Medical ವಿದ್ಯಾರ್ಥಿಗಳಿಗೆ ಸರಕಾರಿ ಕೋಟಾ ಶಾಪ?

ಕರ್ನಾಟಕ ವೈದ್ಯಕೀಯ ಮಂಡಳಿಯಿಂದ ನೋಂದಣಿ ನಿರಾಕರಣೆ, ವೈದ್ಯರಿಗೆ ತ್ರಿಶಂಕು ಸ್ಥಿತಿ

Team Udayavani, Jun 25, 2023, 7:10 AM IST

ವೈದ್ಯ ವಿದ್ಯಾರ್ಥಿಗಳಿಗೆ ಶಾಪವಾಯಿತೇ ಸರ್ಕಾರಿ ಕೋಟಾ?

ಬೆಂಗಳೂರು: ವೈದ್ಯ ವೃತ್ತಿಯ ಕನಸು ಹೊತ್ತು ಸರಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣ ಪೂರೈಸಿದವರು ಅದೇ “ಸರಕಾರಿ ಕೋಟಾ’ದಡಿ ವಿಧಿಸಿರುವ ನಿಬಂಧನೆಗಳಿಂದಾಗಿ ವೃತ್ತಿ ಆರಂಭಿಸಲಾಗದೆ ಪರದಾಡುವ ಸ್ಥಿತಿ ಸೃಷ್ಟಿ ಯಾಗಿದೆ!

ಸರಕಾರಿ ಕೋಟಾದಡಿ ವೈದ್ಯಕೀಯ ಪದವಿ ಪೂರ್ಣಗೊಳಿಸಿದವರು ಒಂದು ವರ್ಷ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಮಾಡುವುದು ಕಡ್ಡಾಯ. ಹಿಂದೆ ಸರಕಾರದಿಂದ ಸೇವೆ ಸಲ್ಲಿಸಲು ಕರೆ ಬರುವವರೆಗೆ ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ)ಯಲ್ಲಿ ಹೆಸರು ನೋಂದಾಯಿಸಿ ಖಾಸಗಿ ಅಥವಾ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರಾಗಿಯೋ ಅಥವಾ ಸ್ನಾತಕೋತ್ತರ ವಿದ್ಯಾಭ್ಯಾಸವನ್ನೋ ಕೈಗೊಳ್ಳಲು ಅವಕಾಶ ಇತ್ತು. ಆದರೆ ಪ್ರಸಕ್ತ ಸಾಲಿನಿಂದ ಈ ಅವಕಾಶವನ್ನೂ ನಿರಾಕರಿಸಲಾಗಿದೆ.

ಅಂದರೆ ಗ್ರಾಮೀಣ ಸೇವೆ ಪೂರ್ಣಗೊಳ್ಳದವರಿಗೆ ಕೆಎಂಸಿಯಲ್ಲಿ ನೋಂದಾಯಿಸಿಕೊಳ್ಳುವ ಅವಕಾಶ ನಿರಾಕರಿಸಲಾಗಿದೆ. ಕಾನೂನು ಪ್ರಕಾರ ಪದವಿ ಪಡೆದಿದ್ದರೂ ಕರ್ನಾಟಕ ವೈದ್ಯಕೀಯ ಮಂಡಳಿ ನೋಂದಣಿಯಾಗದೆ ವೃತ್ತಿಜೀವನ ಪ್ರಾರಂಭಿಸಲು ಅವಕಾಶ ನೀಡುತ್ತಿಲ್ಲ. 2023ರ ಜುಲೈಗೆ ಅಂತಿಮ ವರ್ಷದ ಸರಕಾರಿ ಕೋಟಾದಡಿ ವೈದ್ಯಕೀಯ ಪದವಿ ಪೂರೈಸಿ, ಇಂಟರ್ನ್ಶಿಪ್‌ ಮುಗಿಸಿದ 2,500ರಿಂದ 3,000 ವಿದ್ಯಾರ್ಥಿಗಳು ಹಂತ ಹಂತವಾಗಿ ಹೊರಬರಲಿದ್ದಾರೆ. ಇವರಲ್ಲಿ ಅನೇಕರು ಈಗಾಗಲೇ ಇಂಟರ್ನ್ಶಿಪ್‌ ಮುಗಿಸಿ ಅನೇಕ ತಿಂಗಳಿನಿಂದ ಸೇವೆ ಸಲ್ಲಿಸಲು ಸಾಧ್ಯವಾಗದೆ ಮನೆಯಲ್ಲಿದ್ದಾರೆ.

