Karnataka Govt., ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರಕಾರಕ್ಕೆ ಇಕ್ಕಟ್ಟು !

ಅತ್ತ ಮೀಸಲಾತಿಗೆ ಉದ್ಯಮ ವಲಯದಿಂದ ಭಾರೀ ವಿರೋಧ; ಕಾನೂನು ಜಾರಿಗೆ ಕರವೇ ಸೇರಿ ಕನ್ನಡಪರ ಸಂಘಗಳ ಪಟ್ಟು

Team Udayavani, Jul 19, 2024, 7:15 AM IST

Karnataka Govt., ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರಕಾರಕ್ಕೆ ಇಕ್ಕಟ್ಟು !

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಜಾರಿಗೆ ತಾತ್ಕಾಲಿಕ ತಡೆ ನೀಡಿರುವ ರಾಜ್ಯ ಸರಕಾರ ಈಗ ಇಕ್ಕಟ್ಟಿಗೆ ಸಿಲುಕಿದೆ. ಒಂದು ವೇಳೆ ಮಸೂದೆ ಜಾರಿಗೆ ಮುಂದಾದರೆ ಉದ್ಯಮ ವಲಯಗಳ ವಿರೋಧ ಎದುರಿಸಬೇಕಾಗುತ್ತದೆ. ಜಾರಿ ಮಾಡ ದಿದ್ದರೆ ಸರಕಾರ ಕನ್ನಡಿಗರ ಪರ ಇಲ್ಲ ಎಂಬ ಹಣೆಪಟ್ಟಿಗೆ ಒಳಗಾಗಬೇಕಾಗುತ್ತದೆ.
ಒಂದರ್ಥದಲ್ಲಿ ನುಂಗಿದರೆ ಕಷ್ಟ, ನುಂಗದಿದ್ದರೆ ಇನ್ನೂ ಕಷ್ಟ ಎಂಬುದು ಸರಕಾರದ ಈಗಿನ ಪರಿಸ್ಥಿತಿಯಾಗಿದೆ.

ಕನ್ನಡಿಗರಿಗೆ ಮೀಸಲು ಮಸೂದೆ ಇನ್ನೇನು ಈ ಅಧಿವೇಶನದಲ್ಲೇ ಮಂಡನೆಯಾಗುತ್ತದೆ ಎಂಬ ನಿರೀಕ್ಷೆ ಇತ್ತು. ಉದ್ಯಮ ವಲಯದಿಂದ ವ್ಯಕ್ತವಾದ ಭಾರೀ ಆಕ್ರೋಶದ ಜತೆಗೆ ಸಚಿವ ಸಂಪುಟದಲ್ಲೂ ಕಾಣಿಸಿಕೊಂಡ ಅಪಸ್ವರದಿಂದ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ತಾತ್ಕಾಲಿಕ ವಾಗಿ ಈ ಮಸೂದೆ ಮಂಡನೆಯನ್ನು ತಡೆಹಿಡಿಯಲಾಗಿದೆ, ಸೋಮವಾರದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪರಾಮರ್ಶೆ ನಡೆಸಲಾಗುವುದು ಎಂದು ಹೇಳುವ ಮೂಲಕ ಹಾನಿ ನಿಯಂತ್ರಣ ಮಾಡಿದ್ದಾರೆ.

ಆದರೆ ಈ ಬೆಳವಣಿಗೆಗೆ ಕನ್ನಡಪರ ಸಂಘಟನೆಗಳಿಂದ ಸಾಕಷ್ಟು ಟೀಕೆಗಳನ್ನು ಸರಕಾರ ಎದುರಿಸುತ್ತಿದೆ.

ಅಧಿವೇಶನದಲ್ಲಿ ಮಸೂದೆ ಮಂಡಿಸದೆ ತಡೆ ಹಿಡಿದಿರುವ ಕ್ರಮ ಕನ್ನಡಿಗರು, ಕನ್ನಡಪರ ಸಂಘಟನೆ, ಹೋರಾಟಗಾರರಲ್ಲಿ ಸಾಕಷ್ಟು ಅಸಮಾಧಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರ ಮತ ಪಡೆದು ಅಧಿಕಾರಕ್ಕೆ ಬಂದ ಸರಕಾರ ಉದ್ಯಮಿಗಳಿಗೆ ಹೆದರುವ ಪರಿಸ್ಥಿತಿ ಬಂತಲ್ಲ ಎಂಬ ಬೇಸರ ಕನ್ನಡಪರ ಹೋರಾಟಗಾರರದ್ದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಕನ್ನಡಿಗರ ಪರ ಎಂದು ಸಾಬೀತುಪಡಿಸಲು ಸಕಾಲ. ಕನ್ನಡಿಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಸರಕಾರ ಮಣಿಯಬಾರದು ಎಂದು ರೈತಪರ ಸಂಘಟನೆಗಳ ಸಹಿತ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ. ಬ್ಲ್ಯಾಕ್‌ಮೇಲ್ ತಂತ್ರಕ್ಕೆ ಮಣಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂಬ ಎಚ್ಚರಿಕೆ ಸಂದೇಶವನ್ನು ಸರಕಾರಕ್ಕೆ ರವಾನಿಸಿವೆ.

