Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

ಆಂತರಿಕ ಕಾರಣದಿಂದ ಸರಕಾರ ಬಿದ್ದರೆ ನಾವು ಜವಾಬ್ದಾರರಲ್ಲ...

Team Udayavani, Jun 30, 2024, 6:54 PM IST

prahlad-joshi

ಧಾರವಾಡ : ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಕುರ್ಚಿಗಾಗಿ ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸ್ಥಾನ ಸೃಷ್ಟಿಸುವಂತೆ ಒತ್ತಾಯ ಮಾಡುತ್ತಿದ್ದಾರೆ . ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಿಂಬಾಲಕರಿಂದ ಹೇಳಿಸುತ್ತಿದ್ದಾರೆ. ಸಿಎಂ ಬದಲಾವಣೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಹಿಂಬಾಲಕರಿಂದ ಹೇಳಿಸುತ್ತಿದ್ದಾರೆ . ಇದರಿಂದ ರಾಜ್ಯ ಸರ್ಕಾರದ ದಿಕ್ಕು ದಾರಿ ತಪ್ಪಿದಂತಾಗಿದೆ ಎಂದರು.

ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎನ್ನುತ್ತಾರೆ . ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ತಮ್ಮ ಹಿಂಬಾಲಕರ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ . ಏನೇ ಹೇಳಿದರೂ ಯಾರ ವಿರುದ್ಧವೂ ಕ್ರಮ ಆಗುತ್ತಿಲ್ಲ . ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಬಂದು ನಿಂತಿದೆ ಎಂದರು .

ಒಂದು ವರ್ಷದಲ್ಲಿಯೇ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ ಹೀಗಾಗಿದೆ . ಗ್ಯಾರಂಟಿ ಕೊಟ್ಟರೂ ಲೋಕಸಭೆಯಲ್ಲಿ ಬಹುಪಾಲು ಬಿಜೆಪಿ ಮುಂದಿತ್ತು , ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ . ಈ ಎಲ್ಲ ಪರಿಣಾಮ ರಾಜ್ಯದ ಆಡಳಿತ ಮೇಲೆ ಆಗುತ್ತಿದೆ . ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತ ನಿಷ್ಕ್ರಿಯಗೊಳ್ಳುತ್ತಿದೆ ಎಂದರು.

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿಲ್ಲ , ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ಆಗುತ್ತಿಲ್ಲ , ರಾಜ್ಯ ಸರ್ಕಾರದ ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಸಮಸ್ಯೆ ಕಡೆ ಗಮನ ಹರಿಸಬೇಕು . ಬೆಲೆ ಏರಿಕೆ ಮಾಡಿ , ಜನರಿಂದ ಹಣ ಪಡೆದು ಜನರಿಗೆ ಕೊಡುತ್ತಿದ್ದಾರೆ . ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಸಿದುಕೊಳ್ಳುತ್ತಿದ್ದು , ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ವಿಫಲ ಮುಖ್ಯಮಂತ್ರಿ ಎಂದು ಕಿಡಿಕಾರಿದರು .

ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಬೀಳಿಸುವ ಬಿಜೆಪಿ ಮುಖಂಡರ ಹೇಳಿಕೆ ವಿಚಾರವಾಗಿ ಈ ಕುರಿತು ನಾನು ಮೊದಲು ಪತ್ರಿಕ್ರಿಯೆ ನೀಡಿರಲಿಲ್ಲ , ಈಗಲೂ ಪ್ರತಿಕ್ರಿಯೆಸಲಾರೆ ಎಂದರು .

ಐದು ವರ್ಷ ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ . ಜನತೆಯ ಆದೇಶ ಐದು ವರ್ಷ ಇರುತ್ತದೆ . ಐದು ವರ್ಷ ಚೆನ್ನಾಗಿ ಆಡಳಿತ ನಡೆಸಿ ಎಂದು ನಾವು ಹೇಳುತ್ತೇವೆ . ಅವರ ಆಂತರಿಕ ಕಾರಣದಿಂದ ಸರಕಾರ ಬಿದ್ದರೆ ನಾವು ಜವಾಬ್ದಾರರಲ್ಲ, ಆ ಮೇಲೆ ಅದಕ್ಕೆ ಅಪರೇಷನ್ ಕಮಲ ಅಂತಾ ಅವರೇ ಹೇಳುವುದು ಸರಿಯಲ್ಲ. ಆದರೆ ಬಿಜೆಪಿ ಈ ವಿಚಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಮಾಜ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ . ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿನ ವೀರಶೈವ ಪದ ತೆಗೆದುಹಾಕುವುದು ಸರಿಯಲ್ಲ, ವೀರಶೈವ ಲಿಂಗಾಯತ ಅಂತಾ ಮೊದಲು ಇತ್ತು . ಈಗ ವೀರಶೈವ ಪದ ತೆಗೆದಿದ್ದಾರೆ . ಅನಗತ್ಯವಾಗಿ ಕಿಚ್ಚು ಹಚ್ಚುವ ಕೆಲಸ ಮಾಡಿದ್ದಾರೆ ಎಂದರು‌.

ಟಾಪ್ ನ್ಯೂಸ್

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

MUST WATCH

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

ಹೊಸ ಸೇರ್ಪಡೆ

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.