Hot Meal: ಮಧ್ಯಾಹ್ನದ ಶಾಲಾ ಬಿಸಿಯೂಟಕ್ಕೆ ತೊಗರಿ ಬೇಳೆ ಕೊರತೆ!


Team Udayavani, May 31, 2024, 6:45 AM IST

Hot Meal: ಮಧ್ಯಾಹ್ನದ ಶಾಲಾ ಬಿಸಿಯೂಟಕ್ಕೆ ತೊಗರಿ ಬೇಳೆ ಕೊರತೆ!

ದಾವಣಗೆರೆ: ಬೇಸಗೆ ರಜೆ ಮುಗಿದು ಶಾಲೆಗಳು ಪುನರಾರಂಭಗೊಂಡಿದ್ದು, ಹೊಸ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಮಧ್ಯಾಹ್ನದ ಶಾಲಾ ಬಿಸಿಯೂಟಕ್ಕೆ ತೊಗರಿ ಬೇಳೆ ಕೊರತೆ ಕಾಡುತ್ತಿದೆ. ರಾಜ್ಯದ ಹಲವು ಶಾಲೆಗಳಲ್ಲಿ ತೊಗರಿ ಬೇಳೆ ಇಲ್ಲದೆ ಬಿಸಿಯೂಟದ ಅಡುಗೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜೂನ್‌ ತಿಂಗಳಿನ ಬಿಸಿಯೂಟಕ್ಕೆ ಬೇಕಾದ ತೊಗರಿ ಬೇಳೆ ಪೂರೈಕೆಗೆ ಇನ್ನೂ ಟೆಂಡರ್‌ ಕರೆಯದೆ ಇರುವುದರಿಂದ ರಾಜ್ಯಾದ್ಯಂತ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಬಿಸಿಯೂಟಕ್ಕೆ ಹಿಂದಿನ ದಾಸ್ತಾನು ಬೇಳೆ ಅಂದರೆ, ಬರಗಾಲದಲ್ಲಿ ಪೂರೈಸಿದ ಬೇಳೆಯನ್ನೇ ಸ್ವತ್ಛಗೊಳಿಸಿ ಬಳಸುವುದು ಅನಿವಾರ್ಯವಾಗಿದೆ.

ಬರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಬೇಸಗೆ ರಜಾ ದಿನಗಳಲ್ಲಿಯೂ ಮಧ್ಯಾಹ್ನದ ಶಾಲಾ ಬಿಸಿಯೂಟ ಮುಂದುವರಿಸಿತ್ತು. 20ಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಯನ್ನು ಬಿಸಿಯೂಟ ಕೇಂದ್ರವನ್ನಾಗಿ ಮಾಡಿ, ಮಾರ್ಚ್‌ನಲ್ಲಿ ತೊಗರಿ ಬೇಳೆ ಪೂರೈಕೆ ಮಾಡಿತ್ತು. ಆಗ ಖರ್ಚಾಗದೆ ಉಳಿದ ಬೇಳೆಯೇ ಈಗ ಬಿಸಿಯೂಟಕ್ಕೆ ಬಳಕೆಯಾಗಬೇಕಿದೆ.

ಪ್ರಸಕ್ತ ವರ್ಷ ಶಾಲಾರಂಭದಲ್ಲಿಯೇ ಮಕ್ಕಳಿಗೆ ಪುಸ್ತಕ, ಸಮವಸ್ತ್ರ ಪೂರೈಕೆಗೆ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ, ಬಿಸಿಯೂಟಕ್ಕೆ ಬೇಕಾದ ಅಗತ್ಯ ಬೇಳೆ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳುವಲ್ಲಿ ಹಿಂದೆ ಬಿದ್ದಿದೆ. ಜೂನ್‌ ತಿಂಗಳಿಗೆ ಬೇಕಾದ ಬೇಳೆಗಾಗಿ ಈವರೆಗೆ ಟೆಂಡರ್‌ ಕರೆದಿಲ್ಲ.  ಟೆಂಡರ್‌ ಪ್ರಕ್ರಿಯೆ  ಬಳಿಕವೇ  ಹೊಸ ಬೇಳೆ ಸರಬರಾಜು ಆಗಲಿದೆ.

