Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ರೇಣುಕಾಸ್ವಾಮಿ ಕೊಲೆಯಲ್ಲಿ ತನ್ನ ಹೆಸರು ಬಾರದಂತೆ ಸಾಕ್ಷ್ಯ ನಾಶಕ್ಕೆ ಸಂಗ್ರಹಿಸಿಟ್ಟಿದ್ದ ಹಣ ದುಡ್ಡಿನ ಮೂಲದ ಬಗ್ಗೆ ಸಿಗದ ಸೂಕ್ತ ದಾಖಲೆ

Team Udayavani, Jun 22, 2024, 7:20 AM IST

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿ, ತಮ್ಮ ಹೆಸರು ಥಳಕು ಹಾಕದಂತೆ ನೋಡಿಕೊಳ್ಳಲು ಸಂಗ್ರಹಿಸಿಟ್ಟಿದ್ದ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನಿಂದ ಇದುವರೆಗೆ ಪೊಲೀಸರು
70 ಲಕ್ಷ ರೂ. ಅನ್ನು ಜಪ್ತಿ ಮಾಡಿದ್ದು ಇದರ ಮೂಲ ಪತ್ತೆ ಹಚ್ಚಲು ಖಾಕಿ ಮುಂದಾಗಿದೆ. ಈ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆಯೂ (ಐಟಿ) ಎಂಟ್ರಿ ಕೊಡುವ ಸಾಧ್ಯತೆಯೂ ಇದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕೊಲೆ ಸಾಕ್ಷ್ಯ ನಾಶಪಡಿಸಲು ದರ್ಶನ್‌ ಆ್ಯಂಡ್‌ ಗ್ಯಾಂಗ್‌ ರೆಡಿ ಮಾಡಿದ್ದ 70 ಲಕ್ಷ ರೂ. ತನಿಖಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಈ ದುಡ್ಡಿನ ಮೂಲದ ಬಗ್ಗೆ ಸೂಕ್ತ ದಾಖಲೆ ಸಿಕ್ಕಿಲ್ಲ. ಹೀಗಾಗಿ ಶೀಘ್ರದಲ್ಲೇ ಐಟಿ ಅಧಿಕಾರಿಗಳು ಅಥವಾ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪ್ರಕರಣದಲ್ಲಿ ಮಧ್ಯ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಜಪ್ತಿ ಮಾಡಿರುವ ದುಡ್ಡಿಗೆ ಸೂಕ್ತ ದಾಖಲೆ ಒದಗಿಸದೆ ಇದ್ದರೆ ಐಟಿ ಅಧಿಕಾರಿಗಳು ದರ್ಶನ್‌ ಹಾಗೂ ಮೋಹನ್‌ ರಾಜ್‌ಗೆ ನೋಟಿಸ್‌ ನೀಡಿ ಈ ಬಗ್ಗೆ ಮಾಹಿತಿ ಕೇಳುವ ಸಾಧ್ಯತೆಗಳಿವೆ. ಅಕ್ರಮ ಹಣ ವರ್ಗಾವಣೆ ಮಾಡಿದರೆ ಇಡಿ ತನಿಖೆ ನಡೆಸುವ ಸಾಧ್ಯತೆಗಳಿವೆ.

ಹಲವೆಡೆಗಳಿಂದ ಹಣ ಜಪ್ತಿ
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ ತನ್ನ ಸಹಚರರಿಗೆ ನೀಡಿದ್ದ 40 ಲಕ್ಷ ರೂ. ಅನ್ನು ಮಾಜಿ ಕಾರ್ಪೊರೇಟರ್‌ ಮೋಹನ್‌ ರಾಜ್‌ನಿಂದ ಪಡೆದಿರುವುದು ಕಂಡುಬಂದಿದೆ. ಈ ಪೈಕಿ 3 ಲಕ್ಷ ರೂ. ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿಟ್ಟಿದ್ದರು. ಈ 40 ಲಕ್ಷ ರೂ. ಸದ್ಯ ಖಾಕಿ ಕೈ ಸೇರಿದೆ. ಇದಲ್ಲದೇ ಶರಣಾಗುವ ಆರೋಪಿಗಳಿಗೆ ನೀಡಲೆಂದು ಆರ್‌.ಆರ್‌. ನಗರದ ಮತ್ತೋರ್ವ ಆರೋಪಿ ವಿನಯ್‌ ಮನೆಯಲ್ಲಿದ್ದ 30 ಲಕ್ಷ ರೂ. ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಒಟ್ಟಾರೆ ಪ್ರಕರಣದಲ್ಲಿ 70 ಲಕ್ಷ ರೂ. ಅನ್ನು ಜಪ್ತಿ ಮಾಡಿದಂತಾಗಿದೆ.

ಮೋಹನ್‌ ರಾಜ್‌ಗಾಗಿ
ಎಸ್‌ಐಟಿ ಹುಡುಕಾಟ
ದರ್ಶನ್‌ಗೆ 40 ಲಕ್ಷ ರೂ. ನೀಡಿದ್ದ ಆಪ್ತ ಸ್ನೇಹಿತ ಮೋಹನ್‌ ರಾಜ್‌ಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಆದರೆ ಮೋಹನ್‌ ರಾಜ್‌ ಸದ್ಯ ನಾಪತ್ತೆಯಾಗಿದ್ದು ಆತನಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಪ್ರಕರಣದಲ್ಲಿ ತನ್ನ ಹೆಸರು ತಳುಕು ಹಾಕುತ್ತಿದ್ದಂತೆ ಮೋಹನ್‌ ರಾಜು ಫೋನ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದಾನೆ. ಇದೀಗ ಮನೆಗೆ ಹೋಗಿ ನೋಟಿಸ್‌ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿ¨ªಾರೆ. ಈ ಹಣ ನೀಡುವ ವೇಳೆ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ಮಾಹಿತಿ ಇತ್ತೇ ಇಲ್ಲವೇ ಎಂಬುದು ತನಿಖೆಯಿಂದ ಬೆಳಕಿಗೆ ಬರಬೇಕಿದೆ.

ಯಾರು ಈ ಮೋಹನ್‌ ರಾಜ್‌?
ಮೋಹನ್‌ ರಾಜು ಬೆಂಗಳೂರಿನಲ್ಲಿ 2019ರಲ್ಲಿ ಬೊಮ್ಮನಹಳ್ಳಿ ವಾರ್ಡ್‌ ಕಾರ್ಪೊರೇಟರ್‌ ಆಗಿದ್ದ. ರಾಜಕೀಯ ವಲಯದಲ್ಲಿ ಪ್ರಭಾವಿ ವ್ಯಕ್ತಿ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ 2018ರಲ್ಲಿ ಇದೇ ಮೋಹನ್‌ ರಾಜ್‌ ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್‌ ಸಿಬಂದಿ ಎದುರೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

 

ಟಾಪ್ ನ್ಯೂಸ್

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.