ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ರಸ್ತೆ ಕುಸಿತ; ಬದಲಿ ಮಾರ್ಗ ವ್ಯವಸ್ಥೆ

ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ: ಹಾಸನ ಜಿಲ್ಲಾಧಿಕಾರಿ ಆದೇಶ

Team Udayavani, Jul 15, 2022, 3:55 PM IST

1-asdsdsad

ಹಾಸನ: ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲೂಕು ದೋಣಿಗಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯು ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ – 75 ರ ಶಿರಾಡಿಘಾಟ್‌ನಲ್ಲಿ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ – 75 ರ ಸಕಲೇಶಪುರ ತಾಲೂಕು ವ್ಯಾಪ್ತಿಯ ದೋಣಿಗಾಲ್‌ನಿಂದ ಮಾರನಹಳ್ಳಿವರೆಗೆ ಭಾರೀ ಸರಕು ಸಾಗಣೆಯ ವಾಹನಗಳ ಹೊರತುಪಡಿಸಿ ಸರ್ಕಾರಿ, ಶಾಸಗಿ ಬಸ್ಸುಗಳು, ಕಾರು, ಜೀಪು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಗುರುವಾರ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಶುಕ್ರವಾರ ಮತ್ತೆ ಮುಂಗಾರು ಮಳೆ ಅಬ್ಬರ ತೀವ್ರಗೊಂಡು ರಸ್ತೆ ಕುಸಿಯುವ ಅಪಾಯ ಎದುರಾಗಿದೆ.

ಹಾಗಾಗಿ ಹೆಚ್ಚಿನ ಆನಾಹುತವನ್ನು ತಡೆಯುವ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಗುರುವಾರ ಹೊರಡಿಸಿದ ಆದೇಶವನ್ನು ಪರಿಷ್ಕರಿಸಿ ಈ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ನಿಷೇಧಿಸಿ ಶುಕ್ರವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು – ಮಂಗಳೂರು ನಡುವೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗವನ್ನೂ ಜಿಲ್ಲಾಧಿಕಾರಿಯವರು ಉಲ್ಲೇಖಿಸಿದ್ದು ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ 16,200 ಕೆಜಿಗಿಂತ ಕಡಿಮೆ ಭಾರದ ವಾಹನಗಳು ಹಾಸನ – ಅರಕಲಗೂಡು – ಕುಶಾಲನಗರ – ಸಂಪಾಜೆ ಮಾರ್ಗದಲ್ಲಿ ಮಂಗಳೂರಿಗೆ ಸಂಚಿರಿಸಲು ಸೂಚನೆ ನೀಡಿದ್ದಾರೆ. ಮತ್ತೊಂದು ಮಾರ್ಗವನ್ನೂ ಅವರು ಸೂಚಿಸಿದ್ದು, ಹಾಸನ – ಬೇಲೂರು – ಮೂಡಿಗೆರೆ – ಚಾರ್ಮಾಡಿ ಘಾಟ್‌ ಮೂಲಕವೂ ಮಂಗಳೂರು ತಲಪಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

16,200 ಕೆಜಿಗಿಂತ ಹೆಚ್ಚು ಭಾರದ ಸರಕು ಸಾಗಾಣೆಯ ವಾಹನಗಳು ಈ ಎರಡೂ ಮಾರ್ಗಗಳ ಹೊರತುಪಡಿಸಿ ಬೇರೆ ಮಾರ್ಗಗಳಲ್ಲಿ ಬೆಂಗಳೂರು – ಮಂಗಳೂರು ನಡುವೆ ಸಂಚರಿಸಬಹುದು ಎಂದು ಜಿಲ್ಲಾಧಿಕಾರಿಯವರು ಉಲ್ಲೇಖೀಸಿದ್ದಾರೆ.

ಆಲೂರು , ಸಕಲೇಶಪುರ ತಾಲೂಕು ಶಾಲೆಗಳಿಗೆ ಶನಿವಾರ ( ಜು.16) ರಜೆ ಘೋಷಣೆ
ಹಾಸನ: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿರುವುದರಿಂದ ಶನಿವಾರ ( ಜು.16) ಎರಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆಲೂರು ತಾಲೂಕಿನ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸಕಲೇಶಪುರ ತಾಲೂಕಿನ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಯಾತನಹಳ್ಳಿಯಲ್ಲಿ ತಹಸೀಲ್ದಾರ್‌ ಗ್ರಾಮ ವಾಸ್ತವ್ಯ
ಹಾಸನ: ಪ್ರತಿ ತಿಂಗಳ ಮೂರನೇ ಶನಿವಾರ ತಾಲೂಕು ವ್ಯಾಪ್ತಿಯಲ್ಲಿ ಬರುವ ಒಂದು ಗ್ರಾಮಕ್ಕೆ ತಹಸೀಲ್ದಾರರು ಭೇಟಿ ನೀಡಿ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಪರಿಹರಿಸಬೇಕಾಗಿದೆ.

ಆ ನಿಟ್ಟಿನಲ್ಲಿ ಜು.16 ರಂದು ಹಾಸನ ತಾಲೂಕು , ಸಾಲಗಾಮೆ ಹೋಬಳಿ, ಕ್ಯಾತನಹಳ್ಳಿ ಗ್ರಾಮದಲ್ಲಿ ತಹಸೀಲ್ದಾರ್‌ ನಟೇಶ್‌ ಅವರು ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಸಾರ್ವಜನಿಕ ತಮ್ಮ ಕುಂದು ಕೊರತೆಗಳನ್ನು ಆ ಸಂದರ್ಭದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ತಹಸೀಲ್ದಾರರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.