ಹಳೆ ಬೇಳೆಯೇ ಗತಿ: 

ಯಾವ ಶಾಲೆಯಲ್ಲಿ ಹಿಂದೆ ಪೂರೈಕೆಯಾ ಗಿದ್ದ ತೊಗರಿಬೇಳೆ ಖಾಲಿಯಾಗಿದೆಯೋ ಆ ಶಾಲೆಯವರು ಹತ್ತಿರದ ಬೇಸಗೆ ಮಧ್ಯಾಹ್ನದ ಬಿಸಿಯೂಟ ಕೇಂದ್ರದಿಂದ ತೊಗರಿಬೇಳೆ ದಾಸ್ತಾನು ಇದ್ದರೆ ತರಿಸಿಕೊಳ್ಳಲು ಸೂಚಿಸಲಾಗಿದೆ. ಇನ್ನು ಕೆಲವು ಶಾಲೆಗಳು ನೆರೆಯ ಶಾಲೆಗಳಿಂದ ತೊಗರಿಬೇಳೆ ಎರವಲು ಪಡೆಯುತ್ತಿವೆ. ನೆರೆಯ ಶಾಲೆಗಳಲ್ಲಿಯೂ ತೊಗರಿಬೇಳೆ ಸಿಗದಿದ್ದಾಗ ಅಕ್ಷರ ದಾಸೋಹ ಅಧಿಕಾರಿಗಳ ಅನುಮತಿಯೊಂದಿಗೆ ಶಾಲಾ ಬಿಸಿಯೂಟ ಅನುದಾನದಲ್ಲಿ ಬೇಳೆ ಖರೀದಿಸಿ ಮಕ್ಕಳಿಗೆ ಬಿಸಿಯೂಟ ಸಿದ್ಧಪಡಿಸಲು ಶಾಲಾ ಶಿಕ್ಷಣ ಇಲಾಖೆ ಯೋಜನೆ ಹಾಕಿಕೊಂಡಿದೆ.

ಮಾರ್ಚ್‌ನಲ್ಲಿ ಸರಬರಾಜಾಗಿ ದಾಸ್ತಾನು ಉಳಿದ ಬೇಳೆ ಒಂದೆರಡು ವಾರಗಳಿಗೆ ಮಾತ್ರ ಸಾಕಾಗುವಷ್ಟಿದೆ. ಹಾಗಾಗಿ ಸರಕಾರ ಕೂಡಲೇ ಟೆಂಡರ್‌ ಕರೆದು ಜೂ.15ರೊಳಗಾಗಿ ಎಲ್ಲ ಶಾಲೆಗಳಿಗೆ ಸಮರ್ಪಕ ಪ್ರಮಾಣದಲ್ಲಿ ಬೇಳೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕಿದೆ.

ಬೇಳೆಗಾಗಿ ನೆರೆ ಶಾಲೆಗಳಿಗೆ ಮೊರೆ:

ಮೇ 31ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದ್ದು ಪ್ರಥಮ ದಿನ ಎಲ್ಲ ಶಾಲೆಗಳಲ್ಲಿ ಸಿಹಿಯೂಟ ಮಾಡಿ, ಮಕ್ಕಳಿಗೆ ನೀಡಲು ಸಿದ್ಧತೆ ನಡೆದಿದೆ. ಒಂದೆರೆಡು ದಿನ ಪಲಾವ್‌, ಉಪ್ಪಿಟ್ಟು ಮಾಡಿದರೂ ಜೂ.3ರಿಂದ ನಿರಂತರ ಬಿಸಿಯೂಟ ಯಥಾ ಪ್ರಕಾರ ನಡೆಯಬೇಕಿದ್ದು, ಮುಖ್ಯ ಶಿಕ್ಷಕರು ಶಾಲಾ ಮಕ್ಕಳಿಗೆ ಬೇಕಾದ ಅಗತ್ಯ ಬೇಳೆ ಹೊಂದಿಸಿಕೊಳ್ಳಲು ನೆರೆಯ ಶಾಲೆಗಳ ಕದ ತಟ್ಟುತ್ತಿದ್ದಾರೆ.

ಬಿಸಿಯೂಟಕ್ಕಾಗಿ ಜೂನ್‌ ತಿಂಗಳಿನ ತೊಗರಿ ಬೇಳೆ ಇನ್ನೂ ಪೂರೈಕೆಯಾಗಿಲ್ಲ. ಈ ವಾರದಲ್ಲಿ ಟೆಂಡರ್‌ ಕರೆಯುವ ಸಾಧ್ಯತೆ ಇದೆ. ಪ್ರಸ್ತುತ ಜಿಲ್ಲೆಯಲ್ಲಿರುವ ಹಳೆಯ ದಾಸ್ತಾನು ಬಳಸಿಕೊಂಡು ಇಲ್ಲವೇ ನೆರೆಯ ಶಾಲೆಗಳಿಂದ ಬೇಳೆ ಪಡೆದು ಬಿಸಿಯೂಟ ತಯಾರಿಸಲು ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ.– ದುರ್ಗಪ್ಪ,  ಅಕ್ಷರ ದಾಸೋಹ ಅಧಿಕಾರಿ, ದಾವಣಗೆರೆ 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.