ಮಹದಾಯಿ ಉಳಿವಿಗೆ ಮತ್ತೆ ಹೋರಾಟ! ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಗೋವಾ ಜನರ ಆಕ್ರೋಶ


Team Udayavani, Oct 1, 2020, 3:00 PM IST

ಮಹದಾಯಿ ಉಳಿವಿಗೆ ಮತ್ತೆ ಹೋರಾಟ! ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಗೋವಾ ಜನರ ಆಕ್ರೋಶ

ಪಣಜಿ: ಕೇಂದ್ರ ಸರ್ಕಾರದ ಈ ನೀತಿ ವಿರೋಧಿ ಸಿ ಮಹದಾಯಿ ನದಿ ಉಳಿವಿಗಾಗಿ ಅಕ್ಟೋಬರ್‌ನಿಂದ ಗೋವಾದಲ್ಲಿ ಮತ್ತೆ
ಹೋರಾಟ ಆರಂಭಿಸಲಾಗುವುದು ಎಂದು ವಕೀಲ ಹೃದಯನಾಥ ಶಿರೋಡಕರ್‌ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ಕರ್ನಾಟಕವು ಮಹದಾಯಿ ನದಿ ನೀರನ್ನು
ತಿರುಗಿಸಿಕೊಂಡಿದ್ದರೂ ಗೋವಾ ಸರ್ಕಾರ ಇದರ ವಿರುದ್ಧ ನಿರ್ಣಯ ತೆಗೆದುಕೊಳ್ಳುವ ಬದಲು ಮೌನ ತಾಳಿದೆ.

ಗೋವಾಕ್ಕೆ ಕೇಂದ್ರ ಸರ್ಕಾರವು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಗೋವಾ ಜನರ ಹಿತ ಕಾಪಾಡುವತ್ತ ಗಮನವಿಲ್ಲ.
ಕರ್ನಾಟಕಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಮಹದಾಯಿ ನದಿ ನೀರನ್ನು ಕರ್ನಾಟಕ ತಿರುಗಿಸಿಕೊಳ್ಳುವುದರಿಂದ ಗೋವಾ
ಪರಿಸರದ ಮೇಲೆ ಭಾರಿ ದುಷ್ಟರಿಣಾಮ ಉಂಟಾಗಲಿದೆ. ಹೀಗಿದ್ದರೂ ಕೂಡ ಸರ್ಕಾರದ ಒತ್ತಡದಿಂದ ಜೈವಿಕ ವೈವಿಧ್ಯತೆ
ವಿಭಾಗದಲ್ಲಿ ಕೆಲಸ ನಿರ್ವಹಿಸುವ ಹೆಸರಾಂತ ಪರಿಸರ ಹೋರಾಟಗಾರರು ಸುಮ್ಮನೆ ಕುಳಿತಿದ್ದಾರೆ. ಇದರಿಂದಾಗಿ ಖುರ್ಚಿ
ಮಹತ್ವದ್ದೊ ಅಥವಾ ಪರಿಸರ ಮಹತ್ವದ್ದೊ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಹೃದಯನಾಥ ಶಿರೋಡಕರ್‌
ಆಗ್ರಹಿಸಿದರು. ಕಾಂಗ್ರೆಸ್‌ ಶಾಸಕ ಅಲೆಕ್ಸ ರೆಜಿನಾಲ್ಡ ಮಾತನಾಡಿ, ಕರ್ನಾಟಕವು ಕಳಸಾ-ಬಂಡೂರಿ ನಾಲೆ ಮತ್ತು ಮಲಪ್ರಭೆಗೆ
ಎಷ್ಟು ಪ್ರಮಾಣದ ಮಹದಾಯಿ ನದಿ ನೀರನ್ನು ತಿರುಗಿಸಿದೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ಕಲೆಹಾಕಬೇಕಿತ್ತು. ಲಾಕ್‌ಡೌನ್‌ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ಕರ್ನಾಟಕ ಸರ್ಕಾರವು ಕಳಸಾ-ಬಂಡೂರಿ ನಾಲೆ ಕಾಮಗಾರಿ
ನಡೆಸುತ್ತಲೇ ಇದೆ. ಮತ್ತು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿದೆ.

ಕೇಂದ್ರ ಸರ್ಕಾರಕ್ಕೆ ಗೋವಾದ ಹಿತ ಕಾಪಾಡುವ ಅಗತ್ಯವಿಲ್ಲ, ಕಾರಣವೆಂದರೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ
ಆಯ್ಕೆಯಾದ ಬಿಜೆಪಿಯ 27 ಸಂಸದರು ಮುಖ್ಯವಾಗಿದ್ದಾರೆ. ಮಹದಾಯಿ ಗೋವಾದ ತಾಯಿಯಾಗಿದ್ದಾಳೆ ಎಂದು ಹೇಳುವ ಗೋವಾ ಮುಖ್ಯಮಂತ್ರಿಗಳು ಮಹದಾಯಿ ನದಿ ನೀರನ್ನು ಕರ್ನಾಟಕವು ತಿರುಗಿಸಿಕೊಂಡಿದ್ದರೂ ಸುಮ್ಮನೆ
ಕುಳಿತುಕೊಂಡಿದ್ದಾರೆ. ಇವೆಲ್ಲದಕ್ಕೂ ಮುಖ್ಯಮಂತ್ರಿ ಪ್ರಮೋದ ಸಾವಂತ್‌ ಅವರೇ ಜವಾಬ್ದಾರರಾಗಿದ್ದು ನೈತಿಕ ಹೊಣೆ
ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರೊಗ್ರೆಸಿವ್‌ ಫ್ರಂಟ್‌ನ ರಾಜನ್‌ ಘಾಟೆ, ವಿಶ್ರಾಮ ಪರಬ್‌,
ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.