Reservation For Kannadigas; ಕಂಪೆನಿಗಳಿಗೆ ತೊಂದರೆ ಮಾಡುವುದಿಲ್ಲ: ಸಚಿವ ಲಾಡ್‌

ಕೋರ್ಟ್‌ ಮೆಟ್ಟಿಲೇರಿದರೆ ನಾವೂ ರೆಡಿ, ಅಗತ್ಯಬಿದ್ದರೆ ಪುನರ್‌ ಪರಿಶೀಲನೆ: ಸಚಿವರ ಘೋಷಣೆ

Team Udayavani, Jul 18, 2024, 7:25 AM IST

Santhosh-lad

ಬೆಂಗಳೂರು: ಕೆಲಸ ಕೊಟ್ಟರೆ ಕೌಶಲ ತಾನಾಗಿಯೇ ಬರುತ್ತದೆ. ಇಲ್ಲಿನ ಸಂಪನ್ಮೂಲ, ವಾತಾವರಣ ಎಲ್ಲವನ್ನೂ ನೋಡಿಯೇ ಹೂಡಿಕೆದಾರರು ಬರುತ್ತಾರೆ. ಕನ್ನಡಿಗರಿಗೆ ಅನುಕೂಲ ಆಗಲಿ ಎಂದು ಈ ಮಸೂದೆ ತರುತ್ತಿದ್ದೇವೆಯೇ ಹೊರತು, ಖಾಸಗಿ ಸಂಸ್ಥೆಗಳಿಗೆ ತೊಂದರೆ ಕೊಡುವುದಕ್ಕಲ್ಲ. ಮಸೂದೆಯ ಬಗ್ಗೆ ಚರ್ಚೆ ಆಗಲಿ. ಅಗತ್ಯಬಿದ್ದರೆ ಪುನರ್‌ ಪರಿಶೀಲನೆ ಮಾಡೋಣ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಕೌಶಲಭರಿತ ಕಾರ್ಮಿಕರು ಎನ್ನುವ ಸಂಸ್ಥೆಗಳು ಕೆಲಸ ಕೊಟ್ಟರೆ ತಾನೆ ಕೌಶಲ ಬರುವುದು. ನಾನೂ ಉದ್ದಿಮೆದಾರರ ಕುಟುಂಬದಿಂದಲೇ ಬಂದವನು. ಅದರ ಬಗ್ಗೆ ಜ್ಞಾನ ಇಲ್ಲವೆಂದಲ್ಲ. ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಹಾಗೂ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ ನೀಡುವುದರಿಂದ ಸಂಸ್ಥೆಗಳಿಗೆ ಆಗುವ ನಷ್ಟವೇನು ಎಂಬುದನ್ನು ಅವರೂ ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಕಾನೂನು ಹೋರಾಟಕ್ಕೆ ಸಿದ್ಧ
ಇದರ ವಿರುದ್ಧ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ ಸರಕಾರವೂ ಕಾನೂನು ಹೋರಾಟಕ್ಕೆ ಸಿದ್ಧವಿದೆ. ಆದರೂ ನ್ಯಾಯಾಲಯಕ್ಕೆ ಹೋಗದಂತೆ ಮನವಿ ಮಾಡುತ್ತೇವೆ. ಕಿರಣ್‌ ಮಜುಂದಾರ್‌ ಷಾ ಸೇರಿದಂತೆ ಸಾಕಷ್ಟು ಉದ್ದಿಮೆಗಳಲ್ಲಿ ತೀರಾ ಪರಿಚಿತರೇ ಇದ್ದಾರೆ. ಅವರು ಚರ್ಚೆ ಮಾಡಲಿ. ಸರಕಾರ ಮುಕ್ತ ಮನಸ್ಸಿನಿಂದ ಅವರ ಸಲಹೆಗಳನ್ನು ಸ್ವೀಕರಿಸಲಿದೆ ಎಂದು ಹೇಳಿದರು.

