Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
Team Udayavani, Jul 6, 2024, 1:53 AM IST
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂಬಂಧ ಶವ ವಿಲೇವಾರಿಗೆ ಬಳಸಿದ ಮಾರ್ಗ, ಸುಮನಹಳ್ಳಿ ಮೋರಿಯಲ್ಲಿ ಶವ ಎಸೆದ ಜಾಗ ಸೇರಿದಂತೆ ಆರೋಪಿಗಳ ಕೆಲ ಚಟು ವಟಿಕೆಗಳ ಕುರಿತು ಸಮಗ್ರ ಬ್ಲೂ ಪ್ರಿಂಟ್ ರಚಿಸಿ ಕೊಡುವಂತೆ ಲೋಕೋಪಯೋಗಿ ಇಲಾಖೆಗೆ ಪೊಲೀಸರು ಪತ್ರ ಬರೆದು ಮನವಿ ಮಾಡಿದ್ದಾರೆ.
ಆರೋಪಿಗಳು ಕೊಲೆ ಕೃತ್ಯವೆಸಗಿದ ಸ್ಥಳ, ಶವ ವಿಲೇವಾರಿಗೆ ಓಡಾಡಿದ ಸ್ಥಳಗಳು, ಮೃತನ ಶವ ಎಸೆದ ಸ್ಥಳದ ನಕ್ಷೆಯನ್ನು ತಯಾರು ಮಾಡಿಕೊಡುವಂತೆ ಕಟ್ಟಡಗಳ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳು ಬಳಸುತ್ತಿದ್ದ ಸಿಮ್ ಗಳು ಬೇರೆಯವರ ಹೆಸರಿನಲ್ಲಿವೆ. ಇದೀಗ ಸಿಮ್ ಕಾರ್ಡ್ನ ಮಾಲಕರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸ್ಥಳದಲ್ಲಿ ಸಿಕ್ಕಿರುವ ಬೆರಳಮುದ್ರೆಗಳಿಗೂ ಆರೋಪಿಗಳಿಂದ ಸಂಗ್ರಹಿಸಲಾಗಿರುವ ಫಿಂಗರ್ ಪ್ರಿಂಟ್ಗಳು ತಾಳೆಯಾಗುತ್ತವೆಯೇ ಎಂಬುದನ್ನು ಅರಿಯಲು ನಗರ ಫಿಂಗರ್ ಪ್ರಿಂಟ್ ವಿಭಾಗಕ್ಕೆ ಪೊಲೀಸರು ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.