Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

ಸಾರ್ವಜನಿಕರು ಕಾನೂನು ಬಾಹಿರವಾಗಿ ಮನೆ ಕಟ್ಟಿಕೊಳ್ಳಬೇಡಿ: ಸಿಎಂ

Team Udayavani, Oct 25, 2024, 12:51 AM IST

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

ಬೆಂಗಳೂರು: ಜನರು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಿಕೊಳ್ಳಬಾರದು. ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಗಳುಗಳ ಆರೋಗ್ಯ ವಿಚಾರಿಸಿದರು.

ಕಾಮಗಾರಿ ನಿಲ್ಲಿಸುವಂತೆ ನೋಟಿಸ್‌ ನೀಡಿದ ಅನಂತರವೂ ಕಟ್ಟಡ ಮಾಲಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ ಈ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು. ಜತೆಗೆ ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೆ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ಅಧಿಕಾರಿಗಳೇ ಹೊಣೆ
ಈ ಕಟ್ಟಡ ಕುಸಿತ ನಡೆದಿರುವುದು ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ ನೀಡಿದರು.

ಮೃತ ಕುಟುಂಬಕ್ಕೆ 5 ಲಕ್ಷ ರೂ.
ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹೇಳಿದರು. ಸಾವನ್ನಪ್ಪಿರುವ 8 ಜನರಿಗೆ ಕಾರ್ಮಿಕ ಇಲಾಖೆಯಿಂದ ತಲಾ ತಲಾ 2 ಲಕ್ಷ ರೂ., ಬಿಬಿಎಂಪಿಯಿಂದ 3 ಲಕ್ಷ ರೂ. ಸೇರಿ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

High Court: ಕೇತಗಾನಹಳ್ಳಿ ಭೂ-ಕಬಳಿಕೆ ಪ್ರಕರಣ: ಹೊಸ ತನಿಖೆಗೆ ಹೈಕೋರ್ಟ್‌ ನಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.