Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್
ಮದುವೆಯಾಗಿ 16 ವರ್ಷ ಆಗಿತ್ತು. ಮಕ್ಕಳಾಗದಿರುವ ವಿಚಾರದಲ್ಲಿ ಕೊರಗಿತ್ತು...
Team Udayavani, Jul 8, 2024, 7:12 PM IST
ಶಿವಮೊಗ್ಗ: ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೆ. ನಂತರ ಹೊನ್ನಾಳಿಯಲ್ಲಿ ಜೋಳಕ್ಕೆ ಬಳಸುವ ವಿಷ ಕುಡಿದಿರುವ ವಿಷಯ ತಿಳಿಯಿತು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದರು.
ಮಧ್ಯಾಹ್ನ 1.45ಕ್ಕೆ ಸಹೋದರ ಫೋನ್ ಮಾಡಿ ವಿಷಯ ತಿಳಿಸಿದ್ದರು. ದಾವಣಗೆರೆಗೆ ಶಿಫ್ಟ್ ಮಾಡೋಕೆ ಹೇಳಿದ್ದೆವು. ಶಿವಮೊಗ್ಗ ಹತ್ತಿರ ಎಂದು ಇಲ್ಲಿಗೆ ಶಿಫ್ಟ್ ಮಾಡಿದ್ದಾರೆ ಎಂದರು.
‘ಮದುವೆಯಾಗಿ 16 ವರ್ಷ ಆಗಿತ್ತು. ಮಕ್ಕಳಾಗದಿರುವ ವಿಚಾರದಲ್ಲಿ ಕೊರಗಿತ್ತು. ಡಿಅಡಿಕ್ಷನ್ ಸೆಂಟರ್ನಲ್ಲಿ ಎರಡು ತಿಂಗಳು ಇದ್ದರು. ಅಲ್ಲಿ ಸರಿ ಹೋಗಿದ್ದರು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೆ ನೋಡಿಕೊಳ್ಳುತ್ತಿದ್ದರು. ಕೆರೆಗಳಿಗೆ ಭೇಟಿ ನೀಡಿ ಬರುವಾಗ ವಿಷಯ ಗೊತ್ತಾಯಿತು. ಮಂಗಳವಾರ ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದರು.
ಬಿ.ಸಿ. ಪಾಟೀಲ್ ಅವರ ಮೊದಲ ಪುತ್ರಿ ಸೌಮ್ಯ ಅವರ ಪತಿ ಕೆ.ಜಿ. ಪ್ರತಾಪ್ ಕುಮಾರ್ (42) ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರೇಕೆರೂರ್ ನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಸಮೀಪದ ಅರಕೆರೆ ಗ್ರಾಮದ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಕಂಡವರು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.