣ ಆಗಿರುವುದರಿಂದ ಸಿ.ವಿ. ನಾಗೇಶ್ ಅವರೇ ವಾದ ನಡೆಸುವುದು ಸೂಕ್ತವೆಂದು ದರ್ಶನ್ ಕುಟುಂಬ ಹಾಗೂ ಅವರ ಆಪ್ತರು ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ](https://www.udayavani.com/wp-content/uploads/2024/06/hrdik-150x83.jpg)
Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ
![ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ](https://www.udayavani.com/wp-content/uploads/2024/06/5-19-150x90.jpg)
ಈ ವಿಚಾರದಲ್ಲಿ ಶಾರುಖ್ ಖಾನ್ ʼಜವಾನ್ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
![8-health](https://www.udayavani.com/wp-content/uploads/2024/06/8-health-150x90.jpg)
PCOD (ಪಾಲಿಸಿಸ್ಟಿಕ್ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.