ಬೆಳ್ಳಂಬೆಳಗ್ಗೆ ಪಿಎಫ್ಐ- ಎಸ್ ಡಿಪಿಐ ವಿರುದ್ಧ ಎನ್ಐಎ ಸಮರ: ರಾಜ್ಯದಲ್ಲಿ 75 ಮಂದಿ ವಶಕ್ಕೆ


Team Udayavani, Sep 27, 2022, 9:38 AM IST

ಬೆಳ್ಳಂಬೆಳಗ್ಗೆ ಪಿಎಫ್ಐ ವಿರುದ್ಧ ಎನ್ಐಎ ಸಮರ: ರಾಜ್ಯದಲ್ಲಿ 60ಕ್ಕೂ ಹೆಚ್ಚು ಮಂದಿ ವಶಕ್ಕೆ

ಬೆಂಗಳೂರು: ವಾರದ ಹಿಂದಷ್ಟೇ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ನಾಯಕರ ಮೇಳೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಇತರ ತನಿಖಾ ಸಂಸ್ಥೆಗಳು ಇಂದು ಮತ್ತೊಂದು ಸುತ್ತಿನ ದಾಳಿ ನಡೆಸಿದೆ.

ಕರ್ನಾಟಕ ಸೇರಿ ಎಂಟು ವಿವಿಧ ರಾಜ್ಯಗಳಲ್ಲಿ ಪಿಎಫ್‌ಐ ಮೇಲೆ ದಾಳಿ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ ಪಿಎಫ್ ಐ ಮತ್ತು ಎಸ್ ಡಿಪಿಐನ 75 ಜನರನ್ನು ವಶಕ್ಕೆ ಪಡೆಯಲಾಗಿದೆ.

ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್‌ ಐ ಮುಖಂಡರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿಗಳು ಲಭಿಸಿವೆ. ಎನ್‌ ಐಎ ನೀಡಿದ ಸುಳಿವುಗಳ ಆಧಾರದ ಮೇಲೆ ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ಎಂಟು ರಾಜ್ಯಗಳಲ್ಲಿ ದಾಳಿ ನಡೆಸುತ್ತಿವೆ ಎಂದು ಎನ್‌ ಐಎ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ:ಮರ್ಸಿಡಿಸ್‌ ಕಾರಿಗೆ ಢಿಕ್ಕಿ ಹೊಡೆದು ಎರಡು ತುಂಡಾದ ಟ್ರಾಕ್ಟರ್ | ವೀಡಿಯೋ

ಕರ್ನಾಟಕದಲ್ಲಿ, 75 ಪಿಎಫ್‌ಐ ಸದಸ್ಯರನ್ನು ‘ಪ್ರಿವೆಂಟಿವ್ ಕಸ್ಟಡಿ’ ಅಡಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಅವರನ್ನು ಸ್ಥಳೀಯ ತಹಸೀಲ್ದಾರ್ ಮುಂದೆ ಹಾಜರು ಪಡಿಸಿ, ನ್ಯಾಯಾಂಗ ಬಂಧನದಡಿ ಜೈಲಿಗೆ ಕಳುಹಿಸಲಾಗುತ್ತದೆ.

ಪ್ರೆವೆಂಟಿವ್ ಆಕ್ಷನ್ ರಿಪೋರ್ಟ್ (PAR) ಅಡಿಯಲ್ಲಿ ಎಲ್ಲರನ್ನೂ ಬಂಧಿಸಲಾಗಿದೆ. ಅವರು ಸ್ಥಳೀಯ ತಹಸೀಲ್ದಾರ್ ಮುಂದೆ ಬಾಂಡ್ ಶ್ಯೂರಿಟಿ ನೀಡಬೇಕು. ಅವರು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿ ಸಮಾಜದ ಸಾಮರಸ್ಯವನ್ನು ಹಾಳು ಮಾಡುವುದಿಲ್ಲ. ಅವರು ಉತ್ತಮ ನಡವಳಿಕೆಯನ್ನು ಕಾಪಾಡಿಕೊಳ್ಳಬೇಕು. ಈ ಬಂಧಿತರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