ಸಿನಿ ಕಾರ್ಮಿಕರಿಗೆ ಭದ್ರತೆ
ಸಚಿವ ಸಂಪುಟ ಸಭೆಯಲ್ಲಿ ಇದಿಷ್ಟೇ ಅಲ್ಲದೆ, ಚಿತ್ರರಂಗದಲ್ಲಿ ದುಡಿಯುವ ಕಾರ್ಮಿಕರ ರಕ್ಷಣೆಗೂ ಅನುಮೋದನೆ ನೀಡಲಾಗಿದೆ. ಸಿನಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಮಸೂದೆವೊಂದನ್ನು ತರು ತ್ತಿದ್ದೇವೆ. ಚಿತ್ರಮಂದಿರಗಳು ಮಾರಾಟ ಮಾಡುವ ಟಿಕೆಟ್‌ ದರದ ಶೇ.1 ಅಥವಾ 2ರಷ್ಟು ಮೊತ್ತವನ್ನು ಕಾರ್ಮಿಕ ಕಲ್ಯಾಣ ನಿಧಿಗೆ ಉಪಕರ(ಸೆಸ್‌)ದ ರೂಪದಲ್ಲಿ ಸಂದಾಯ ಮಾಡಬೇಕು. ಅದನ್ನು ಬಳಸಿಕೊಂಡು ಸಿನಿ ಕಾರ್ಮಿಕರಿಗೆ ವಿಮೆ ಇತ್ಯಾದಿ ಸೌಲಭ್ಯಗಳನ್ನು ಕೊಡಲಾಗುತ್ತದೆ ಎಂದು ಸಚಿವ ಲಾಡ್‌ ವಿವರಿಸಿದರು.

ಗೊಂದಲ ಹುಟ್ಟು ಹಾಕಿ ಸಿಎಂ ಟ್ವೀಟ್‌-ಡಿಲೀಟ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌-ಡಿಲೀಟ್‌ ವಿಚಾರ ಭಾರೀ ಗೊಂದಲ ಸೃಷ್ಟಿಸಿದ್ದು ಕೊನೆಗೆ ಬುಧವಾರ ಮಧ್ಯಾಹ್ನ ಆಡಳಿತ ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಯ ಮೀಸಲು ಪ್ರಮಾಣದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರ ರಾತ್ರಿ ಮಾಡಿದ ಟ್ವೀಟ್‌ನಲ್ಲಿ ರಾಜ್ಯದ ಎಲ್ಲ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿತ್ತು ಎಂದು ಸಿದ್ದರಾಮಯ್ಯ ತಿಳಿಸಿದ್ದರು.

ಆದರೆ ಈ ಬಗ್ಗೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಬುಧವಾರ ಟ್ವೀಟ್‌ ಡಿಲೀಟ್‌ ಮಾಡಿ ಹೊಸ ಮಾಹಿತಿ ಹಂಚಿಕೊಂಡರು. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರಕಾರದ ಆಶಯ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳುವ ಮೂಲಕ ಆಡಳಿತಾತ್ಮಕ ಹುದ್ದೆಗೆ ಶೇ.50ರ ಮಿತಿಯನ್ನು ಸ್ಪಷ್ಟಗೊಳಿಸಿದ್ದಾರೆ.

ರಾಜ್ಯದಲ್ಲಿ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವುದಕ್ಕೆ ನಮ್ಮ ಸರಕಾರ ಬದ್ಧವಾಗಿದೆ. ಮುಂದೆ ಸೃಷ್ಟಿಯಾಗುವ ಉದ್ಯೋಗದಲ್ಲಿ ಕನ್ನಡಿಗರಿಗೆ ಇಂತಿಷ್ಟು ಉದ್ಯೋಗ ಮೀಸಲಿಡುವವರೆಗೂ ನಮ್ಮ ಸರಕಾರ ಕೆಲಸ ಮಾಡುತ್ತದೆ. ಈ ನಿಟ್ಟಿನಲ್ಲಿ ಮಸೂದೆ ತಂದಿದ್ದೇವೆ. ತಂತ್ರಜ್ಞಾನಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ವಿನಾಯಿತಿ ನೀಡುತ್ತೇವೆ. ಸದನ ನಡೆಯುತ್ತಿರುವುದರಿಂದ ಹೆಚ್ಚಿನ ಚರ್ಚೆ ಮಾಡುವುದಿಲ್ಲ.” – ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Munirathna Audio: ಬಿಜೆಪಿ ಶಾಸಕ ಮುನಿರತ್ನ ಪ್ರಕರಣ; ಮತ್ತೊಂದು ಆಡಿಯೋ ವೈರಲ್‌?

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

Congress Govt., ಸಿಐಡಿಗೆ ಪ್ರಕರಣಗಳ ಹೊರೆ: ವಿಚಾರಣೆ, ತನಿಖೆ ವಿಳಂಬ!

NaKarnataka; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Karnataka Govt.,; ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

Prajwal Revanna Case ಸಹಾಯವಾಣಿ ಇದ್ದರೂ ದೂರಿಗೆ ನಕಾರ!

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MLA Munirathna ಆಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.