Shimoga; ಭ್ರಷ್ಟಾಚಾರದಲ್ಲಿ ವಿಜಯೇಂದ್ರಗೆ ಮೊದಲ ರ‍್ಯಾಂಕ್: ಮಧು ಬಂಗಾರಪ್ಪ


Team Udayavani, Aug 3, 2024, 4:10 PM IST

Shimoga; ಭ್ರಷ್ಟಾಚಾರದಲ್ಲಿ ವಿಜಯೇಂದ್ರಗೆ ಮೊದಲ ರ‍್ಯಾಂಕ್: ಮಧು ಬಂಗಾರಪ್ಪ

ಶಿವಮೊಗ್ಗ: ವಿಜಯೇಂದ್ರ‌ ಅವರು ಸಿದ್ದರಾಮಯ್ಯ ಹಾಗು ಡಿಕೆಶಿವಕುಮಾರ್ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಪಕ್ಷದವರೇ ಆದ ಯತ್ನಾಳ್ ಅವರು ವಿಜಯೇಂದ್ರ‌ ಬಗ್ಗೆ ಮಾತನಾಡಿದ್ದಾರೆ. ಅದರ ಬಗ್ಗೆ ಮಾತನಾಡಲ್ಲ. ಡಿಕೆಶಿ ಬಗ್ಗೆ ಮಾತನಾಡಲು ಏನು ಯೋಗ್ಯತೆಯಿದೆ? ವಿಜಯೇಂದ್ರ‌ ಎಲ್ಲಿದ್ದರು, ಇವರು ಏನು ಕೆಲಸ ಮಾಡುತ್ತಿದ್ದರು. ವಿಜಯೇಂದ್ರ‌ ಅವರ ಆಸ್ತಿ ಎಷ್ಟು, ಅವರ ಆಸ್ತಿ ಹೇಗೆ ಬಂತು ಹೇಳಬೇಕಲ್ಲ. ವಿಜಯೇಂದ್ರ‌ ಅವರ ಮೇಲೂ ಕೇಸ್ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ (ಆ 03) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ತಪ್ಪು ಮಾಡದಿದ್ದರೂ ಜೈಲಿಗೆ ಹೋಗಿದ್ದರು. ಅವರು ಜೈಲಿಗೆ ಹೋಗಲು ಯಡಿಯೂರಪ್ಪ, ವಿಜಯೇಂದ್ರ‌ ‌ಕಾರಣ. ಡಿಕೆಶಿ ಬೆಳೆಯಬಾರದು, ಅವರನ್ನು ತುಳಿಯಬೇಕೆಂದು ಮಾಡಿದರು. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಜೈಲಿಗೆ ಕಳುಹಿಸಿದರು ಎಂದರು.

2012 ರಲ್ಲಿ ಮುಡಾ ಹಗರಣ ನಡೆದಿದೆ. 2012 ರಲ್ಲಿ ಬಿಜೆಪಿ ಸರಕಾರ ಇತ್ತು. ಮುಡಾ ಅಧ್ಯಕ್ಷರಾಗಿದ್ದವರು ರಾಜೀವ್. ಆದರೂ ಮುಡಾ ಹ್ಯಾಂಡಲ್ ಮಾಡುತ್ತಿದ್ದದ್ದು ವಿಜಯೇಂದ್ರ‌. ವಿಜಯೇಂದ್ರ‌ ಅವರ ಕಾರಣದಿಂದಲೇ ಯಡಿಯೂರಪ್ಪ ಪೂರ್ತಿಯಾಗಿ ಅಧಿಕಾರ ಮಾಡಲಾಗಲಿಲ್ಲ. ವಿಜಯೇಂದ್ರ‌ ಅವರು ಭ್ರಷ್ಟಾಚಾರ ಬಗ್ಗೆ ಮಾತನಾಡಬೇಕಾದರೆ ಹುಷಾರಾಗಿ ಇರಬೇಕು. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಈಡಿ ಸಚಿವ ಸಂಪುಟ ಸಿದ್ದರಾಮಯ್ಯ ಜೊತೆ ನಿಲ್ಲುತ್ತೇವೆ ಎಂದರು.