ವಿಜಯಪುರ ಪಿಎಫ್ಐ ಸಂಘಟನೆ ಜಿಲ್ಲಾಧ್ಯಕ್ಷ ಅಶ್ಫಾಕ್ ಜಮಖಂಡಿ ಎಂಬವನನ್ನು ಪೊಲೀಸರು ಮಂಗಳವಾರ ಬೆಳಂಬೆಳಿಗ್ಗೆ ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಸಂಘಟನೆ ಕಾರ್ಯಕರ್ತರ ಮೇಲೆ ದಾಳಿ ನಡೆಸಿ ಅಜಮ್ ನಗರದ ಝಕಿವುಲ್ಲಾ ಫಾರುಖ್ ಫೈಜಿ, ಶಿವಾಜಿ ನಗರದ ಸಲಾಲುದ್ದೀನ್ ಬಾಬುಸಾಬ್ ಕಿಲ್ಲೇವಾಲೆ(44), ಅಸಾದಖಾನ್ ಸೊಸೈಟಿಯ ಅಬಿದಖಾನ್ ಗೌಸಖಾನ್ ಕಡೋಲಿ, ಬದ್ರುದ್ದಿನ್ ಹಸಮಸಾಬ್ ಪಟೇಲ್, ಅಮನ್ ನಗರದ ಸಮೀವುಲ್ಲಾ ಅಬ್ದುಲಮಜೀದ ಪೀರಜಾದೆ, ಬಾಕ್ಸೈಟ್ ರೋಡ್ ನ ಜಹೀರ ಗೌಸಮುದ್ದಿನ್ ಘೀವಾಲೆ, ವಿದ್ಯಾಗಿರಿಯ ರೇಹಾನ್ ಅಬ್ದುಲ್ ಅಜೀಜ್ ಶಾಯನ್ನವರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ರಾಯಚೂರಿನಲ್ಲಿ ಪಿಎಫ್ ಐ ಮಾಜಿ ಅಧ್ಯಕ್ಷ ಮಹ್ಮದ್ ಇಸ್ಮಾಯಿಲ್ ಹಾಗೂ ಕಾರ್ಯದರ್ಶಿ ಆಸೀಂ ನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲೂ ದಾಳಿ ಮಾಡಲಾಗಿದ್ದು, 5 ಮಂದಿ ಪಿಎಫ್ಐ ಮುಖಂಡರು- ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗದಲ್ಲಿ ಪಿಎಫ್‌ಐ ಮುಖಂಡ ಅಫ್ಹಾನ್ ಅಲಿಯನ್ನು ಮುಂಜಾಗ್ರತಾ ಕ್ರಮದಲ್ಲಿ ಬಂಧಿಸಲಾಗಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಉಗ್ರಗಾಮಿ ಸಂಘಟನೆಯ ನಾಲ್ವರನ್ನು ಮುಂಜಾಗ್ರತಾ ಬಂಧನದಲ್ಲಿ ಬಂಧಿಸಲಾಗಿದೆ.

ಚಾಮರಾಜನಗರದಲ್ಲಿ ಇಬ್ಬರು ಪಿಎಫ್‌ಐ ಮುಖಂಡರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿದೆ. ಪಿಎಫ್‌ಐ ಜಿಲ್ಲಾಧ್ಯಕ್ಷ ಕಪಿಲ್ ಮತ್ತು ಕಾರ್ಯದರ್ಶಿ ಸುಹೈಬ್ ಬಂಧಿತರು.

ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107 151 ಅಡಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿ ಪೊಲೀಸರು ಅಪ್ಪ, ಮಗ ಸೇರಿ 5 ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅಪ್ಪ ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಹಾಗೂ ಇತರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.