ಏಕಕಾಲಕ್ಕೆ ಚುನಾವಣೆ ಅಸಾಧ್ಯ: ಖರ್ಗೆ
Team Udayavani, Jun 25, 2019, 3:07 AM IST
ಕಲಬುರಗಿ: “ರಾಷ್ಟ್ರದಲ್ಲಿ ಏಕಕಾಲಕ್ಕೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವ ಕುರಿತು ಕೇಂದ್ರ ಸರ್ಕಾರ ಮತ್ತೆ ಚರ್ಚೆ ನಡೆಸುತ್ತಿರುವುದು ಸಮಂಜಸವಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದ್ಹೇಗೆ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಸಾಧ್ಯ? ಏಕಕಾಲಕ್ಕೆ ಚುನಾವಣೆ ನಡೆಸುವುದು ಅಸಾಧ್ಯ ಎಂದರು.
ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಟ್ಟಿರುವ ಎಲ್ಲ ರಾಷ್ಟ್ರಗಳು ಮತದಾನಕ್ಕಾಗಿ ಬ್ಯಾಲೆಟ್ ಪೇಪರ್ (ಮತಪತ್ರ) ಅನ್ನೇ ಬಳಸುತ್ತಾರೆ. ಇದುವೇ ಅತ್ಯಂತ ಸುರಕ್ಷಿತ ಮತ್ತು ಸಂವಿಧಾನವಾಗಿ ಒಪ್ಪಿರುವ ಚುನಾವಣಾ ಪದ್ಧತಿ. ಇದನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರೇ ಹೇಳುತ್ತಿದ್ದಾರೆ. ದೇಶದ ಜನರು ಸಹ ಇದನ್ನೇ ಬಯಸುತ್ತಾರೆ ಎಂದು ತಿಳಿಸಿದರು.
ವಿದ್ಯುನ್ಮಾನ ಮತಯಂತ್ರಗಳಿಗೆ ಬಳಸುವ ಚಿಪ್ ಉತ್ಪಾದಿಸುವ ಜಪಾನ್ ದೇಶದಲ್ಲೇ ಅದನ್ನು ಬಳಸುವುದಿಲ್ಲ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು. ಅಲ್ಲಿ ಬಳಸದಿರುವುದನ್ನು ನಾವಿಲ್ಲಿ ಬಳಸುತ್ತಿದ್ದೇವೆ. ವಿಶ್ವದ ಯಾವ ರಾಷ್ಟ್ರದಲ್ಲಿಯೂ ಇವಿಎಂ ಬಳಸುತ್ತಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರು ಯೋಚನೆ ಮಾಡಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಖರ್ಗೆ, ಮಧ್ಯಂತರ ಚುನಾವಣೆ ಮತ್ತಿನ್ನಿತರ ಯಾವುದೇ ವಿಷಯದ ಕುರಿತು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.