![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 4, 2022, 8:19 PM IST
ಸಕಲೇಶಪುರ: ದೋಣಿಗಾಲ್ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ಖಾಸಗಿ ಮತ್ತು ಸಾರ್ವಜನಿಕ ಬಸ್ಗಳಿಗೆ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.
ಈ ಕುರಿತು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರಕಟಣೆ ಹೊರಡಿಸಿದ್ದಾರೆ. ದೋಣಿಗಾಲ್ ಸಮೀಪ ಭೂ ಕುಸಿತದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ 6ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.
ಇದೀಗ ಮಡಿಕೇರಿ-ಸಂಪಾಜೆ ನಡುವಿನ ಕೋಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿದ್ದು ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅಲ್ಲಿ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿಗಾಲ್ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಸ್ಗಳ ಸಂಚಾರಕ್ಕೆ ನಿಷೇಧ ಹೇರಿದ್ದರಿಂದ ಹಾಸನ-ಸಕಲೇಶಪುರ ನಡುವೆ ಸಂಚರಿಸುವ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.