Shivamogga; ಚಂದ್ರಶೇಖರ ನಿವಾಸದಲ್ಲಿ ಸಿಐಡಿ ತಂಡ ತನಿಖೆ: ಪೆನ್ ಡ್ರೈವ್ ವಶಕ್ಕೆ
ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದು ನಮಗೂ ತಿಳಿಯಬೇಕಿದೆ....ಪತ್ನಿ ಕಳವಳ
Team Udayavani, May 28, 2024, 8:29 PM IST
ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ ಮನೆಗೆ ಮಂಗಳವಾರ ಸಿಐಡಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪ್ರಕರಣವನ್ನು ಸರಕಾರ ಇಂದು ಸಿಐಡಿಗೆ ತನಿಖೆಗೆ ವಹಿಸಿದ ಬೆನ್ನಲ್ಲೇ ಡಿವೈಎಸ್ಪಿ ಮೊಹಮ್ಮದ್ ರಫಿ ನೇತೃತ್ವದಲ್ಲಿ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ತಂಡ ಮನೆಗೆ ಭೇಟಿ ನೀಡಿ, ಬಳಿಕ ವಿನೋಬಾ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಚಂದ್ರಶೇಖರ ಪತ್ನಿ ಹೇಳಿಕೆ ನೀಡಿದ್ದು, ‘ಸಿಐಡಿ ಅಧಿಕಾರಿಗಳು ಬಂದಿದ್ದರು.ಸುಮಾರು 45 ನಿಮಿಷ ವಿಚಾರಣೆ ನಡೆಸಿದರು. ಮನೆಯಲ್ಲಿದ್ದ ಪದ್ಮನಾಭ ಹೆಸರಿನ ಪೇನ್ ಡ್ರೈವ್ ತಗೆದುಕೊಂಡು ಹೋಗಿದ್ದಾರೆ. ಲ್ಯಾಪ್ ಟಾಪ್ ಜತೆಗಿದ್ದ ಪೆನ್ ಡ್ರೈವ್ ನಲ್ಲಿ ಏನಿದೆ ಎಂಬುದು ನಮಗೂ ತಿಳಿಯಬೇಕಿದೆ. ಏನೂ ತಿಳಿಸದೆ ಪೆನ್ ಡ್ರೈವ್ ತಗೆದುಕೊಂಡು ಹೋಗಿದ್ದಾರೆ. ಡೆತ್ ನೋಟ್ ಹಾಗೂ ಡೆತ್ ನೋಟ್ ಬರೆದ ಪೆನ್ ಕೂಡ ತೆಗೆದುಕೊಂಡು ಹೋಗಿದ್ದಾರೆ’ಎಂದರು.
‘ಪೆನ್ ಡ್ರೈವ್ ನಲ್ಲಿರುವ ಅಂಶ ಡಿಲಿಟ್ ಮಾಡುವ ಸಂಭವ ಇದೆ. ಅದರಲ್ಲಿ ಏನಿದೆ ಎನ್ನುವುದು ನಮಗೆ ತೋರಿಸಬೇಕು. ಸಿಐಡಿ ಅಧಿಕಾರಿಗಳು ನಮ್ಮ ಮನೆಯವರ( ಚಂದ್ರಶೇಖರ) ಸ್ವಭಾವ ಕೇಳಿದರು. ದಕ್ಷ ಅಧಿಕಾರಿ ಎನ್ನುವುದು ಅವರಿಗೂ ಮನವರಿಕೆ ಆಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.