![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 15, 2022, 1:06 PM IST
ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜತೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಹೆಚ್.ಡಿ.ಕುಮಾರಸ್ವಾಮಿ ಅವರು ಶಿವಾನಂದ ಪಾಟೀಲ್ ಅವರಿಗೆ ಪಕ್ಷದ ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಕುಮಾರಸ್ವಾಮಿ, ಸಿಂದಗಿ ಕ್ಷೇತ್ರ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನಡುವೆ ಕರುಳಬಳ್ಳಿ ಸಂಬಂಧ ಇದೆ. ದೇವೇಗೌಡರ ಕಾಲದಿಂದ ಸಿಂದಗಿ ಕ್ಷೇತ್ರವನ್ನು ಅತ್ಯುತ್ತಮವಾಗಿ ಪ್ರಗತಿ ಮಾಡಲಾಗಿದೆ. ಗುಳೆ ಹೋಗುತ್ತಿದ್ದ ಅಲ್ಲಿನ ಜನರು ಪಕ್ಕದ ರಾಜ್ಯಗಳಲ್ಲಿ ಕೂಲಿಗಳು ಆಗುವುದನ್ನು ತಪ್ಪಿಸಲು ಶಾಶ್ವತವಾಗಿ ನೀರಾವರಿ ಪರಿಹಾರ ಒದಗಿಸಿದ್ದರು ಎಂದರು.
ಇದನ್ನೂ ಓದಿ:ರಸ್ತೆ ಕಾಮಗಾರಿ ವಿಚಾರ: ಕಾಂಗ್ರೆಸ್- ಬಿಜೆಪಿಯಿಂದ ಏಕಕಾಲಕ್ಕೆ ಪ್ರತಿಭಟನೆ
ಮಾಜಿ ಸಚಿವ ದಿವಂಗತ ಮನಗೂಳಿ ಮತ್ತು ಗೌಡರ ನಡುವಿನ ಸಂಬಂಧ ಎಲ್ಲರಿಗೂ ಗೊತ್ತೇ ಇದೆ. ತಮ್ಮ ಮಗನಂತೆ ಅವರನ್ನು ಗೌಡರು ಸಲುಹಿದ್ದರು. ಅವರ ನಿಧನದ ನಂತರ ನಡೆದ ಉಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿದ್ದು ನಿಜ. ಈಗ ಅದೆನ್ನೆಲ್ಲ ಸರಿ ಮಾಡುವ ಕಾಲ ಬಂದಿದೆ. ಶಿವಾನಂದ ಪಾಟೀಲ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ ಎಂದು ಹೇಳಿದರು.
ವಿಜಯಪುರ, ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲಾಗುವುದು. ಆ ನಿಟ್ಟಿನಲ್ಲಿ ಇನ್ನೂ ಅನೇಕ ಮುಖಂಡರು ಪಕ್ಷಕ್ಕೆ ಸೇರಲಿದ್ದಾರೆ ಎಂದು ಎಚ್ ಡಿಕೆ ಹೇಳಿದರು.
ಶೀಘ್ರವೇ ಜಲಧಾರೆ ಆರಂಭ: ನಾಡಿನಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಜಾರಿ ಮಾಡುವುದು, ನಮ್ಮ ನೀರಾವರಿ ಹಕ್ಕುಗಳನ್ನು ಸಾಧಿಸಿಕೊಳ್ಳುವುದು ಸೇರಿದಂತೆ ಇಡೀ ರಾಜ್ಯಕ್ಕೆ ಜಲ ಸಮಾನತೆ ಕಲ್ಪಿಸಿ ಸಮಗ್ರ ಪ್ರಗತಿ ಸಾಧಿಸುವ ಪರಿಕಲ್ಪನೆಯೊಂದಿಗೆ ಹಮ್ಮಿಕೊಳ್ಳಲಾಗಿರುವ ಜನತಾ ಜಲಧಾರೆ ಕಾರ್ಯಕ್ರಮ ಶೀಘ್ರವೇ ಶುರುವಾಗಲಿದೆ. ಶುದ್ಧ ಕುಡಿಯುವ ನೀರು, ಬೇಸಾಯಕ್ಕೆ ಅಗತ್ಯ ನೀರು ಕೊಡುವ ಉದ್ದೇಶ ನಮ್ಮದು ಎಂದು ಅವರು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.