ಸಾಲದ ನೋಟಿಸ್‌ ಮನೆಗೆ!
ವೈದ್ಯ ಪದವಿ ಪೂರ್ಣಗೊಂಡು 3 ತಿಂಗಳು ಕಳೆದರೂ ಗ್ರಾಮೀಣ ಸೇವೆಗೆ ಕರೆಬಂದಿಲ್ಲ. ಇನ್ನೊಂದೆಡೆ ಖಾಸಗಿಯಾಗಿ ವೃತ್ತಿ ಪ್ರಾರಂಭಿಸಲು ಕೆಎಂಸಿಯಲ್ಲಿ ನೋಂದಾಯಿಸಬೇಕು. ಪ್ರಸ್ತುತ ನೋಂದಣಿ ಸಾಧ್ಯವಾಗುತ್ತಿಲ್ಲ. ವಿದ್ಯಾಭ್ಯಾಸಕ್ಕಾಗಿ 12ರಿಂದ 15 ಲಕ್ಷ ರೂ. ಸಾಲ ಮಾಡಿರುತ್ತಾರೆ. ಇದರ ಮರುಪಾವತಿಗೆ ನೋಟಿಸ್‌ಗಳು ಮನೆ ತಲುಪುತ್ತಿವೆ. ಇದರಿಂದ ಹೊಸ ವೈದ್ಯರು ಕಂಗಾಲಾಗಿದ್ದಾರೆ.

ಸರಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಮುಗಿಸಿ ಐದು ತಿಂಗಳ ಮೇಲಾಗಿದೆ. ಗ್ರಾಮೀಣ ಸೇವೆಯ ಕರೆಬಂದಿಲ್ಲ. ಇತ್ತ ಕೆಎಂಸಿನಲ್ಲಿ ವೈದ್ಯಕೀಯ ನಿರ್ದೇಶಕರಿಂದ ನಿರಾಕ್ಷೇಪಣ ಪತ್ರ ಸಲ್ಲಿಸದ ವಿನಾ ನೋಂದಣಿಗೆ ಅವಕಾಶ ನೀಡುತ್ತಿಲ್ಲ. ಇದರಿಂದ ವೈದ್ಯ ಪದವಿ ಇದ್ದರೂ ಖಾಸಗಿಯಾಗಿಯೂ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿನಿಯೊಬ್ಬರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನಿರ್ದೇಶಕರಿಂದ ನಿರಾಕ್ಷೇಪಣ ಪತ್ರ ನೀಡಿದರೆ ಮಾತ್ರ ಕೆಎಂಸಿಯಲ್ಲಿ ನೋಂದಣಿ ಮಾಡಿಕೊಳ್ಳುತ್ತೇವೆ. ಇದಕ್ಕೆ ಅಭ್ಯಂತರವಿಲ್ಲ. ಅವರು ಮೊದಲು ಎನ್‌ಒಸಿ ನೀಡಲಿ.
 - ಡಾ| ಶಾಮ್‌ರಾವ್‌ ಬಿ. ಪಾಟೀಲ್‌, ರಿಜಿಸ್ಟ್ರಾರ್‌, ಕರ್ನಾಟಕ ವೈದ್ಯಕೀಯ ಪರಿಷತ್ತು (ಕೆಎಂಸಿ)

ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪೂರ್ಣಗೊಂಡ ಬಳಿಕ ಸೇವೆ ಸಲ್ಲಿಸಬೇಕಾಗಿದೆ. ಈ ಬಗ್ಗೆ ಪ್ರವೇಶ ಪಡೆಯುವ ಮೊದಲೇ ಗ್ರಾಮೀಣ ಸೇವೆ ನೀಡುವ ಬಗ್ಗೆ ಸರಕಾರಕ್ಕೆ ಅಫಿದಾವಿತ್‌ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
-ಡಾ| ರಂದೀಪ್‌, ಆಯುಕ್ತರು, ಆರೋಗ್ಯ ಇಲಾಖೆ.

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.