Govt., ಹಳೆಯ ಮೊಬೈಲ್, ಟಿವಿ ಮರು ಖರೀದಿ ಕಡ್ಡಾಯ: ಸರಕಾರ ಚಿಂತನೆ
ಇ-ತ್ಯಾಜ್ಯಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ಎಂದ ಅರಣ್ಯ ಸಚಿವ
Team Udayavani, Sep 10, 2024, 11:38 PM IST
ಬೆಂಗಳೂರು: ಮನೆಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟಿವಿ, ಮೊಬೈಲ್ನಂತಹ ಇ-ತ್ಯಾಜ್ಯಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸರಕಾರ ಇನ್ನು ಮುಂದೆ ವಿದ್ಯುನ್ಮಾನ ಉಪಕರಣಗಳ ವಹಿವಾಟಿನಲ್ಲಿ “ಹಳೆಯ ಉತ್ಪನ್ನಗಳ ಮರುಖರೀದಿ’ ಕಡ್ಡಾಯಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಈ ಕುರಿತು ಪ್ರಸ್ತಾವನೆಯೊಂದನ್ನು ಮಂಡಿಸಿದ್ದು, ಸಾಧಕ ಬಾಧಕಗಳ ಅಧ್ಯಯನ ನಡೆಸುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ ಪತ್ರ ಬರೆದಿದ್ದಾರೆ.
ಇ-ತ್ಯಾಜ್ಯದ ನಿಯಂತ್ರಣಕ್ಕಾಗಿ, ಯಾವುದೇ ವಿದ್ಯುನ್ಮಾನ ಉಪಕರಣ ಖರೀದಿಸುವಾಗ ಗ್ರಾಹಕರು ಇಚ್ಛಿಸಿದಲ್ಲಿ, ಅವರ ಹಳೆಯ ವಿದ್ಯುನ್ಮಾನ ಉಪಕರಣಗಳನ್ನು ಮಾರಾಟಗಾರರು ಕಡ್ಡಾಯವಾಗಿ ಕನಿಷ್ಠ ಬೆಲೆಯಲ್ಲಿ ಖರೀದಿಸುವ ನಿಯಮ ಜಾರಿಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಕಂಪ್ಯೂಟರ್, ಮೊಬೈಲ್ ದತ್ತಾಂಶಗಳು ದುರ್ಬಳಕೆ ಆಗದ ರೀತಿಯಲ್ಲಿ ಹಳೆಯ ವಿದ್ಯುನ್ಮಾನ ಸಲಕರಣೆಗಳ ಮರುಖರೀದಿಯ ಸಾಧಕ-ಬಾಧಕ ಮತ್ತು ಅನುಷ್ಠಾನ ಕುರಿತಂತೆ ತಮಗೆ ಮುಂದಿನ 30 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಚಿವ ಖಂಡ್ರೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.