![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 28, 2022, 10:45 PM IST
ವಿಧಾನಪರಿಷತ್ತು: ಪಡಿತರ ಚೀಟಿದಾರರಿಗೆ ವಿತರಿಸುವ ರಾಗಿ, ಜೋಳ ಖರೀದಿಯ ನಿಗದಿತ ಗುರಿ ತಲುಪಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪಡಿತರ ಚೀಟಿದಾರರಿಗೆ ವಿತರಿಸುವ ರಾಗಿ, ಜೋಳ ಪ್ರಕ್ರಿಯೆ ನಿಗದಿತ ಪ್ರಮಾಣದಲ್ಲಿ ನಡೆದಿಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು 8 ಲಕ್ಷ ಮೆಟ್ರಿಕ್ ಟನ್ನಷ್ಟು ರಾಗಿ ಮತ್ತು ಜೋಳ ಖರೀದಿಸುವ ಗುರಿ ಹೊಂದಿತ್ತು. ಆದರೆ ಖರೀದಿಸಿರುವುದು ಕೇವಲ 3.81 ಲಕ್ಷ ಮೆಟ್ರಿಕ್ ಟನ ಮಾತ್ರ, ಅದರಲ್ಲೂ ಏ.1ರಿಂದ ಪಡಿತರದಲ್ಲಿ ಗೋಧಿಯನ್ನು ಕೈ ಬಿಟ್ಟು ಕೇವಲ ಅಕ್ಕಿ ಮತ್ತು ಹೆಚ್ಚುವರಿಯಾಗಿ 1 ಕೆ.ಜಿ.ರಾಗಿ ಅಥವಾ ಜೋಳ ವಿತರಿಸಲಿದೆ. ಆಹಾರ ಧಾನ್ಯಗಳು ಕಡಿಮೆ ಪ್ರಮಾಣದಲ್ಲಿ ಸಂಗ್ರಹವಾಗಿರುವುದರಿಂದ ಖರೀದಿಯಲ್ಲಿ ಕುಸಿತವಾಗಿದ್ದು, ಇದು ವಿತರಣೆ ಮೇಲೆ ಪರಿಣಾಮ ಬೀರಲಿದೆ ಎಂದರು.
ಇದನ್ನೂ ಓದಿ:ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕನಿಂದ ಅಶ್ಲೀಲ ಸಂದೇಶ : ಪ್ರಶ್ನಿಸಿದ ವಿದ್ಯಾರ್ಥಿಗೆ ಬೆದರಿಕೆ
ಕಡಿಮೆ ಪ್ರಮಾಣದ ರಾಗಿ, ಜೋಳ ಖರೀದಿ ಆಗಿರುವುದರಿಂದ ಪಡಿತರ ಚೀಟಿ ಹೊಂದಿರುವವರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಆ ಧಾನ್ಯಗಳನ್ನು ವಿತರಿಸಲು ಸಾಧ್ಯವಿಲ್ಲ. ಅಲ್ಲದೇ ಇನ್ನೂ ಸಹ ಸರ್ಕಾರದ ಖರೀದಿಮುಗಿದಿಲ್ಲ. ಸರ್ಕಾರ ನಿರ್ದಿಷ್ಟ ಖರೀದಿ ಗುರಿಯನ್ನು ತಲುಪಲು ಕ್ರಮ ಕೈಗೊಳ್ಳಬೇಕು ಮತ್ತು ಹೆಚ್ಚಿನ ಆಹಾರ ಧಾನ್ಯಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹರೀಶ್ ಕುಮಾರ್ ಆಗ್ರಹಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.