Politics; ಹಾಗೆ ಹೇಳಬಾರದಿತ್ತು….: ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆ ಕೇಳಿದ ಬಿಜೆಪಿ ನಾಯಕ


Team Udayavani, Sep 3, 2024, 5:29 PM IST

Siddaramaiah

ಬೆಂಗಳೂರು: ರಾಜಕೀಯದಲ್ಲಿ ಸದಾ ನಾಯಕರುಗಳು ಆರೋಪ – ಪ್ರತ್ಯಾರೋಪಗಳನ್ನು ಮಾಡುತ್ತಲೇ ಇರುತ್ತಾರೆ. ಮಾತಿನ ಪೆಟ್ಟು, ಅಸ್ತ್ರಗಳನ್ನು ಪ್ರಯೋಗಿಸುತ್ತಾ ಎದುರಾಳಿಯನ್ನು ಕಟ್ಟಿ ಹಾಕಲು ನೋಡುತ್ತಿರುತ್ತಾರೆ. ಕೆಲವೊಮ್ಮೆ ಈ ಮಾತಿನ ವರಸೆ ಸಭ್ಯತೆಯ ಗಡಿ ದಾಟಿ ಹೋಗವುದನ್ನು ಈ ರಾಜ್ಯದ ಜನತೆ ಕಂಡಿದೆ. ಆದರೆ ಇದೀಗ ಮಾತಿನ ಭರದಲ್ಲಿ ತಪ್ಪಿ ಆಡಿದ ಮಾತಿಗೆ ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಲ್ಲಿ ಕ್ಷಮೆ ಕೇಳಿದ್ದಾರೆ.

ವಿರೋಧ ಪಕ್ಷದ ಉಪನಾಯಕ, ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ (Arvind Bellad) ಅವರು ತಪ್ಪಿ ಆಡಿದ ಮಾತಿಗಾಗಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೇಳಿ ಪತ್ರ ಬರೆದಿದ್ದಾರೆ.

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ಅರವಿಂದ ಬೆಲ್ಲದ್‌ ಅವರು “ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ʼಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾʼ” ಎಂದು ಹೇಳಿದ್ದರು. ಇದೀಗ ಈ ಪದ ಬಳಕೆಯ ಬಗ್ಗೆ ಅರವಿಂದ ಬೆಲ್ಲದ್‌ ಅವರು ಬೇಸರ ವ್ಯಕ್ತಿ ಪಡಿಸಿ ಪತ್ರದ ಮುಖಾಂತರ ಕ್ಷಮೆಯಾಚಿಸಿದ್ದಾರೆ.

ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಅವರಿಂದ ಬೆಲ್ಲದ್‌ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲಿ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸ ಬಯಸುತ್ತೇನೆ ಎಂದಿದ್ದಾರೆ.

ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿ ಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.