RTI ಕಿರುಕುಳ: ಅರ್ಚಕರು ಹೈಕೋರ್ಟ್ಗೆ
ದೇವಸ್ಥಾನವನ್ನು ಆರ್ಟಿಐ ವ್ಯಾಪ್ತಿಯಿಂದ ಹೊರಗಿಡಲು ಮನವಿ
Team Udayavani, Jun 4, 2024, 6:00 AM IST
ಬೆಂಗಳೂರು: ಕೆಲವು ಮಾಹಿತಿ ಹಕ್ಕು ಕಾರ್ಯಕರ್ತರ ಕಿರುಕುಳ, ಸುಲಿಗೆ, ಬೆದರಿಕೆಗಳಿಗೆ ಬೇಸತ್ತು ರಾಜ್ಯದ ದೇವಾಲಯಗಳ ಅರ್ಚಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದೇವಾಲಯಗಳು ಸಾರ್ವಜನಿಕ ಸಂಸ್ಥೆಗಳಲ್ಲ. ಮಾಹಿತಿ ಹಕ್ಕು ಕಾರ್ಯಕರ್ತರ ಕಿರುಕುಳದಿಂದ ಮುಕ್ತಿ ಪಡೆಯಲು ಮಾಹಿತಿ ಹಕ್ಕು ಕಾಯ್ದೆ-2005ರ ಸೆಕ್ಷನ್ 2 (ಎಚ್)ರ ಅನ್ವಯ ದೇವಸ್ಥಾನಗಳು ಸಾರ್ವಜನಿಕ ಸಂಸ್ಥೆಗಳು ಅಲ್ಲ ಎಂದು ಘೋಷಿಸುವಂತೆ ಕೋರಿ ಅಖೀಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಸಂಘದ ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್ ದೀಕ್ಷಿತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 11ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎನ್.ಆರ್. ನಾಗರಾಜ್ ವಾದ ಮಂಡಿಸಿದರು.
ದೇವಾಲಯಗಳು ಸಾರ್ವಜನಿಕ ಸಂಸ್ಥೆಗಳಲ್ಲ ಎಂದು ದೇಶದ ಹಲವು ಹೈಕೋರ್ಟ್ಗಳು ಹೇಳಿದ್ದರೂ, ತಯಾರಿಸುವ ಪ್ರಸಾದದಲ್ಲಿ ಎಷ್ಟು ಸಕ್ಕರೆ, ಅಕ್ಕಿ, ಉಪ್ಪು-ಖಾರ ಬಳಸಲಾಗುತ್ತದೆ? ಪ್ರತಿದಿನ ಪೂಜೆ-ಅರ್ಚನೆಗಳಿಂದ ಎಷ್ಟು ಹಣ ಸಿಗುತ್ತದೆ? ಅದೆನ್ನು ಯಾವುದಕ್ಕೆ ಖರ್ಚು ಮಾಡಲಾಗುತ್ತದೆ ಮುಂತಾದ ಮಾಹಿತಿಗಳನ್ನು ಕೇಳಲಾಗುತ್ತದೆ. ಕೇಳಿದ ಮಾಹಿತಿ ಕೊಡದಿದ್ದರೆ ನಾನಾ ರೀತಿ ಕಿರುಕುಳ, ಬೆದರಿಕೆ ಹಾಕಲಾಗುತ್ತದೆ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ.
ಬೇಡಿಕೆ ಏನು?
ಇದರಿಂದ ಅರ್ಚಕರ ಕಾರ್ಯ ನಿರ್ವಹಣೆಗೆ ತೊಂದರೆಯಾಗುತ್ತಿದ್ದು, ದೇವಾಲಯಗಳನ್ನು ಮಾಹಿತಿ ಹಕ್ಕು ಕಾಯ್ದೆಯಿಂದ ಹೊರಗಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.