15 ದಿನಗಳ ಗಡುವು ನೀಡಿದ ಕರವೇ
ಖಾಸಗಿ ವಲಯದಲ್ಲಿ ಕನ್ನಡಿಗರ ಮೀಸಲಾತಿ ಜಾರಿ ನಿರ್ಧಾರದಿಂದ ಹಿಂದೆ ಸರಿದಿರುವ ಸರಕಾರದ ಕ್ರಮದ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಗುಡುಗಿದ್ದಾರೆ. ನಾನು ಯಾವತ್ತೂ, ಕನ್ನಡಿಗರ ಪರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಯಮಿಗಳ ಯಾವುದೇ ಬ್ಲ್ಯಾಕ್‌ಮೇಲ್ ಗೆ ಹೆದರಬಾರದು. ಇಡೀ ಕನ್ನಡಿಗರು ಸರಕಾರದ ಪರ ಇದ್ದಾರೆ. 15 ದಿನಗಳ ಒಳಗೆ ಮಸೂದೆಯಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿ ಮಂಡನೆಗೆ ನಿರ್ಣಯ ಮಾಡಬೇಕು. ಇಲ್ಲದೆ ಹೋದರೆ ಕನ್ನಡಿಗರು ದಂಗೆ ಏಳಲಿದ್ದಾರೆ. ಜತೆಗೆ ಕರವೇ ಕೂಡ ದಂಗೆಗೆ ಕರೆ ನೀಡಲಿದೆ ಎಂದು ಎಚ್ಚರಿಸಿದರು.

ಮಸೂದೆ ಜಾರಿಗೆ ವಿರೋಧ ವ್ಯಕ್ತಪಡಿಸಿರುವ ಉದ್ಯಮಿ ಮೋಹನ್‌ದಾಸ್‌ ಪೈ ವಿರುದ್ಧ ನಾರಾಯಣ ಗೌಡ ಕಿಡಿಕಾರಿದರು.
ಕನ್ನಡಿಗರಿಗೆ ಎಸಗಿರುವ ದ್ರೋಹ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ಸರಕಾರ ನಿಲುವು ಬದಲಾಯಿಸಿರುವುದು ಸರಿಯಲ್ಲ ಎಂದು ಆಪ್‌ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಮೀಸಲಾತಿ ಮಸೂದೆಗೆ ಕೈಗಾರಿಕಾ ಇಲಾಖೆ ವಿರೋಧ: ಟಿಪ್ಪಣಿ ಬಹಿರಂಗ
ಬೆಂಗಳೂರು: ಕನ್ನಡಿಗರಿಗೆ ಮೀಸಲಾತಿ ನೀಡಲು ಕಾರ್ಮಿಕ ಇಲಾಖೆ ಜಾರಿಗೊಳಿಸಲು ಮುಂದಾಗಿದ್ದ ಮಸೂದೆಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆರಂಭ ದಲ್ಲೇ ವಿರೋಧ ವ್ಯಕ್ತಪಡಿಸಿದ್ದು ಈಗ ಬಹಿರಂಗವಾಗಿದೆ. ಇದರ ಜತೆಗೆ “ಕನ್ನಡಿಗರು’ ಎಂದರೆ ಯಾರು ಎಂಬುದನ್ನು ಮರು ವ್ಯಾಖ್ಯಾನಿಸುವ ಅಗತ್ಯವೇ ಇಲ್ಲ ಎಂದು ಪ್ರತಿ ಪಾದಿಸಲಾಗಿದೆ ಎಂದೂ ಗೊತ್ತಾಗಿದೆ. ಈ ಸಂಬಂಧ ವಾಣಿಜ್ಯ, ಕೈಗಾರಿಕಾ ಇಲಾಖೆಯು ಕಾರ್ಮಿಕ ಇಲಾಖೆಗೆ ಸಲ್ಲಿಸಿದ್ದ ಟಿಪ್ಪಣಿ ಈಗ ಬಹಿರಂಗಗೊಂಡಿದೆ. ಈ ಮೂಲಕ
ಕನ್ನಡಿಗರಿಗೆ ಮೀಸಲಾತಿ ಸಂಬಂಧ ಸರಕಾರದ ಇಲಾಖೆ ಗಳೊಳಗೇ ಭಿನ್ನಧೋರಣೆ ಇರುವುದು ಸ್ಪಷ್ಟವಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.