“ಶಕ್ತಿ’ ಯೋಜನೆಗೆ ವರ್ಷ: ಮಹಿಳೆಯರಿಗೆ ಹರ್ಷ; ಪ್ರಯಾಣಿಕರ ಸಂಖ್ಯೆ ಏರಿಕೆ

ಆರ್ಥಿಕತೆ ಸ್ಥಿರವಾಗಿದ್ದರೂ, 950 ಕೋಟಿ ರೂ. ಹಣ ಬಾಕಿ

Team Udayavani, Jun 10, 2024, 7:15 AM IST

“ಶಕ್ತಿ’ ಯೋಜನೆಗೆ ವರ್ಷ: ಮಹಿಳೆಯರಿಗೆ ಹರ್ಷ; ಪ್ರಯಾಣಿಕರ ಸಂಖ್ಯೆ ಏರಿಕೆ

ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್‌ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಮಾತ್ರ ಹಾಗೇ ಇದೆ.

ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸುವ ಶಕ್ತಿ’ ಗ್ಯಾರಂಟಿ ಯೋಜನೆಗೆ ಸೋಮವಾರ (ಜೂ. 10)ಕ್ಕೆ ಒಂದು ವರ್ಷ ತುಂಬುತ್ತದೆ. ಈ ಅಲ್ಪಾವಧಿಯಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕೊಡುಗೆ ನೀಡಿದ ಮತ್ತು ಉಳಿದ ಗ್ಯಾರಂಟಿಗಳಿಗೆ ಹೋಲಿಸಿದರೆ ಕಡಿಮೆ ವೆಚ್ಚದಲ್ಲಿ ಸರಕಾರಕ್ಕೆ ಹೆಚ್ಚು ಜನಪ್ರಿಯತೆಯನ್ನೂ ತಂದುಕೊಟ್ಟಿದೆ. ನಾಲ್ಕೂ ಸಾರಿಗೆ ನಿಗಮಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಬದಲಿಗೆ ಸರಕಾರದಿಂದಲೇ ಈ ಯೋಜನೆಗೆ ಬರಬೇಕಾದ ಸುಮಾರು 950 ಕೋಟಿ ರೂ. ಬಾಕಿ ಇದೆ. ಜತೆಗೆ 2,350 ಸೇರ್ಪಡೆಯಾಗಿದ್ದು ಒಳಗೊಂಡಂತೆ ಅಂದಾಜು 4,000 ಹೊಸ ಬಸ್‌ಗಳು ಕಾರ್ಯಾಚರಣೆಗೆ ತಗಲುವ ವೆಚ್ಚದ ಹೆಚ್ಚುವರಿ ಹೊರೆಯೂ ನಿಗಮಗಳ ಮೇಲೆ ಬೀಳಲಿದೆ.

ಸರಕಾರದಿಂದ ಬಾರದ ಬಾಕಿ ಹಣ
ಯೋಜನೆಯಡಿ ಸರಕಾರದಿಂದ ಪ್ರಸಕ್ತ ಸಾಲಿನಲ್ಲಿ ಬರಬೇಕಾದ ಯಾವುದೇ ಬಾಕಿ ಇಲ್ಲ. ಆದರೆ ಕಳೆದ ವರ್ಷದ 950 ಕೋಟಿ ರೂ. ಇನ್ನೂ ಪಾವತಿ ಆಗಿಲ್ಲ. ಈ ಪೈಕಿ ಕೆಎಸ್‌ಆರ್‌ಟಿಸಿಯದ್ದು ಸಿಂಹಪಾಲು ಇದೆ. ಜತೆಗೆ ಕೆಎಸ್‌ಆರ್‌ಟಿಸಿಯ ಸಾವಿರ ಕೋಟಿ ರೂ. ಸಾಲವೂ ಇದೆ. ಈ ಮಧ್ಯೆ ಸರಕಾರವು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ “ಶಕ್ತಿ’ ಯೋಜನೆಗೆ ಸುಮಾರು ಐದು ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಆದರೆ ಉಳಿದ ಯಾವುದೇ ವೆಚ್ಚವನ್ನು ನಿಗಮವು ಸ್ವಂತ ಬಲದಿಂದಲೇ ನಿಭಾಯಿಸುವಂತೆ ಸೂಚಿಸಿದೆ.

ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಮುಂದಿರುವ ಗುರಿ ಬಸ್‌ಗಳ ಸಂಖ್ಯೆ ಹೆಚ್ಚಿಸಿ, ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನನುಕೂಲತೆ ತಪ್ಪಿಸುವುದು, ಗ್ರಾಮೀಣ ಭಾಗಗಳಿಗೆ ಇನ್ನಷ್ಟು ಉತ್ತಮ ಸೇವೆ ಕಲ್ಪಿಸುವುದಾಗಿದೆ. ನಿಯಮಿತವಾಗಿ ಸರಕಾರದಿಂದ ಯೋಜನೆ ಅಡಿ ಹಣ ಪಾವತಿ ಕೂಡ ಆಗುತ್ತಿದೆ. ಜತೆಗೆ ಈ ಯಶಸ್ಸಿಗೆ ಕಾರಣವಾದ ಸಿಬಂದಿಗೆ ಅಪಘಾತ ವಿಮೆ ಸೇರಿದಂತೆ ಇತರೆ ಸೌಲಭ್ಯಗಳನ್ನೂ ಹೆಚ್ಚಿಸಲಾಗಿದೆ.
– ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ

“ಶಕ್ತಿ’ ಯೋಜನೆ ಒಂದು. ಆದರೆ, ಅದರಿಂದ ಆಗುತ್ತಿರುವ ಪ್ರಯೋಜನಗಳು ಸಾಕಷ್ಟು. ಅದೆಲ್ಲವೂ ಈಗಾಗಲೇ ಹಲವು ಅಧ್ಯಯನ ವರದಿಗಳಲ್ಲಿ ಕಾಣಬಹುದು. ಇದೆಲ್ಲದರ ಹಿಂದೆ ಸಾರಿಗೆ ನೌಕರರ ಶ್ರಮ ಅಡಗಿದೆ. ಹೆಚ್ಚುವರಿ ಬಸ್‌ಗಳು ಕೂಡ ಸೇರ್ಪಡೆಯಾಗುತ್ತಿರುವುದರಿಂದ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಒದಗಿಸಲಾಗುವುದು.
– ವಿ. ಅನ್ಬುಕುಮಾರ್‌,
ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ

– ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.