ಬೆಂಗಳೂರು – ಮೈಸೂರು ಪಾದಯಾತ್ರೆ ವಿಚಾರಕ್ಕೆ ಮಾತನಾಡಿ, ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡುತ್ತೇನೆ. ಎಲ್ಲರ ಹಗರಣ ಹೊರಗೆ ತೆಗೆಯಬೇಕು. ಇವರಿಗೆ ಒಬಿಸಿ ಮುಖ್ಯಮಂತ್ರಿ ಆಗಿರುವುದು ಹೊಟ್ಟೆ ಕಿಚ್ಚು. ಸತ್ಯ ಗೆಲ್ಲಬೇಕು, ಸುಳ್ಳು ಸೋಲಬೇಕು. ನಾವೆಲ್ಲಾ ಸಿದ್ದರಾಮಯ್ಯ ಅವರ ಜೊತೆ ನಿಲ್ಲುತ್ತೇವೆ ಎಂದು ಮಧು ಬಂಗಾರಪ್ಪ ಹೇಳಿದರು.

ಭ್ರಷ್ಟಾಚಾರದಲ್ಲಿ ಯಾರಿಗಾದರೂ ರಾಂಕ್ ಕೊಟ್ಟರೆ ವಿಜಯೇಂದ್ರ‌ ಅವರೇ ನಂ.1. ವಿಜಯೇಂದ್ರ‌ ಅವರೇ ಹಿಂದುಳಿದ ವರ್ಗದ ನಾಯಕನನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಕೇಜ್ರಿವಾಲ್ ಗೆ ಪ್ರಾಸಿಕ್ಯೂಷನ್ ಮಾಡಿದ್ದರು. ಅವರು ಜೈಲಲ್ಲಿದ್ದಾರೆ, ಒಳ್ಳೆಯ ಆಡಳಿತ ನಡೆಯುತ್ತಿದೆ. ಬಿಜೆಪಿಯವರಿಗೆ ಜೈಲಿಗೆ ಕಳುಹಿಸುವುದು ಎಂದರೆ ಖುಷಿ. ಯತ್ನಾಳ್ ಅವರು ವಿಜಯೇಂದ್ರ‌ ಬಗ್ಗೆ ಹಿಗ್ಗಾಮುಗ್ಗ ಬೈಯುತ್ತಿದ್ದಾರೆ. ನಾಯಿ ತರಹ ಬೈಯುತ್ತಿದ್ದಾರೆ ಅದರ ಬಗ್ಗೆ ಅವರಿಗೆ ನಾಚಿಕೆ ಇಲ್ವಾ? ಬಿಜೆಪಿ ಪಾದಯಾತ್ರೆ ಅವರು ಅವರ ವಿರುದ್ದವೇ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಬೀಳಿಸುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿ ಅವರ ಭ್ರಷ್ಟಾಚಾರದ ವಿರುದ್ದವೇ ಪಾದಯಾತ್ರೆ ಮಾಡುತ್ತಿದೆ. ಈ ಪಾದಯಾತ್ರೆಯನ್ನು ನಾನು ಖಂಡಿಸುತ್ತೇನೆ ಎಂದು ಕಿಡಿಕಾರಿದರು.

ವಾಲ್ಮೀಕಿ ನಿಗಮ ಹಗರಣ ವಿಚಾರದ ಬಗ್ಗೆ ಮಾತನಾಡಿ, ಈ ಬಗ್ಗೆ ಮುಖ್ಯಮಂತ್ರಿ ಅವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸಭೆ ಒಳಗೆ ಹಾಗು ಹೊರಗೆ ಹೇಳಿದ್ದಾರೆ. ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಇಲ್ಲಿಂದ ಸಂಸತ್ ಗೆ ಹೋಗಿರುವ ಬಿ.ವೈ. ರಾಘವೇಂದ್ರಗೆ ಕಮಿಟ್ಮೆಂಟ್ ಇಲ್ಲ. ಭೂಹಕ್ಕು ಪತ್ರ ಕೊಡಿಸುವಲ್ಲಿ ಸದನದಲ್ಲಿ ಅವರು ಮಾತನಾಡಿಲ್ಲ. ಬಗರ್ ಹುಕುಂ ಹಾಗೂ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿಸುವಲ್ಲಿ ರಾಘವೇಂದ್ರ ವಿಫಲರಾಗಿದ್ದಾರೆ. ಕೇವಲ ಮತ ಗಳಿಸಿಕೊಂಡು ಹೋಗಿದ್ದಾರೆ. ಭೂ ಹಕ್ಕು ಕೊಡಿಸುವ ಪರವಾಗಿ ಕಾಗೋಡು ತಿಮ್ಮಪ್ಪ ಅವರು ಹೋರಾಟ ಮಾಡಿದ್ದರು. ಆ ಹೋರಾಟವನ್ನು ನಾವು ಮೈಗೂಡಿಸಕೊಳ್ಳಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.