Finance Commission Conferenceರಾಜ್ಯಗಳಿಗೆ ನಷ್ಟ ಪರಿಹರಿಸುವ ಪದ್ಧತಿ ಇಲ್ಲ: ಹಣಕಾಸು ಆಯೋಗ


Team Udayavani, Aug 30, 2024, 12:09 AM IST

Finance Commission Conferenceರಾಜ್ಯಗಳಿಗೆ ನಷ್ಟ ಪರಿಹರಿಸುವ ಪದ್ಧತಿ ಇಲ್ಲ: ಹಣಕಾಸು ಆಯೋಗ

ಬೆಂಗಳೂರು: “ಹಿಂದಿನ ಹಣಕಾಸು ಆಯೋಗದ ಕ್ರಮದಿಂದ ರಾಜ್ಯಗಳಿಗೆ ಆದ ನಷ್ಟವನ್ನು ಮುಂದೆ ಬರುವ ಆಯೋಗ ಪರಿಹರಿಸುವ ಪದ್ಧತಿ ಇಲ್ಲ’ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ| ಅರವಿಂದ ಪನಗಾರಿಯಾ ಅಭಿಪ್ರಾಯಪಟ್ಟಿದ್ದಾರೆ.

ಈ ಮೂಲಕ 15ನೇ ಹಣಕಾಸು ಆಯೋಗದ ಶಿಫಾರಸಿನಿಂದ ಆದ ನಷ್ಟವನ್ನು ಭರ್ತಿ ಮಾಡಿಕೊಡಬೇಕೆಂಬ ರಾಜ್ಯ ಸರಕಾರದ ವಾದವನ್ನು ಆಯೋಗ ಒಪ್ಪಲು ಸಾಧ್ಯವಿಲ್ಲ ಎಂಬ ಪರೋಕ್ಷ ಸಂದೇಶವನ್ನು ಕರ್ನಾಟಕ ಸರಕಾರಕ್ಕೆ ರವಾನೆ ಮಾಡಿದ್ದಾರೆ.

ರಾಜ್ಯದ ನಿಯೋಗದ ಜತೆಗೆ ಸುದೀರ್ಘ‌ ಚರ್ಚೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಆದ ನಷ್ಟವನ್ನು ಈ ಬಾರಿ ಸರಿದೂಗಿಸಲಾಗುತ್ತದೆಯೇ? ಎಂಬ ಪ್ರಶ್ನೆಗೆ ಈ ರೀತಿ ಉತ್ತರ ನೀಡಿದರು.

ಸೆಸ್‌ ಹಾಗೂ ಸರ್ಚಾರ್ಜ್‌ ವಿಚಾರದಲ್ಲಿ ಕೇಂದ್ರದ ನಿಲುವು ಬದಲಾಗಬೇಕು. ಇದರಲ್ಲೂ ರಾಜ್ಯಕ್ಕೆ ಪಾಲು ಹಂಚಿಕೆ ಮಾಡಬೇಕೆಂಬ ರಾಜ್ಯ ಸರಕಾರದ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯಿಸಿ, ಇಂಥದ್ದೊಂದು ಚರ್ಚೆ ಇದೆ. ಆದರೆ ಇದರ ಬಗ್ಗೆ ಈಗಲೇ ಸ್ಪಷ್ಟ ಅಭಿಪ್ರಾಯ ನೀಡುವುದು ಕಷ್ಟ. ಏಕೆಂದರೆ ಈ ಬಗ್ಗೆ ಸಂವಿಧಾನದ ತಿದ್ದುಪಡಿ ಮಾಡಬೇಕಾಗುತ್ತದೆ. ಆಯೋಗ ಈ ಹಂತದಲ್ಲಿ ಇದಕ್ಕೆ ಉತ್ತರಿಸುವುದಕ್ಕೆ ಸಾಧ್ಯವಿಲ್ಲ. ಆದರೆ ಸೆಸ್‌ ಹಾಗೂ ಸರ್ಚಾರ್ಜ್‌ ವಿಧಿಸುವ ಅಧಿಕಾರವನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನ ಕೇಂದ್ರಕ್ಕೆ ನಿರ್ದಿಷ್ಟವಾಗಿ ನೀಡಿದೆ. ಯುದ್ಧ ಹಾಗೂ ಇನ್ನಿತರ ವಿಕೋಪವನ್ನು ದೇಶ ಎದುರಿಸಿದಾಗ ಕೇಂದ್ರ ಆರ್ಥಿಕವಾಗಿ ಸಂಕಷ್ಟ ಎದುರಿಸದೇ ಇರಲಿ ಎಂಬ ಕಾರಣಕ್ಕೆ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

15ನೇ ಹಣಕಾಸು ಆಯೋಗ ರಾಜ್ಯ ಸರಕಾರಕ್ಕೆ ಜಿಎಸ್‌ಟಿ ನಷ್ಟ ಪರಿಹಾರದ ಭರವಸೆ ಈಡೇರಿಸಿಲ್ಲ ಎಂಬ ಪ್ರಶ್ನೆಗೆ ಸ್ಪಷ್ಟಪಡಿಸಿದ ಅವರು, ಆಯೋಗದ ಅಂತಿಮ ವರದಿಯಲ್ಲಿ ಇಂಥ ಯಾವುದೇ ಶಿಫಾರಸುಗಳು ಇರಲಿಲ್ಲ. ಹೀಗಾಗಿ ಆಯೋಗದ ವರದಿಯನ್ನು ಕೇಂದ್ರ ಪಾಲನೆ ಮಾಡುತ್ತಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ. ಆಯೋಗ ನಷ್ಟ ಪರಿಹಾರದ ಬಗ್ಗೆ ಪ್ರಸ್ತಾವಿಸಿದ್ದರೆ ಕೇಂದ್ರ ನೀಡುತ್ತಿತ್ತು ಎಂದು ಹೇಳಿದರು.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.